ಯೂಟ್ಯೂಬ್ ನೋಡಿ‌ ಮೋಸ ಹೋದ ಬಟ್ಟೆ ವ್ಯಾಪಾರಿ

ಬಾಬಾ ಜಮೀರ್ ಖಾನ್ ರವರು ಕಳೆದ 7 ವರ್ಷಗಳಿಂದ ಬಟ್ಟೆ ವ್ಯಾಪಾರ ಮಾಡುತ್ತಿರುತ್ತಾರೆ. ಇಷ್ಟೂ ದಿನ ಬಟ್ಟೆಗಳನ್ನು ವ್ಯಾಪಾರ ಮಾಡಲು ಬೆಂಗಳೂರಿನ ಚಿಕ್ಕಪೇಟೆಯಲ್ಲಿ ತರಿಸಿಕೊಳ್ಳುತ್ತಿದ್ದರು.

ಹೀಗೆ ಒಂದು ದಿನ ಯೂಟ್ಯೂಬ್ ನೋಡುತ್ತಿದಾಗ‌, ಕಡಿಮೆ ಬೆಲೆಗೆ ಬಟ್ಟೆಗಳನ್ನು ಮಾರಾಟ ಮಾಡುತ್ತೇವೆ ಎಂದು ವಿಡಿಯೋ ಮಾಡಿ ಯೂಟ್ಯೂಬ್ ನಲ್ಲಿ ದೆಹಲಿ ಮೂಲದ ವ್ಯಕ್ತಿಯೊಬ್ಬರು ಅಪ್ ಲೋಡ್ ಮಾಡಿದ್ದ ವಿಡಿಯೋ ಇವರ ಕಣ್ಣಿಗೆ ಬೀಳುತ್ತದೆ.

ವಿಡಿಯೋ ನೋಡಿದ ಕೂಡಲೇ ದೆಹಲಿಯಿಂದ ಕಡಿಮೆ ಬೆಲೆಗೆ ಬಟ್ಟೆಗಳನ್ನು ತರಿಸಿಕೊಳ್ಳಲು ತೀರ್ಮಾನ‌ ಮಾಡುತ್ತಾರೆ.

ಆ ಯೂಟ್ಯೂಬ್ ಚಾನಲ್ ನಲ್ಲಿ ಅಪ್ ಲೋಡ್ ಮಾಡಿದ್ದ ವಿಡಿಯೋದಲ್ಲಿ ಕೆಲ ಮೊಬೈಲ್ ನಂಬರ್ ಗಳು ಹಾಗೂ ವಿಳಾಸವನ್ನು ಹಾಕಿದ್ದರು. ವಿಡಿಯೋದಲ್ಲಿದ್ದ ಫೋನ್ ನಂಬರ್ ಗೆ ಮಾರ್ಚ್ ತಿಂಗಳಲ್ಲಿ ಫೋನ್ ಮಾಡಿ ನೈಟ್ ಪ್ಯಾಂಟ್ ಗಳು ಬೇಕು, ಒಂದು ನೈಟ್ ಪ್ಯಾಂಟ್ ಬೆಲೆ ಎಷ್ಟು ಎಂದು ಫೋನ್ ಮಾಡಿ ವಿಚಾರಿಸುತ್ತಾರೆ. ಆಗ ಅವರು‌ ಒಂದು ನೈಟ್ ಪ್ಯಾಂಟ್ ಬೆಲೆ 160 ಎಂದು ಹೇಳುತ್ತಾರೆ.

ಇದನ್ನು ಕೇಳಿದ ತಕ್ಷಣ ಇವರ ಬಳಿ ಕಡಿಮೆ ಬೆಲೆಗೆ ಬಟ್ಟೆಗಳು ಸಿಗುತ್ತದೆ ಎಂದು ಯೋಚಿಸಿ, 54ಸಾವಿರು ರೂ. ಮೌಲ್ಯದ ನೈಟ್ ಪ್ಯಾಂಟ್ ಗಳು ಬೇಕು ಎಂದು ಕೇಳುತ್ತಾರೆ. ಆಗ ಅವರು ಫೋನ್ ಪೇ ನಂಬರ್ ಕೊಡುತ್ತೇವೆ ಆ ನಂಬರ್ ಗೆ ಹಣ ಹಾಕಿ ಎಂದು ತಿಳಿಸುತ್ತಾರೆ. ಅಂದು ಅಷ್ಟು ಹಣ ಇಲ್ಲದ ಕಾರಣ ಆ ದಿನ ಫೋನ್ ಪೇ ಮಾಡಿರುವುದಿಲ್ಲ. ಮಾ.18 ರಂದು 51 ಸಾವಿರ ರೂ. ಫೋನ್ ಪೇ‌ ಮಾಡುತ್ತಾರೆ.

ಫೋನ್ ಪೇ ಮಾಡಿದ 10ದಿನಗಳಲ್ಲಿ ನೈಟ್ ಪ್ಯಾಂಟ್ ಗಳನ್ನು ಕಳುಹಿಸುತ್ತೇವೆ ಎಂದು ತಿಳಿಸಿದ್ದರು, ಆದರೆ 10 ದಿನಗಳು ಕಳೆದರೂ ನೈಟ್ ಪ್ಯಾಂಟ್ ಗಳು ಕೊರಿಯರ್ ಮೂಲಕ ಬಂದಿರುವುದಿಲ್ಲ. ತಡವಾದ ಹಿನ್ನೆಲೆ ಮತ್ತೆ ಫೋನ್ ಮಾಡಿ ಕೇಳಿದಾಗ, ಅವರು ಇವತ್ತು ಬರುತ್ತೆ ನಾಳೆ ಬರುತ್ತೆ ಎಂದು ಹೇಳಿ ವಂಚನೆ ಮಾಡುತ್ತಿದ್ದರು.

ದೆಹಲಿ ಮೂಲದ ವ್ಯಕ್ತಿ ಮೋಸ ಮಾಡಿದ್ದಾರೆ ಎಂದು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

Ramesh Babu

Journalist

Recent Posts

ಬೇಸಿಗೆ ಆರಂಭದಲ್ಲಿಯೇ ನಗರ ವ್ಯಾಪ್ತಿಯಲ್ಲಿ ನೀರಿಗೆ ಪರದಾಟ: ನೀರಿನ ಸಮಸ್ಯೆ ನೀಗಿಸುವಂತೆ ನಗರಸಭೆ ಸದಸ್ಯರ ಒತ್ತಾಯ

ಬೇಸಿಗೆ ಆರಂಭದಲ್ಲಿಯೇ ನಗರ ವ್ಯಾಪ್ತಿಯಲ್ಲಿ ನೀರಿಗೆ ಪರದಾಟ ಆರಂಭವಾಗಿದ್ದು, ನಗರಸಭೆಯಿಂದ ವಾರಕ್ಕೊಮ್ಮೆ ಕೇವಲ ಅರ್ಧ ಗಂಟೆ ನೀರು ಬಿಡುತ್ತಿರುವುದು ಸರಿಯಲ್ಲ.…

2 hours ago

ಗೃಹ ಅನಿಲ ಸೀಮಿತ ಬಳಕೆಗೆ ಡಿಸಿ ಸಲಹೆ: ಕಾಳಸಂತೆಯಲ್ಲಿ ಗ್ಯಾಸ್ ಸಿಲಿಂಡರ್ ಮಾರಾಟ ಮಾಡಿದರೆ ಕಠಿಣ ಕ್ರಮ: ಜಿಲ್ಲಾಧಿಕಾರಿ ಡಾ.ಕೆ ಎನ್ ಅನುರಾಧಾ

ಕೊಲ್ಲಿ ರಾಷ್ಟ್ರಗಳ ಯುದ್ಧದ ಹಿನ್ನೆಲೆಯಲ್ಲಿ ಗ್ಯಾಸ್ ಸಿಲಿಂಡರ್ ಅಭಾವ ಮುಂದಿಟ್ಟುಕೊಂಡು ಕಾಳ ಸಂತೆಯಲ್ಲಿ ಸಿಲಿಂಡರ್ ಮಾರಾಟ ಮಾಡಿದರೆ ಅಂತಹ ಗ್ಯಾಸ್…

3 hours ago

ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ

ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ ಸಂಭವಿಸಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಚೆನ್ನಾದೇವಿ ಅಗ್ರಹಾರದ ಪೆಟ್ರೋಲ್ ಬಂಕ್ ಸಮೀಪ ನಡೆದಿದೆ....…

15 hours ago

9 ತಿಂಗಳಲ್ಲಿ ಬಮೂಲ್ ಒಕ್ಕೂಟಕ್ಕೆ 60 ಕೋಟಿ ಲಾಭ: ಸಂಪೂರ್ಣ ರೈತರ ಖಾತೆಗೆ ಲಾಭಾಂಶ ಹಣ

ಪಶು ಆಹಾರಗಳ ಬೆಲೆ ಏರಿಕೆ.. ಬೇಸಿಗೆಯಿಂದಾಗಿ ಹಾಲು ಉತ್ಪಾದನೆ ಕುಂಠಿತ.. ಹಸುಗಳಲ್ಲಿ ಹೆಚ್ಚಿದ ಕೆಚ್ಚಲುಬಾವು ರೋಗ.. ರಾಸುಗಳಿಗೆ ಮೇವು ಇಲ್ಲದೆ…

1 day ago