ಬೆಂ.ಗ್ರಾ.ಜಿಲ್ಲೆ.ಜೂನ್13(ಕ.ವಾ): ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿಗೆ ಯು.ಪಿ.ಎಸ್.ಸಿ ಮುಖ್ಯ ಪರೀಕ್ಷಾ ಪೂರ್ವ ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ತರಬೇತಿ ಅವಧಿ 3 ತಿಂಗಳು ಆಗಿದ್ದು, ಬೆಂಗಳೂರಿನ ಹಜ್ ಭವನದಲ್ಲಿ ವಸತಿಯುತ ತರಬೇತಿ ಅಥವಾ ಶಿಷ್ಯ ವೇತನದೊಂದಿಗೆ ಬೆಂಗಳೂರು ಹೊರತು ಪಡಿಸಿ ಪ್ರತಿಷ್ಠಿತ ಸಂಸ್ಥೆಯ ಮೂಲಕ ತರಬೇತಿಯನ್ನು ನೀಡಲಾಗುವುದು.
ಅರ್ಜಿ ಸಲ್ಲಿಸಲು https://dom.karnataka.gov.in ವೆಬ್ಸೈಟ್ ಅಥವಾ ಅಲ್ಪಸಂಖ್ಯಾತರ ನಿರ್ದೇಶನಾಲಯ, ನಂ 16ಸಿ, ಮಿಲ್ಲರ್ಸ್ ಟ್ಯಾಂಕ್ ಬೆಡ್ ರಸ್ತೆ, ವಸಂತ ನಗರ, ಬೆಂಗಳೂರು 560052 ಗೆ ಕಳುಹಿಸಬಹುದಾಗಿದೆ. ಜೂನ್ 21 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿರುತ್ತದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಯು 21 ರಿಂದ 35 ವರ್ಷ ಒಳಗಿನವರಾಗಿರಬೇಕು. ಅಭ್ಯರ್ಥಿಯು ಕರ್ನಾಟಕದ ಖಾಯಂ ನಿವಾಸಿಯಾಗಿದ್ದು ರಾಜ್ಯದ ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದವರಾಗಿರಬೇಕು ಹಾಗೂ ಯು.ಪಿ.ಎಸ್.ಸಿ ಪೂರ್ವಭಾವಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ನಿಗದಿತ ನಮೂನೆಯಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆದಿರಬೇಕು.
ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಸಹಾಯವಾಣಿ ಸಂಖ್ಯೆ: 8277799990 ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…
ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…
ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…
ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…
ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…
ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…