ಯೂಟ್ಯೂಬ್ ನೋಡಿ‌ ಮೋಸ ಹೋದ ಬಟ್ಟೆ ವ್ಯಾಪಾರಿ

ಬಾಬಾ ಜಮೀರ್ ಖಾನ್ ರವರು ಕಳೆದ 7 ವರ್ಷಗಳಿಂದ ಬಟ್ಟೆ ವ್ಯಾಪಾರ ಮಾಡುತ್ತಿರುತ್ತಾರೆ. ಇಷ್ಟೂ ದಿನ ಬಟ್ಟೆಗಳನ್ನು ವ್ಯಾಪಾರ ಮಾಡಲು ಬೆಂಗಳೂರಿನ ಚಿಕ್ಕಪೇಟೆಯಲ್ಲಿ ತರಿಸಿಕೊಳ್ಳುತ್ತಿದ್ದರು.

ಹೀಗೆ ಒಂದು ದಿನ ಯೂಟ್ಯೂಬ್ ನೋಡುತ್ತಿದಾಗ‌, ಕಡಿಮೆ ಬೆಲೆಗೆ ಬಟ್ಟೆಗಳನ್ನು ಮಾರಾಟ ಮಾಡುತ್ತೇವೆ ಎಂದು ವಿಡಿಯೋ ಮಾಡಿ ಯೂಟ್ಯೂಬ್ ನಲ್ಲಿ ದೆಹಲಿ ಮೂಲದ ವ್ಯಕ್ತಿಯೊಬ್ಬರು ಅಪ್ ಲೋಡ್ ಮಾಡಿದ್ದ ವಿಡಿಯೋ ಇವರ ಕಣ್ಣಿಗೆ ಬೀಳುತ್ತದೆ.

ವಿಡಿಯೋ ನೋಡಿದ ಕೂಡಲೇ ದೆಹಲಿಯಿಂದ ಕಡಿಮೆ ಬೆಲೆಗೆ ಬಟ್ಟೆಗಳನ್ನು ತರಿಸಿಕೊಳ್ಳಲು ತೀರ್ಮಾನ‌ ಮಾಡುತ್ತಾರೆ.

ಆ ಯೂಟ್ಯೂಬ್ ಚಾನಲ್ ನಲ್ಲಿ ಅಪ್ ಲೋಡ್ ಮಾಡಿದ್ದ ವಿಡಿಯೋದಲ್ಲಿ ಕೆಲ ಮೊಬೈಲ್ ನಂಬರ್ ಗಳು ಹಾಗೂ ವಿಳಾಸವನ್ನು ಹಾಕಿದ್ದರು. ವಿಡಿಯೋದಲ್ಲಿದ್ದ ಫೋನ್ ನಂಬರ್ ಗೆ ಮಾರ್ಚ್ ತಿಂಗಳಲ್ಲಿ ಫೋನ್ ಮಾಡಿ ನೈಟ್ ಪ್ಯಾಂಟ್ ಗಳು ಬೇಕು, ಒಂದು ನೈಟ್ ಪ್ಯಾಂಟ್ ಬೆಲೆ ಎಷ್ಟು ಎಂದು ಫೋನ್ ಮಾಡಿ ವಿಚಾರಿಸುತ್ತಾರೆ. ಆಗ ಅವರು‌ ಒಂದು ನೈಟ್ ಪ್ಯಾಂಟ್ ಬೆಲೆ 160 ಎಂದು ಹೇಳುತ್ತಾರೆ.

ಇದನ್ನು ಕೇಳಿದ ತಕ್ಷಣ ಇವರ ಬಳಿ ಕಡಿಮೆ ಬೆಲೆಗೆ ಬಟ್ಟೆಗಳು ಸಿಗುತ್ತದೆ ಎಂದು ಯೋಚಿಸಿ, 54ಸಾವಿರು ರೂ. ಮೌಲ್ಯದ ನೈಟ್ ಪ್ಯಾಂಟ್ ಗಳು ಬೇಕು ಎಂದು ಕೇಳುತ್ತಾರೆ. ಆಗ ಅವರು ಫೋನ್ ಪೇ ನಂಬರ್ ಕೊಡುತ್ತೇವೆ ಆ ನಂಬರ್ ಗೆ ಹಣ ಹಾಕಿ ಎಂದು ತಿಳಿಸುತ್ತಾರೆ. ಅಂದು ಅಷ್ಟು ಹಣ ಇಲ್ಲದ ಕಾರಣ ಆ ದಿನ ಫೋನ್ ಪೇ ಮಾಡಿರುವುದಿಲ್ಲ. ಮಾ.18 ರಂದು 51 ಸಾವಿರ ರೂ. ಫೋನ್ ಪೇ‌ ಮಾಡುತ್ತಾರೆ.

ಫೋನ್ ಪೇ ಮಾಡಿದ 10ದಿನಗಳಲ್ಲಿ ನೈಟ್ ಪ್ಯಾಂಟ್ ಗಳನ್ನು ಕಳುಹಿಸುತ್ತೇವೆ ಎಂದು ತಿಳಿಸಿದ್ದರು, ಆದರೆ 10 ದಿನಗಳು ಕಳೆದರೂ ನೈಟ್ ಪ್ಯಾಂಟ್ ಗಳು ಕೊರಿಯರ್ ಮೂಲಕ ಬಂದಿರುವುದಿಲ್ಲ. ತಡವಾದ ಹಿನ್ನೆಲೆ ಮತ್ತೆ ಫೋನ್ ಮಾಡಿ ಕೇಳಿದಾಗ, ಅವರು ಇವತ್ತು ಬರುತ್ತೆ ನಾಳೆ ಬರುತ್ತೆ ಎಂದು ಹೇಳಿ ವಂಚನೆ ಮಾಡುತ್ತಿದ್ದರು.

ದೆಹಲಿ ಮೂಲದ ವ್ಯಕ್ತಿ ಮೋಸ ಮಾಡಿದ್ದಾರೆ ಎಂದು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

Ramesh Babu

Journalist

Recent Posts

ಪ್ರಧಾನಿ ನರೇಂದ್ರ ಮೋದಿಯನ್ನ ಭೇಟಿಯಾದ ಸಿಎಂ ಸಿದ್ದರಾಮಯ್ಯ:ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ: ಬೇಡಿಕೆ ಯಾವುದು….?

ದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು…

1 hour ago

ಕಡೇ ಕಾರ್ತೀಕ ಸೋಮವಾರ: ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ದೇವಾಲಯದಲ್ಲಿ ಲಕ್ಷ ದೀಪೋತ್ಸವ

ದೂಡ್ಡಬಳ್ಳಾಪುರದ ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ಸ್ವಾಮಿಯವರ ದೇವಾಲಯದಲ್ಲಿ ಕಡೇ ಕಾರ್ತೀಕ ಸೋಮವಾರ ಪ್ರಯುಕ್ತ ಈ ದಿನ ಬೆಳಿಗ್ಗೆ ಗಣಪತಿ…

3 hours ago

ನಾಳೆ (ನ.18) ತಾಲೂಕಿನ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ವಿದ್ಯುತ್ ಅಡಚಣೆಯಾಗುವ ಪ್ರದೇಶಗಳ ಪಟ್ಟಿ ಇಲ್ಲಿದೆ ನೋಡಿ….

ದೊಡ್ಡಬಳ್ಳಾಪುರ: ನಾಳೆ (ನ.18) ನಗರದ ಹೊರವಲಯದಲ್ಲಿರುವ 66/11ಕಿವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ತಾಲೂಕಿನ ಹಲವೆಡೆ ವಿದ್ಯುತ್‌…

4 hours ago

18 ದೇವಸ್ಥಾನಗಳಿಗೆ ಕನ್ನ ಹಾಕಿದ್ದ ಖದೀಮರ ಬಂಧನ: ಲಕ್ಷಾಂತರ ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು, ಗುಂಡುಗಳು ವಶ

  18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು‌ ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…

10 hours ago

ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯಕ್ಕೆ ಎಂಬಿಎ ವಿದ್ಯಾರ್ಥಿ ಸಾವು

ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ…

11 hours ago

ಮೊಬೈಲ್ ನೋಡುತ್ತಾ ಕುಳಿತಿದ್ದ 21 ವರ್ಷದ ಯುವಕನಿಗೆ ಚಾಕು ಇರಿತ: ಚಾಕು ಇರಿತ ವಿಡಿಯೋ ಸಿಸಿಟಿವಿಯಲ್ಲಿ ಸೆರೆ

ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…

14 hours ago