ಅಕ್ರಮವಾಗಿ ರಸಗೊಬ್ಬರ ದಾಸ್ತಾನು ಮಾಡಲಾಗಿದ್ದ ಗೋದಾಮುಗಳ ಮೇಲೆ ಕೃಷಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ 18 ಲಕ್ಷ ಮೌಲ್ಯದ 1296 ಮೂಟೆ ಯೂರಿಯಾ ವಶಪಡಿಸಿಕೊಂಡಿದ್ದಾರೆ.
ಹುಣಸೂರಿನ ಸಾಲುಮರದ ತಿಮ್ಮಕ್ಕ ಉದ್ಯಾನವನದ ಮುಂಭಾಗವಿರುವ ಶೆಡ್ ಗಳಲ್ಲಿ ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ ಮಾಹಿತಿ ಅರಿತು ದಾಳಿ ನಡೆಸಿದ್ದಾರೆ.
ಸರ್ಕಾರದಿಂದ ಬಿಡುಗಡೆಯಾಗಿ ರೈತರಿಗೆ ಸೇರಬೇಕಿದ್ದ ಗೊಬ್ಬರ ಖದೀಮ ದಂಧೆಕೋರರಿಂದ ವಶಪಡಿಸಿಕೊಂಡಿದ್ದಾರೆ.ಅಧಿಕಾರಿಗಳು ದಾಳಿ ನಡೆಸುತ್ತಿದ್ದಂತೆ ಸ್ಥಳದಲ್ಲಿದ್ದ ವ್ಯಕ್ತಿಗಳು ಪರಾರಿಯಾಗಿದ್ದಾರೆ.
ಮೂರು ಲಾರಿಗಳನ್ನ ವಶಪಡಿಸಿಕೊಳ್ಳಲಾಗಿದೆ.ಖಾಸಗಿ ಕಂಪನಿ ಹೆಸರಿನ ಚೀಲಗಳಿಗೆ ಬದಲಾಯಿಸಿ ಮಾರಾಟ ಮಾಡುವ ದಂಧೆ ಎಂದು ಶಂಕಿಸಲಾಗಿದೆ.ಚೀಲ ಬದಲಿಸಿವಕೇರಳಾ ರಾಜ್ಯಕ್ಕೆ ಸಾಗಿಸುವ ಶಂಕೆ ವ್ಯಕ್ತವಾಗಿದೆ.ಸಹಾಯಕ ಕೃಷಿ ಅಧಿಕಾರಿ ಅನಿಲ್ ಹಾಗೂ ಕೃಷಿ ಅಧಿಕಾರಿ ಜಯಕುಮಾರ್ ರವರು ಪೊಲೀಸರ ನೆರವಿನಿಂದ ದಾಳಿ ನಡೆಸಿದ್ದಾರೆ.
ಖಾಸಗಿ ಸಂಸ್ಥೆಯ ಬ್ರಾಂಡ್ ಇರುವ ಚೀಲಗಳು ಸ್ಥಳದಲ್ಲಿ ಪತ್ತೆಯಾಗಿದೆ.ಗೊಬ್ಬರ ಕಾಳಸಂತೆ ರಾಕೆಟ್ ಹುಣಸೂರಿನಲ್ಲಿ ಬೆಳಕಿಗೆ ಬಂದಿದೆ.ರಾಕೆಟ್ ಹಿಂದೆ ಪ್ರಭಾವಿ ಕೈಗಳ ಬೆಂಬಲ ಇರುವ ಶಂಕೆ ಇದೆ.ಇದರ ಹಿಂದಿನ ಜಾಲ ಪತ್ತೆ ಹಚ್ಚಲು ಕೃಷಿ ಇಲಾಖೆ ಅಧಿಕಾರಿಗಳು ಒತ್ತು ನೀಡಬೇಕಿದೆ.ಬಡ ರೈತರಿಗೆ ಸೇರಬೇಕಾದ ಗೊಬ್ಬರ ಕಾಳಸಂತೆಕೋರರ ಪಾಲಾಗಿರುವ ಬಗ್ಗೆ ತೆನಿಖೆ ನಡೆಸಬೇಕಿದೆ.
ಹುಣಸೂರು ಗ್ರಾಮಾಂತರ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ…
ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ…
ಬೆಂಗಳೂರು: ಆರೋಪಿಯ ಹುಡುಕಾಟಕ್ಕೆ ತೆರಳುತ್ತಿದ್ದ ಬೆಂಗಳೂರು ಸೈಬರ್ ಕ್ರೈಂ ತಂಡ ಪ್ರಯಾಣಿಸುತ್ತಿದ್ದ ಬಸ್ ಮಧ್ಯಪ್ರದೇಶದಲ್ಲಿ ಭೀಕರ ಅಪಘಾತಕ್ಕೀಡಾಗಿ, ಪೊಲೀಸ್ ಇನ್ಸ್ಪೆಕ್ಟರ್…
ಮದರ್ ತೆರೇಸಾ - ಆಗಸ್ಟ್ 26, 1910..... ರಸ್ತೆ ಬದಿಯ ಹರಕಲು ಬಟ್ಟೆಯ ಭಿಕ್ಷುಕರನ್ನು ನೋಡಲೇ ಅಸಹ್ಯಪಡುವ ಪರಿಸ್ಥಿತಿ ಇರುವಾಗ…
ಚಿಕ್ಕನಾಯಕನಹಳ್ಳಿ: ರೈತರಿಗೆ ಅನುಕೂಲವಾಗಬೇಕೆಂಬ ಉದ್ದೇಶದಿಂದ ಜುಲೈ.1 ರಿಂದ ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ)…
ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆ ಕೊರತೆಯಿಂದ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ…