ಯು ಜಿ ಡಿ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ನಗರಸಭೆ ಎದುರು ಚಂದ್ರಮೌಳೇಶ್ವರ ಲೇಔಟ್ ನ ನಿವಾಸಿಗಳ ಪ್ರತಿಭಟನೆ

ಮಳೆ ಬಂದಾಗ ಮಳೆ ನೀರಿನ‌ ಜೊತೆ ಕೊಳಚೆ ನೀರು ಮನೆಗಳಿಗೆ ನುಗ್ಗಿ ಅವಾಂತರ‌ ಸೃಷ್ಟಿಯಾಗುತ್ತಿದೆ. ಮನೆಗಳಲ್ಲಿ ನೆಮ್ಮದಿಯಿಂದ ವಾಸ ಮಾಡಲು‌ ಪರಿತಪಿಸುವಂತಾಗಿದೆ. ಯು ಜಿ ಡಿ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ನಗರಸಭೆಗೆ ಹಲವು ಬಾರಿ ತಿಳಿಸಿದರೂ ಏನೂ ಪ್ರಯೋಜನವಾಗಲಿಲ್ಲ ಎಂದು ಸ್ಥಳೀಯ‌ ನಿವಾಸಿ ವಸಂತ್ ಕುಮಾರ್ ಅವರು ನಗರಸಭೆ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ ವ್ಯಕ್ತಪಡಿಸಿದರು.

ಯು ಜಿ ಡಿ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ಚಂದ್ರಮೌಳೇಶ್ವರ ಲೇಔಟ್ ನ ನಿವಾಸಿಗಳು ನಗರಸಭೆ ಮುಂಭಾಗ ಪ್ರತಿಭಟನೆ ನಡೆಸಿ ಮಾತನಾಡಿದ ಅವರು, 2020ರಿಂದ ನಿರಂತರವಾಗಿ ನಗರಸಭೆಗೆ ಮನವಿ ಸಲ್ಲಿಸಿದರು ಯಾವುದೇ ಪ್ರಯೋಜನವಾಗುತ್ತಿಲ್ಲ ಅಧಿಕಾರಿಗಳಾಗಲಿ, ಜನಪ್ರತಿನಿಧಿಗಳಾಗಲಿ ಸಮಸ್ಯೆಗೆ ಪರಿಹಾರ ನೀಡಲು ಮುಂದಾಗುತ್ತಿಲ್ಲ ಎಂದು ದೂರಿದರು.

ತಾತ್ಕಾಲಿಕವಾಗಿ ಎಸ್ ಟಿ ಪಿ ಘಟಕವನ್ನು ಸರಿಪಡಿಸುವ ಮೂಲಕ ಜಾರಿಕೊಳ್ಳುವ ಅಧಿಕಾರಿಗಳು, ನಮಗೆ ಶಾಶ್ವತ ಪರಿಹಾರ ಕೊಡುವಲ್ಲಿ ವಿಫಲರಾಗಿದ್ದಾರೆ. ನಮಗೆ ಕೊಳಚೆ ನೀರಿನ ಸಮಸ್ಯೆಯಿಂದ ಶಾಶ್ವತ ಪರಿಹಾರ ಬೇಕಿದೆ ಎಂದು ಆಗ್ರಹಿಸಿದರು.

ಕೊಳಚೆ ನೀರು ಮನೆಯ ಮುಂಭಾಗ ಹರಿಯುವ ಕಾರಣ ಮಕ್ಕಳಲ್ಲಿ ಹಲವಾರು ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿವೆ. ನಮ್ಮ ಸಮಸ್ಯೆಯನ್ನು ಅರಿತು ನಗರಸಭಾ ಅಧಿಕಾರಿಗಳು ಈ ಸಮಸ್ಯೆಗೆ ಪರಿಹಾರ ಒದಗಿಸಬೇಕೆಂದು ಒತ್ತಾಯಿಸಿದರು.

ನಂತರ ಸೌಮ್ಯ ಮಾತನಾಡಿ, ಯುಜಿಡಿ ನೀರಿನ ಕೆಟ್ಟವಾಸನೆಯಿಂದಾಗಿ ಮನೆಯಲ್ಲಿ ಊಟ ಮಾಡಲು ಸಾಧ್ಯವಾಗುತ್ತಿಲ್ಲ. ನಮ್ಮ ಸಮಸ್ಯೆ ಅಧಿಕಾರಿಗಳ ಕಣ್ಣಿಗೆ ಕಾಣುತಿಲ್ಲ. ಮತ ಕೇಳಲು ಬರುವ ಜನಪ್ರತಿನಿಧಿಗಳು ಮೌನವಹಿಸಿರುವುದು ಸರಿಯಲ್ಲ. ನಮ್ಮ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಿ ಎಂಬುದೇ ನಮ್ಮೆಲ್ಲರ ಒತ್ತಾಯ ಎಂದರು.

ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ರವಿ ವಡ್ಡರಹಳ್ಳಿ ಮಾತನಾಡಿ, ಚಂದ್ರಮೌಳೇಶ್ವರ ಲೇಔಟನ್ನು 2005 ರಲ್ಲಿ ಮಾಡಲಾಗಿದ್ದು,  ಲೇಔಟ್ ನಿರ್ಮಾಣದ ಸಂದರ್ಭದಲ್ಲಿ ಒಳಚರಂಡಿ ವ್ಯವಸ್ಥೆ ಕಲ್ಪಿಸಲು ಪೈಪ್ ಲೈನ್ ಮಾಡಿದ್ದು, ಲೇಔಟ್ ತಗ್ಗು ಪ್ರದೇಶದಲ್ಲಿರುವ ಕಾರಣ ಕೊಳಚೆ ನೀರು ಸರಾಗವಾಗಿ ಹರಿಯಲು ಸಾಧ್ಯವಾಗುತ್ತಿಲ್ಲ. ಈ ಸಮಸ್ಯೆ ಪರಿಹರಿಸಲು ಸ್ಥಳೀಯವಾಗಿ ಎಸ್ ಟಿ ಪಿ ಘಟಕದ ಸ್ಥಾಪನೆ ಮಾಡಲಾಗಿದೆ. ಮಳೆ ಹೆಚ್ಚಾದಾಗ ಈ ಘಟಕವು ಸಂಪೂರ್ಣ ತುಂಬಿಹೋಗುತ್ತದೆ. ನೀರಿನ ಹರಿವು ಸರಾಗವಾಗಿ ಆಗದ ಕಾರಣ ಚೇಂಬರ್ ಗಳಲ್ಲಿ ಹುಕ್ಕುತ್ತದೆ. ಈ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಲು ಸರ್ಕಾರಕ್ಕೆ 3 ಹಂತದ ಒಳಚರಂಡಿ ಯೋಜನೆಯಲ್ಲಿ ಪ್ರಸ್ತವನೆ ಸಲ್ಲಿಸಿದ್ದು. ಸರ್ಕಾರದ ಅನುಮೋದನೆ ದೊರೆತ ಕೂಡಲೇ ಕಾಮಗಾರಿ ಕೈಗೊಳ್ಳಲಾಗುವುದು. ಅಲ್ಲಿಯವರೆಗೂ ನಗರಸಭೆ ವತಿಯಿಂದ ಸ್ಥಳೀಯರಿಗೆ ತಾತ್ಕಾಲಿಕವಾಗಿ ಪರಿಹಾರ ನೀಡಲು ಸಹಕರಿಸಲಾಗುವುದು ಎಂದರು.

ಪ್ರತಿಭಟನೆಯಲ್ಲಿ ಬಡಾವಣೆ ನಿವಾಸಿಗಳಾದ ರವಿಕುಮಾರ್, ವಸಂತ್, ನಾಗೇಶ್, ಸೌಮ್ಯ, ರವಿ, ಮಂಜುಳಾ, ಪ್ರಿಯಾಂಕಾ, ಶ್ರೀನಿವಾಸ್, ಮುಂತಾದವರು ಇದ್ದರು.

Ramesh Babu

Journalist

Recent Posts

ಬೈಕ್ ಕಳ್ಳತನ ಪ್ರಕರಣ ಭೇದಿಸಿದ ವಿಜಯಪುರ ಪೊಲೀಸರು; ಲಕ್ಷಾಂತರ ಮೌಲ್ಯದ 42 ದ್ವಿಚಕ್ರ ವಾಹನ ವಶ

ವಿಜಯಪುರ (ದೇವನಹಳ್ಳಿ): ಮನೆಗಳ ಮುಂಭಾಗ ಹಾಗೂ ಸಾರ್ವಜನಿಕ ಪಾರ್ಕಿಂಗ್ ಪ್ರದೇಶಗಳಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ವಿಜಯಪುರ…

3 hours ago

ಪರೀಕ್ಷಾ ಅಕ್ರಮಗಳು……

ನೀಟ್ ಪ್ರವೇಶ ಪರೀಕ್ಷೆ.... ಆಡಳಿತಗಾರ ರಾಜಕಾರಣಿಗಳ ಸಂಪೂರ್ಣ ವೈಫಲ್ಯ, ಅಧಿಕಾರಿಗಳ ಬ್ರಹ್ಮಾಂಡ ಭ್ರಷ್ಟಾಚಾರ, ಪೋಷಕರ ಅತಿಯಾದ ದುರಾಸೆ, ವಿದ್ಯಾರ್ಥಿಗಳ ನಿರ್ಲಜ್ಜತೆ…

5 hours ago

ಮುತ್ತತ್ತಿಯಲ್ಲಿ ದುರಂತ: ಕಾವೇರಿ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ ಐವರು ಸಾವು

ರಾಮನಗರ: ಮುತ್ತತ್ತಿಯ ಕಾವೇರಿ ನದಿಯಲ್ಲಿ ಫೋಟೋ ತೆಗೆಯಲು ನೀರಿಗೆ ಇಳಿದ ವೇಳೆ ಸಂಭವಿಸಿದ ದುರಂತದಲ್ಲಿ ಒಂದೇ ಕುಟುಂಬದ ಐವರು ನೀರಿನಲ್ಲಿ…

6 hours ago

ಹುಸ್ಕೂರಲ್ಲಿ ಶ್ರೀ ಸಪ್ಪಲಮ್ಮದೇವಿ–ದುರ್ಗಮ್ಮದೇವಿ ಜಾತ್ರಾ ಮಹೋತ್ಸವ ಸಂಭ್ರಮ

ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಸ್ಕೂರು ಗ್ರಾಮದಲ್ಲಿ ಶ್ರೀ ಸಪ್ಪಲಮ್ಮದೇವಿ ಹಾಗೂ ಶ್ರೀ ದುರ್ಗಮ್ಮದೇವಿ ಜಾತ್ರಾ ಮಹೋತ್ಸವವು ಭಕ್ತಿಭಾವ ಮತ್ತು ಸಡಗರದಿಂದ ನಡೆಯಿತು.…

20 hours ago

ಗೊಬ್ಬರದ ಚೀಲಗಳಡಿ ₹1.65 ಕೋಟಿ ಮೌಲ್ಯದ ಗೋವಾ ಮದ್ಯ ಸಾಗಾಟ: ವಿಜಯಪುರ ಪೊಲೀಸರಿಂದ ಅಂತರರಾಜ್ಯ ಜಾಲ ಪತ್ತೆ

ವಿಜಯಪುರ: ಗೋವಾದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಕೋಟಿ ಕೋಟಿ ರೂಪಾಯಿ ಮೌಲ್ಯದ ಮದ್ಯವನ್ನು ವಿಜಯಪುರ ಪೊಲೀಸರು ವಶಪಡಿಸಿಕೊಂಡಿದ್ದು, ಈ ವೇಳೆ…

22 hours ago

ಡೀಸೆಲ್ ದುಬಾರಿ, ಎತ್ತುಗಳ ಕೊರತೆ; ಸೈಕಲ್‌ಗೆ ಕುಂಟೆ ಜೋಡಿಸಿ ಕೃಷಿಯಲ್ಲಿ ಹೊಸ ಪ್ರಯೋಗ ಮಾಡಿದ ರೈತ ದಂಪತಿ

ದಾವಣಗೆರೆ: ಎತ್ತುಗಳ ಕೊರತೆ ಹಾಗೂ ಟ್ರ್ಯಾಕ್ಟರ್‌ಗಳಿಗೆ ಹೆಚ್ಚುತ್ತಿರುವ ಡೀಸೆಲ್ ವೆಚ್ಚದ ನಡುವೆಯೇ ದಾವಣಗೆರೆ ಜಿಲ್ಲೆಯ ರೈತ ದಂಪತಿಯೊಬ್ಬರು ಕೃಷಿ ಕಾರ್ಯಕ್ಕೆ…

1 day ago