ಅಕ್ರಮವಾಗಿ ರಸಗೊಬ್ಬರ ದಾಸ್ತಾನು ಮಾಡಲಾಗಿದ್ದ ಗೋದಾಮುಗಳ ಮೇಲೆ ಕೃಷಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ 18 ಲಕ್ಷ ಮೌಲ್ಯದ 1296 ಮೂಟೆ ಯೂರಿಯಾ ವಶಪಡಿಸಿಕೊಂಡಿದ್ದಾರೆ.
ಹುಣಸೂರಿನ ಸಾಲುಮರದ ತಿಮ್ಮಕ್ಕ ಉದ್ಯಾನವನದ ಮುಂಭಾಗವಿರುವ ಶೆಡ್ ಗಳಲ್ಲಿ ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ ಮಾಹಿತಿ ಅರಿತು ದಾಳಿ ನಡೆಸಿದ್ದಾರೆ.
ಸರ್ಕಾರದಿಂದ ಬಿಡುಗಡೆಯಾಗಿ ರೈತರಿಗೆ ಸೇರಬೇಕಿದ್ದ ಗೊಬ್ಬರ ಖದೀಮ ದಂಧೆಕೋರರಿಂದ ವಶಪಡಿಸಿಕೊಂಡಿದ್ದಾರೆ.ಅಧಿಕಾರಿಗಳು ದಾಳಿ ನಡೆಸುತ್ತಿದ್ದಂತೆ ಸ್ಥಳದಲ್ಲಿದ್ದ ವ್ಯಕ್ತಿಗಳು ಪರಾರಿಯಾಗಿದ್ದಾರೆ.
ಮೂರು ಲಾರಿಗಳನ್ನ ವಶಪಡಿಸಿಕೊಳ್ಳಲಾಗಿದೆ.ಖಾಸಗಿ ಕಂಪನಿ ಹೆಸರಿನ ಚೀಲಗಳಿಗೆ ಬದಲಾಯಿಸಿ ಮಾರಾಟ ಮಾಡುವ ದಂಧೆ ಎಂದು ಶಂಕಿಸಲಾಗಿದೆ.ಚೀಲ ಬದಲಿಸಿವಕೇರಳಾ ರಾಜ್ಯಕ್ಕೆ ಸಾಗಿಸುವ ಶಂಕೆ ವ್ಯಕ್ತವಾಗಿದೆ.ಸಹಾಯಕ ಕೃಷಿ ಅಧಿಕಾರಿ ಅನಿಲ್ ಹಾಗೂ ಕೃಷಿ ಅಧಿಕಾರಿ ಜಯಕುಮಾರ್ ರವರು ಪೊಲೀಸರ ನೆರವಿನಿಂದ ದಾಳಿ ನಡೆಸಿದ್ದಾರೆ.
ಖಾಸಗಿ ಸಂಸ್ಥೆಯ ಬ್ರಾಂಡ್ ಇರುವ ಚೀಲಗಳು ಸ್ಥಳದಲ್ಲಿ ಪತ್ತೆಯಾಗಿದೆ.ಗೊಬ್ಬರ ಕಾಳಸಂತೆ ರಾಕೆಟ್ ಹುಣಸೂರಿನಲ್ಲಿ ಬೆಳಕಿಗೆ ಬಂದಿದೆ.ರಾಕೆಟ್ ಹಿಂದೆ ಪ್ರಭಾವಿ ಕೈಗಳ ಬೆಂಬಲ ಇರುವ ಶಂಕೆ ಇದೆ.ಇದರ ಹಿಂದಿನ ಜಾಲ ಪತ್ತೆ ಹಚ್ಚಲು ಕೃಷಿ ಇಲಾಖೆ ಅಧಿಕಾರಿಗಳು ಒತ್ತು ನೀಡಬೇಕಿದೆ.ಬಡ ರೈತರಿಗೆ ಸೇರಬೇಕಾದ ಗೊಬ್ಬರ ಕಾಳಸಂತೆಕೋರರ ಪಾಲಾಗಿರುವ ಬಗ್ಗೆ ತೆನಿಖೆ ನಡೆಸಬೇಕಿದೆ.
ಹುಣಸೂರು ಗ್ರಾಮಾಂತರ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ…
ದೇವನಹಳ್ಳಿ: ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಂಗಳೂರಿನಿಂದ ಅಹಮದಾಬಾದ್ಗೆ ತೆರಳಲು ಸಿದ್ಧವಾಗಿದ್ದ ಇಂಡಿಗೋ ಸಂಸ್ಥೆಯ 6E-6423 ವಿಮಾನಕ್ಕೆ…
ಸೋನಂ ವಾಂಗ್ ಚುಕ್...... ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗಿಂತ ಸೋನಂ ವಾಂಗ್ ಚುಕ್ ಅವರ ಜೀವ ಭಾರತೀಯರಿಗೆ…
ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್ಶಿಪ್ ಯೋಜನೆಗಾಗಿ ಯಾವುದೇ ರೈತರ ಜಮೀನನ್ನೂ ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.…
ದೊಡ್ಡಬಳ್ಳಾಪುರ: ತಾಲೂಕಿನ ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿಗೆ ಒಳಪಡುವ ಪಾಲನಜೋಗಿಹಳ್ಳಿಯಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ಗ್ರಾಮ ಪ್ರವೇಶ…
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ–44ರ ದೇವನಹಳ್ಳಿ ಬೈಪಾಸ್ನ ಕೆಂಪೇಗೌಡ ವೃತ್ತದ ಬಳಿ ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ಸರಕು ಸಾಗಣೆ…
ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…