ಯೂಟ್ಯೂಬ್ ನೋಡಿ‌ ಮೋಸ ಹೋದ ಬಟ್ಟೆ ವ್ಯಾಪಾರಿ

ಬಾಬಾ ಜಮೀರ್ ಖಾನ್ ರವರು ಕಳೆದ 7 ವರ್ಷಗಳಿಂದ ಬಟ್ಟೆ ವ್ಯಾಪಾರ ಮಾಡುತ್ತಿರುತ್ತಾರೆ. ಇಷ್ಟೂ ದಿನ ಬಟ್ಟೆಗಳನ್ನು ವ್ಯಾಪಾರ ಮಾಡಲು ಬೆಂಗಳೂರಿನ ಚಿಕ್ಕಪೇಟೆಯಲ್ಲಿ ತರಿಸಿಕೊಳ್ಳುತ್ತಿದ್ದರು.

ಹೀಗೆ ಒಂದು ದಿನ ಯೂಟ್ಯೂಬ್ ನೋಡುತ್ತಿದಾಗ‌, ಕಡಿಮೆ ಬೆಲೆಗೆ ಬಟ್ಟೆಗಳನ್ನು ಮಾರಾಟ ಮಾಡುತ್ತೇವೆ ಎಂದು ವಿಡಿಯೋ ಮಾಡಿ ಯೂಟ್ಯೂಬ್ ನಲ್ಲಿ ದೆಹಲಿ ಮೂಲದ ವ್ಯಕ್ತಿಯೊಬ್ಬರು ಅಪ್ ಲೋಡ್ ಮಾಡಿದ್ದ ವಿಡಿಯೋ ಇವರ ಕಣ್ಣಿಗೆ ಬೀಳುತ್ತದೆ.

ವಿಡಿಯೋ ನೋಡಿದ ಕೂಡಲೇ ದೆಹಲಿಯಿಂದ ಕಡಿಮೆ ಬೆಲೆಗೆ ಬಟ್ಟೆಗಳನ್ನು ತರಿಸಿಕೊಳ್ಳಲು ತೀರ್ಮಾನ‌ ಮಾಡುತ್ತಾರೆ.

ಆ ಯೂಟ್ಯೂಬ್ ಚಾನಲ್ ನಲ್ಲಿ ಅಪ್ ಲೋಡ್ ಮಾಡಿದ್ದ ವಿಡಿಯೋದಲ್ಲಿ ಕೆಲ ಮೊಬೈಲ್ ನಂಬರ್ ಗಳು ಹಾಗೂ ವಿಳಾಸವನ್ನು ಹಾಕಿದ್ದರು. ವಿಡಿಯೋದಲ್ಲಿದ್ದ ಫೋನ್ ನಂಬರ್ ಗೆ ಮಾರ್ಚ್ ತಿಂಗಳಲ್ಲಿ ಫೋನ್ ಮಾಡಿ ನೈಟ್ ಪ್ಯಾಂಟ್ ಗಳು ಬೇಕು, ಒಂದು ನೈಟ್ ಪ್ಯಾಂಟ್ ಬೆಲೆ ಎಷ್ಟು ಎಂದು ಫೋನ್ ಮಾಡಿ ವಿಚಾರಿಸುತ್ತಾರೆ. ಆಗ ಅವರು‌ ಒಂದು ನೈಟ್ ಪ್ಯಾಂಟ್ ಬೆಲೆ 160 ಎಂದು ಹೇಳುತ್ತಾರೆ.

ಇದನ್ನು ಕೇಳಿದ ತಕ್ಷಣ ಇವರ ಬಳಿ ಕಡಿಮೆ ಬೆಲೆಗೆ ಬಟ್ಟೆಗಳು ಸಿಗುತ್ತದೆ ಎಂದು ಯೋಚಿಸಿ, 54ಸಾವಿರು ರೂ. ಮೌಲ್ಯದ ನೈಟ್ ಪ್ಯಾಂಟ್ ಗಳು ಬೇಕು ಎಂದು ಕೇಳುತ್ತಾರೆ. ಆಗ ಅವರು ಫೋನ್ ಪೇ ನಂಬರ್ ಕೊಡುತ್ತೇವೆ ಆ ನಂಬರ್ ಗೆ ಹಣ ಹಾಕಿ ಎಂದು ತಿಳಿಸುತ್ತಾರೆ. ಅಂದು ಅಷ್ಟು ಹಣ ಇಲ್ಲದ ಕಾರಣ ಆ ದಿನ ಫೋನ್ ಪೇ ಮಾಡಿರುವುದಿಲ್ಲ. ಮಾ.18 ರಂದು 51 ಸಾವಿರ ರೂ. ಫೋನ್ ಪೇ‌ ಮಾಡುತ್ತಾರೆ.

ಫೋನ್ ಪೇ ಮಾಡಿದ 10ದಿನಗಳಲ್ಲಿ ನೈಟ್ ಪ್ಯಾಂಟ್ ಗಳನ್ನು ಕಳುಹಿಸುತ್ತೇವೆ ಎಂದು ತಿಳಿಸಿದ್ದರು, ಆದರೆ 10 ದಿನಗಳು ಕಳೆದರೂ ನೈಟ್ ಪ್ಯಾಂಟ್ ಗಳು ಕೊರಿಯರ್ ಮೂಲಕ ಬಂದಿರುವುದಿಲ್ಲ. ತಡವಾದ ಹಿನ್ನೆಲೆ ಮತ್ತೆ ಫೋನ್ ಮಾಡಿ ಕೇಳಿದಾಗ, ಅವರು ಇವತ್ತು ಬರುತ್ತೆ ನಾಳೆ ಬರುತ್ತೆ ಎಂದು ಹೇಳಿ ವಂಚನೆ ಮಾಡುತ್ತಿದ್ದರು.

ದೆಹಲಿ ಮೂಲದ ವ್ಯಕ್ತಿ ಮೋಸ ಮಾಡಿದ್ದಾರೆ ಎಂದು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

Ramesh Babu

Journalist

Recent Posts

ಸೆಲೆಬ್ರಿಟಿ…………….

ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…

9 hours ago

ಎಲ್-ನಿನೋ ಪರಿಣಾಮ, ಮಳೆಯ ಕೊರತೆ, ತಾಪಮಾನದ ಏರಿಕೆ, ಒಣ ಹವಾಮಾನ ಹೆಚ್ಚಳ ಸಾಧ್ಯತೆ: ತೋಟಗಾರಿಕಾ ಬೆಳೆಗಳ ರಕ್ಷಣೆಗೆ ಇರಲಿ ಆದ್ಯತೆ

ಎಲ್-ನಿನೋ ಪರಿಣಾಮದಿಂದ ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ಕೊರತೆ, ತಾಪಮಾನದ ಏರಿಕೆ ಹಾಗೂ ಒಣ ಹವಾಮಾನ ಹೆಚ್ಚಾಗುವ ಸಾಧ್ಯತೆ ಇರುವ…

10 hours ago

ರೋಗಿಗಳೊಂದಿಗೆ ದುರ್ವರ್ತನೆ ಆರೋಪ: ಕೊನಘಟ್ಟ ಸರ್ಕಾರಿ ಆಸ್ಪತ್ರೆ ವೈದ್ಯೆ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ

ದೊಡ್ಡಬಳ್ಳಾಪುರ: ತಾಲೂಕಿನ ಕೊನಘಟ್ಟ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಫರ್ಹಾನಾ ಅವರ ವಿರುದ್ಧ ರೋಗಿಗಳೊಂದಿಗೆ ಸೂಕ್ತವಾಗಿ ವರ್ತಿಸುತ್ತಿಲ್ಲ…

22 hours ago

ಬಹಿರ್ದೆಸೆಗೆ ಹೋದ ಬಾಲಕನ ಜೀವ ಕಸಿದ ವೇಗದ ಆಟೋ

ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ಐನೋಳಿ ಗ್ರಾಮದಲ್ಲಿ ದುರ್ಘಟನೆಯೊಂದು ಸಂಭವಿಸಿದ್ದು, ರಸ್ತೆ ಪಕ್ಕದಲ್ಲಿ ಬಹಿರ್ದೆಸೆಗೆ ಕುಳಿತಿದ್ದ 6 ವರ್ಷದ ಬಾಲಕನ…

1 day ago

ವೀಲಿಂಗ್ ಪುಂಡನ ಬೈಕ್ ಡಿಕ್ಕಿ: ಗೃಹ ರಕ್ಷಕ ದಳ ಸಿಬ್ಬಂದಿ ಗಂಭೀರ ಗಾಯ

ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…

2 days ago

ಡಿಸಿ ಭವನದಲ್ಲಿ ಜಿಲ್ಲಾಧಿಕಾರಿಗಳಿಂದ ರಿಯಾಲಿಟಿ ಚೆಕ್: ಅಧಿಕಾರಿಗಳು ಫುಲ್ ಶಾಕ್: ಸಮಯಕ್ಕೆ ಬಾರದ ಅಧಿಕಾರಿಗಳಿಗೆ ಡಿಸಿ ಕ್ಲಾಸ್

ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…

2 days ago