ಬಾಬಾ ಜಮೀರ್ ಖಾನ್ ರವರು ಕಳೆದ 7 ವರ್ಷಗಳಿಂದ ಬಟ್ಟೆ ವ್ಯಾಪಾರ ಮಾಡುತ್ತಿರುತ್ತಾರೆ. ಇಷ್ಟೂ ದಿನ ಬಟ್ಟೆಗಳನ್ನು ವ್ಯಾಪಾರ ಮಾಡಲು ಬೆಂಗಳೂರಿನ ಚಿಕ್ಕಪೇಟೆಯಲ್ಲಿ ತರಿಸಿಕೊಳ್ಳುತ್ತಿದ್ದರು.
ಹೀಗೆ ಒಂದು ದಿನ ಯೂಟ್ಯೂಬ್ ನೋಡುತ್ತಿದಾಗ, ಕಡಿಮೆ ಬೆಲೆಗೆ ಬಟ್ಟೆಗಳನ್ನು ಮಾರಾಟ ಮಾಡುತ್ತೇವೆ ಎಂದು ವಿಡಿಯೋ ಮಾಡಿ ಯೂಟ್ಯೂಬ್ ನಲ್ಲಿ ದೆಹಲಿ ಮೂಲದ ವ್ಯಕ್ತಿಯೊಬ್ಬರು ಅಪ್ ಲೋಡ್ ಮಾಡಿದ್ದ ವಿಡಿಯೋ ಇವರ ಕಣ್ಣಿಗೆ ಬೀಳುತ್ತದೆ.
ವಿಡಿಯೋ ನೋಡಿದ ಕೂಡಲೇ ದೆಹಲಿಯಿಂದ ಕಡಿಮೆ ಬೆಲೆಗೆ ಬಟ್ಟೆಗಳನ್ನು ತರಿಸಿಕೊಳ್ಳಲು ತೀರ್ಮಾನ ಮಾಡುತ್ತಾರೆ.
ಆ ಯೂಟ್ಯೂಬ್ ಚಾನಲ್ ನಲ್ಲಿ ಅಪ್ ಲೋಡ್ ಮಾಡಿದ್ದ ವಿಡಿಯೋದಲ್ಲಿ ಕೆಲ ಮೊಬೈಲ್ ನಂಬರ್ ಗಳು ಹಾಗೂ ವಿಳಾಸವನ್ನು ಹಾಕಿದ್ದರು. ವಿಡಿಯೋದಲ್ಲಿದ್ದ ಫೋನ್ ನಂಬರ್ ಗೆ ಮಾರ್ಚ್ ತಿಂಗಳಲ್ಲಿ ಫೋನ್ ಮಾಡಿ ನೈಟ್ ಪ್ಯಾಂಟ್ ಗಳು ಬೇಕು, ಒಂದು ನೈಟ್ ಪ್ಯಾಂಟ್ ಬೆಲೆ ಎಷ್ಟು ಎಂದು ಫೋನ್ ಮಾಡಿ ವಿಚಾರಿಸುತ್ತಾರೆ. ಆಗ ಅವರು ಒಂದು ನೈಟ್ ಪ್ಯಾಂಟ್ ಬೆಲೆ 160 ಎಂದು ಹೇಳುತ್ತಾರೆ.
ಇದನ್ನು ಕೇಳಿದ ತಕ್ಷಣ ಇವರ ಬಳಿ ಕಡಿಮೆ ಬೆಲೆಗೆ ಬಟ್ಟೆಗಳು ಸಿಗುತ್ತದೆ ಎಂದು ಯೋಚಿಸಿ, 54ಸಾವಿರು ರೂ. ಮೌಲ್ಯದ ನೈಟ್ ಪ್ಯಾಂಟ್ ಗಳು ಬೇಕು ಎಂದು ಕೇಳುತ್ತಾರೆ. ಆಗ ಅವರು ಫೋನ್ ಪೇ ನಂಬರ್ ಕೊಡುತ್ತೇವೆ ಆ ನಂಬರ್ ಗೆ ಹಣ ಹಾಕಿ ಎಂದು ತಿಳಿಸುತ್ತಾರೆ. ಅಂದು ಅಷ್ಟು ಹಣ ಇಲ್ಲದ ಕಾರಣ ಆ ದಿನ ಫೋನ್ ಪೇ ಮಾಡಿರುವುದಿಲ್ಲ. ಮಾ.18 ರಂದು 51 ಸಾವಿರ ರೂ. ಫೋನ್ ಪೇ ಮಾಡುತ್ತಾರೆ.
ಫೋನ್ ಪೇ ಮಾಡಿದ 10ದಿನಗಳಲ್ಲಿ ನೈಟ್ ಪ್ಯಾಂಟ್ ಗಳನ್ನು ಕಳುಹಿಸುತ್ತೇವೆ ಎಂದು ತಿಳಿಸಿದ್ದರು, ಆದರೆ 10 ದಿನಗಳು ಕಳೆದರೂ ನೈಟ್ ಪ್ಯಾಂಟ್ ಗಳು ಕೊರಿಯರ್ ಮೂಲಕ ಬಂದಿರುವುದಿಲ್ಲ. ತಡವಾದ ಹಿನ್ನೆಲೆ ಮತ್ತೆ ಫೋನ್ ಮಾಡಿ ಕೇಳಿದಾಗ, ಅವರು ಇವತ್ತು ಬರುತ್ತೆ ನಾಳೆ ಬರುತ್ತೆ ಎಂದು ಹೇಳಿ ವಂಚನೆ ಮಾಡುತ್ತಿದ್ದರು.
ದೆಹಲಿ ಮೂಲದ ವ್ಯಕ್ತಿ ಮೋಸ ಮಾಡಿದ್ದಾರೆ ಎಂದು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…
ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…