ಯೂಟ್ಯೂಬ್ ನೋಡಿ‌ ಮೋಸ ಹೋದ ಬಟ್ಟೆ ವ್ಯಾಪಾರಿ

ಬಾಬಾ ಜಮೀರ್ ಖಾನ್ ರವರು ಕಳೆದ 7 ವರ್ಷಗಳಿಂದ ಬಟ್ಟೆ ವ್ಯಾಪಾರ ಮಾಡುತ್ತಿರುತ್ತಾರೆ. ಇಷ್ಟೂ ದಿನ ಬಟ್ಟೆಗಳನ್ನು ವ್ಯಾಪಾರ ಮಾಡಲು ಬೆಂಗಳೂರಿನ ಚಿಕ್ಕಪೇಟೆಯಲ್ಲಿ ತರಿಸಿಕೊಳ್ಳುತ್ತಿದ್ದರು.

ಹೀಗೆ ಒಂದು ದಿನ ಯೂಟ್ಯೂಬ್ ನೋಡುತ್ತಿದಾಗ‌, ಕಡಿಮೆ ಬೆಲೆಗೆ ಬಟ್ಟೆಗಳನ್ನು ಮಾರಾಟ ಮಾಡುತ್ತೇವೆ ಎಂದು ವಿಡಿಯೋ ಮಾಡಿ ಯೂಟ್ಯೂಬ್ ನಲ್ಲಿ ದೆಹಲಿ ಮೂಲದ ವ್ಯಕ್ತಿಯೊಬ್ಬರು ಅಪ್ ಲೋಡ್ ಮಾಡಿದ್ದ ವಿಡಿಯೋ ಇವರ ಕಣ್ಣಿಗೆ ಬೀಳುತ್ತದೆ.

ವಿಡಿಯೋ ನೋಡಿದ ಕೂಡಲೇ ದೆಹಲಿಯಿಂದ ಕಡಿಮೆ ಬೆಲೆಗೆ ಬಟ್ಟೆಗಳನ್ನು ತರಿಸಿಕೊಳ್ಳಲು ತೀರ್ಮಾನ‌ ಮಾಡುತ್ತಾರೆ.

ಆ ಯೂಟ್ಯೂಬ್ ಚಾನಲ್ ನಲ್ಲಿ ಅಪ್ ಲೋಡ್ ಮಾಡಿದ್ದ ವಿಡಿಯೋದಲ್ಲಿ ಕೆಲ ಮೊಬೈಲ್ ನಂಬರ್ ಗಳು ಹಾಗೂ ವಿಳಾಸವನ್ನು ಹಾಕಿದ್ದರು. ವಿಡಿಯೋದಲ್ಲಿದ್ದ ಫೋನ್ ನಂಬರ್ ಗೆ ಮಾರ್ಚ್ ತಿಂಗಳಲ್ಲಿ ಫೋನ್ ಮಾಡಿ ನೈಟ್ ಪ್ಯಾಂಟ್ ಗಳು ಬೇಕು, ಒಂದು ನೈಟ್ ಪ್ಯಾಂಟ್ ಬೆಲೆ ಎಷ್ಟು ಎಂದು ಫೋನ್ ಮಾಡಿ ವಿಚಾರಿಸುತ್ತಾರೆ. ಆಗ ಅವರು‌ ಒಂದು ನೈಟ್ ಪ್ಯಾಂಟ್ ಬೆಲೆ 160 ಎಂದು ಹೇಳುತ್ತಾರೆ.

ಇದನ್ನು ಕೇಳಿದ ತಕ್ಷಣ ಇವರ ಬಳಿ ಕಡಿಮೆ ಬೆಲೆಗೆ ಬಟ್ಟೆಗಳು ಸಿಗುತ್ತದೆ ಎಂದು ಯೋಚಿಸಿ, 54ಸಾವಿರು ರೂ. ಮೌಲ್ಯದ ನೈಟ್ ಪ್ಯಾಂಟ್ ಗಳು ಬೇಕು ಎಂದು ಕೇಳುತ್ತಾರೆ. ಆಗ ಅವರು ಫೋನ್ ಪೇ ನಂಬರ್ ಕೊಡುತ್ತೇವೆ ಆ ನಂಬರ್ ಗೆ ಹಣ ಹಾಕಿ ಎಂದು ತಿಳಿಸುತ್ತಾರೆ. ಅಂದು ಅಷ್ಟು ಹಣ ಇಲ್ಲದ ಕಾರಣ ಆ ದಿನ ಫೋನ್ ಪೇ ಮಾಡಿರುವುದಿಲ್ಲ. ಮಾ.18 ರಂದು 51 ಸಾವಿರ ರೂ. ಫೋನ್ ಪೇ‌ ಮಾಡುತ್ತಾರೆ.

ಫೋನ್ ಪೇ ಮಾಡಿದ 10ದಿನಗಳಲ್ಲಿ ನೈಟ್ ಪ್ಯಾಂಟ್ ಗಳನ್ನು ಕಳುಹಿಸುತ್ತೇವೆ ಎಂದು ತಿಳಿಸಿದ್ದರು, ಆದರೆ 10 ದಿನಗಳು ಕಳೆದರೂ ನೈಟ್ ಪ್ಯಾಂಟ್ ಗಳು ಕೊರಿಯರ್ ಮೂಲಕ ಬಂದಿರುವುದಿಲ್ಲ. ತಡವಾದ ಹಿನ್ನೆಲೆ ಮತ್ತೆ ಫೋನ್ ಮಾಡಿ ಕೇಳಿದಾಗ, ಅವರು ಇವತ್ತು ಬರುತ್ತೆ ನಾಳೆ ಬರುತ್ತೆ ಎಂದು ಹೇಳಿ ವಂಚನೆ ಮಾಡುತ್ತಿದ್ದರು.

ದೆಹಲಿ ಮೂಲದ ವ್ಯಕ್ತಿ ಮೋಸ ಮಾಡಿದ್ದಾರೆ ಎಂದು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

Ramesh Babu

Journalist

Recent Posts

ಗೃಹರಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ 349 ಗೃಹರಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳು ಮೇ…

4 hours ago

ಪ್ರಶ್ನೆ ಪತ್ರಿಕೆ ಬಯಲಾಗುತ್ತಲೇ ಇದೆ….

ನೀಟ್ ಪ್ರಶ್ನೆ ಪತ್ರಿಕೆ ಬಯಲು.... ಪ್ರಶ್ನೆ ಪತ್ರಿಕೆ ಬಯಲಾಗುತ್ತಲೇ ಇದೆ. ನನಗೆ ಇದೇನು ದೊಡ್ಡ ಆಶ್ಚರ್ಯವಲ್ಲ. ಇಡೀ ಸಮಾಜದ ನಡೆಯುತ್ತಿರುವುದೇ…

7 hours ago

ಹವಾಮಾನ ವೈಪರಿತ್ಯಕ್ಕೆ ತತ್ತರಿಸಿದ ಕೃಷಿ: ಮಾವು, ದ್ರಾಕ್ಷಿ, ತರಕಾರಿ ಬೆಳೆಗಳಿಗೆ ಭಾರೀ ಹೊಡೆತ

ರಾಜ್ಯದ ಹಲವು ಭಾಗಗಳಲ್ಲಿ ಈ ಬಾರಿ ತೀವ್ರ ಬೇಸಿಗೆ ಮತ್ತು ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳು ಸಂಕಷ್ಟಕ್ಕೆ ಸಿಲುಕಿವೆ. 2026-27ನೇ…

9 hours ago

ಸೈಕಲ್‌ಗೆ ಡಿಕ್ಕಿ ಹೊಡೆದು ನಿಯಂತ್ರಣ ತಪ್ಪಿದ ಬೈಕ್: ಮಹಿಳೆ ಸಾವು

ದೇವನಹಳ್ಳಿ: ರಸ್ತೆಯಲ್ಲಿ ತೆರಳುತ್ತಿದ್ದ ಸೈಕಲ್‌ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು, ಬಳಿಕ ಬೈಕ್ ಡಿವೈಡರ್‌ಗೆ ಅಪ್ಪಳಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ…

20 hours ago

ಬೆಳೆಗಳಿಗೆ ಅಸಮರ್ಪಕ ರಸಗೊಬ್ಬರ ಬಳಕೆ: ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮ- ಮಣ್ಣು ವಿಜ್ಞಾನಿ ಡಾ. ಬಾಲಾಜಿ ನಾಯ್ಕ್

ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…

1 day ago

ಬಾಲ್ಯ ವಿವಾಹ ತಡೆದ ಅಧಿಕಾರಿಗಳು: 16 ವರ್ಷದ ಬಾಲಕಿ ರಕ್ಷಣೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…

1 day ago