ಬಾಬಾ ಜಮೀರ್ ಖಾನ್ ರವರು ಕಳೆದ 7 ವರ್ಷಗಳಿಂದ ಬಟ್ಟೆ ವ್ಯಾಪಾರ ಮಾಡುತ್ತಿರುತ್ತಾರೆ. ಇಷ್ಟೂ ದಿನ ಬಟ್ಟೆಗಳನ್ನು ವ್ಯಾಪಾರ ಮಾಡಲು ಬೆಂಗಳೂರಿನ ಚಿಕ್ಕಪೇಟೆಯಲ್ಲಿ ತರಿಸಿಕೊಳ್ಳುತ್ತಿದ್ದರು.
ಹೀಗೆ ಒಂದು ದಿನ ಯೂಟ್ಯೂಬ್ ನೋಡುತ್ತಿದಾಗ, ಕಡಿಮೆ ಬೆಲೆಗೆ ಬಟ್ಟೆಗಳನ್ನು ಮಾರಾಟ ಮಾಡುತ್ತೇವೆ ಎಂದು ವಿಡಿಯೋ ಮಾಡಿ ಯೂಟ್ಯೂಬ್ ನಲ್ಲಿ ದೆಹಲಿ ಮೂಲದ ವ್ಯಕ್ತಿಯೊಬ್ಬರು ಅಪ್ ಲೋಡ್ ಮಾಡಿದ್ದ ವಿಡಿಯೋ ಇವರ ಕಣ್ಣಿಗೆ ಬೀಳುತ್ತದೆ.
ವಿಡಿಯೋ ನೋಡಿದ ಕೂಡಲೇ ದೆಹಲಿಯಿಂದ ಕಡಿಮೆ ಬೆಲೆಗೆ ಬಟ್ಟೆಗಳನ್ನು ತರಿಸಿಕೊಳ್ಳಲು ತೀರ್ಮಾನ ಮಾಡುತ್ತಾರೆ.
ಆ ಯೂಟ್ಯೂಬ್ ಚಾನಲ್ ನಲ್ಲಿ ಅಪ್ ಲೋಡ್ ಮಾಡಿದ್ದ ವಿಡಿಯೋದಲ್ಲಿ ಕೆಲ ಮೊಬೈಲ್ ನಂಬರ್ ಗಳು ಹಾಗೂ ವಿಳಾಸವನ್ನು ಹಾಕಿದ್ದರು. ವಿಡಿಯೋದಲ್ಲಿದ್ದ ಫೋನ್ ನಂಬರ್ ಗೆ ಮಾರ್ಚ್ ತಿಂಗಳಲ್ಲಿ ಫೋನ್ ಮಾಡಿ ನೈಟ್ ಪ್ಯಾಂಟ್ ಗಳು ಬೇಕು, ಒಂದು ನೈಟ್ ಪ್ಯಾಂಟ್ ಬೆಲೆ ಎಷ್ಟು ಎಂದು ಫೋನ್ ಮಾಡಿ ವಿಚಾರಿಸುತ್ತಾರೆ. ಆಗ ಅವರು ಒಂದು ನೈಟ್ ಪ್ಯಾಂಟ್ ಬೆಲೆ 160 ಎಂದು ಹೇಳುತ್ತಾರೆ.
ಇದನ್ನು ಕೇಳಿದ ತಕ್ಷಣ ಇವರ ಬಳಿ ಕಡಿಮೆ ಬೆಲೆಗೆ ಬಟ್ಟೆಗಳು ಸಿಗುತ್ತದೆ ಎಂದು ಯೋಚಿಸಿ, 54ಸಾವಿರು ರೂ. ಮೌಲ್ಯದ ನೈಟ್ ಪ್ಯಾಂಟ್ ಗಳು ಬೇಕು ಎಂದು ಕೇಳುತ್ತಾರೆ. ಆಗ ಅವರು ಫೋನ್ ಪೇ ನಂಬರ್ ಕೊಡುತ್ತೇವೆ ಆ ನಂಬರ್ ಗೆ ಹಣ ಹಾಕಿ ಎಂದು ತಿಳಿಸುತ್ತಾರೆ. ಅಂದು ಅಷ್ಟು ಹಣ ಇಲ್ಲದ ಕಾರಣ ಆ ದಿನ ಫೋನ್ ಪೇ ಮಾಡಿರುವುದಿಲ್ಲ. ಮಾ.18 ರಂದು 51 ಸಾವಿರ ರೂ. ಫೋನ್ ಪೇ ಮಾಡುತ್ತಾರೆ.
ಫೋನ್ ಪೇ ಮಾಡಿದ 10ದಿನಗಳಲ್ಲಿ ನೈಟ್ ಪ್ಯಾಂಟ್ ಗಳನ್ನು ಕಳುಹಿಸುತ್ತೇವೆ ಎಂದು ತಿಳಿಸಿದ್ದರು, ಆದರೆ 10 ದಿನಗಳು ಕಳೆದರೂ ನೈಟ್ ಪ್ಯಾಂಟ್ ಗಳು ಕೊರಿಯರ್ ಮೂಲಕ ಬಂದಿರುವುದಿಲ್ಲ. ತಡವಾದ ಹಿನ್ನೆಲೆ ಮತ್ತೆ ಫೋನ್ ಮಾಡಿ ಕೇಳಿದಾಗ, ಅವರು ಇವತ್ತು ಬರುತ್ತೆ ನಾಳೆ ಬರುತ್ತೆ ಎಂದು ಹೇಳಿ ವಂಚನೆ ಮಾಡುತ್ತಿದ್ದರು.
ದೆಹಲಿ ಮೂಲದ ವ್ಯಕ್ತಿ ಮೋಸ ಮಾಡಿದ್ದಾರೆ ಎಂದು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಬೆಂಗಳೂರು: ಕರ್ನಾಟಕ ಸರ್ಕಾರವು ಉಪಮುಖ್ಯಮಂತ್ರಿಗಳು ಹಾಗೂ ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿಗಳನ್ನು ಹಂಚಿಕೆ ಮಾಡಿ ಹೊಸ ಅಧಿಸೂಚನೆ ಹೊರಡಿಸಿದೆ. ರಾಜ್ಯಪಾಲರ ಅನುಮೋದನೆಯೊಂದಿಗೆ…
ವಿಜಯಪುರ (ದೇವನಹಳ್ಳಿ): ಮನೆಗಳ ಮುಂಭಾಗ ಹಾಗೂ ಸಾರ್ವಜನಿಕ ಪಾರ್ಕಿಂಗ್ ಪ್ರದೇಶಗಳಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ವಿಜಯಪುರ…
ನೀಟ್ ಪ್ರವೇಶ ಪರೀಕ್ಷೆ.... ಆಡಳಿತಗಾರ ರಾಜಕಾರಣಿಗಳ ಸಂಪೂರ್ಣ ವೈಫಲ್ಯ, ಅಧಿಕಾರಿಗಳ ಬ್ರಹ್ಮಾಂಡ ಭ್ರಷ್ಟಾಚಾರ, ಪೋಷಕರ ಅತಿಯಾದ ದುರಾಸೆ, ವಿದ್ಯಾರ್ಥಿಗಳ ನಿರ್ಲಜ್ಜತೆ…
ರಾಮನಗರ: ಮುತ್ತತ್ತಿಯ ಕಾವೇರಿ ನದಿಯಲ್ಲಿ ಫೋಟೋ ತೆಗೆಯಲು ನೀರಿಗೆ ಇಳಿದ ವೇಳೆ ಸಂಭವಿಸಿದ ದುರಂತದಲ್ಲಿ ಒಂದೇ ಕುಟುಂಬದ ಐವರು ನೀರಿನಲ್ಲಿ…
ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಸ್ಕೂರು ಗ್ರಾಮದಲ್ಲಿ ಶ್ರೀ ಸಪ್ಪಲಮ್ಮದೇವಿ ಹಾಗೂ ಶ್ರೀ ದುರ್ಗಮ್ಮದೇವಿ ಜಾತ್ರಾ ಮಹೋತ್ಸವವು ಭಕ್ತಿಭಾವ ಮತ್ತು ಸಡಗರದಿಂದ ನಡೆಯಿತು.…
ವಿಜಯಪುರ: ಗೋವಾದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಕೋಟಿ ಕೋಟಿ ರೂಪಾಯಿ ಮೌಲ್ಯದ ಮದ್ಯವನ್ನು ವಿಜಯಪುರ ಪೊಲೀಸರು ವಶಪಡಿಸಿಕೊಂಡಿದ್ದು, ಈ ವೇಳೆ…