ಅಕ್ರಮವಾಗಿ ರಸಗೊಬ್ಬರ ದಾಸ್ತಾನು ಮಾಡಲಾಗಿದ್ದ ಗೋದಾಮುಗಳ ಮೇಲೆ ಕೃಷಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ 18 ಲಕ್ಷ ಮೌಲ್ಯದ 1296 ಮೂಟೆ ಯೂರಿಯಾ ವಶಪಡಿಸಿಕೊಂಡಿದ್ದಾರೆ.
ಹುಣಸೂರಿನ ಸಾಲುಮರದ ತಿಮ್ಮಕ್ಕ ಉದ್ಯಾನವನದ ಮುಂಭಾಗವಿರುವ ಶೆಡ್ ಗಳಲ್ಲಿ ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ ಮಾಹಿತಿ ಅರಿತು ದಾಳಿ ನಡೆಸಿದ್ದಾರೆ.
ಸರ್ಕಾರದಿಂದ ಬಿಡುಗಡೆಯಾಗಿ ರೈತರಿಗೆ ಸೇರಬೇಕಿದ್ದ ಗೊಬ್ಬರ ಖದೀಮ ದಂಧೆಕೋರರಿಂದ ವಶಪಡಿಸಿಕೊಂಡಿದ್ದಾರೆ.ಅಧಿಕಾರಿಗಳು ದಾಳಿ ನಡೆಸುತ್ತಿದ್ದಂತೆ ಸ್ಥಳದಲ್ಲಿದ್ದ ವ್ಯಕ್ತಿಗಳು ಪರಾರಿಯಾಗಿದ್ದಾರೆ.
ಮೂರು ಲಾರಿಗಳನ್ನ ವಶಪಡಿಸಿಕೊಳ್ಳಲಾಗಿದೆ.ಖಾಸಗಿ ಕಂಪನಿ ಹೆಸರಿನ ಚೀಲಗಳಿಗೆ ಬದಲಾಯಿಸಿ ಮಾರಾಟ ಮಾಡುವ ದಂಧೆ ಎಂದು ಶಂಕಿಸಲಾಗಿದೆ.ಚೀಲ ಬದಲಿಸಿವಕೇರಳಾ ರಾಜ್ಯಕ್ಕೆ ಸಾಗಿಸುವ ಶಂಕೆ ವ್ಯಕ್ತವಾಗಿದೆ.ಸಹಾಯಕ ಕೃಷಿ ಅಧಿಕಾರಿ ಅನಿಲ್ ಹಾಗೂ ಕೃಷಿ ಅಧಿಕಾರಿ ಜಯಕುಮಾರ್ ರವರು ಪೊಲೀಸರ ನೆರವಿನಿಂದ ದಾಳಿ ನಡೆಸಿದ್ದಾರೆ.
ಖಾಸಗಿ ಸಂಸ್ಥೆಯ ಬ್ರಾಂಡ್ ಇರುವ ಚೀಲಗಳು ಸ್ಥಳದಲ್ಲಿ ಪತ್ತೆಯಾಗಿದೆ.ಗೊಬ್ಬರ ಕಾಳಸಂತೆ ರಾಕೆಟ್ ಹುಣಸೂರಿನಲ್ಲಿ ಬೆಳಕಿಗೆ ಬಂದಿದೆ.ರಾಕೆಟ್ ಹಿಂದೆ ಪ್ರಭಾವಿ ಕೈಗಳ ಬೆಂಬಲ ಇರುವ ಶಂಕೆ ಇದೆ.ಇದರ ಹಿಂದಿನ ಜಾಲ ಪತ್ತೆ ಹಚ್ಚಲು ಕೃಷಿ ಇಲಾಖೆ ಅಧಿಕಾರಿಗಳು ಒತ್ತು ನೀಡಬೇಕಿದೆ.ಬಡ ರೈತರಿಗೆ ಸೇರಬೇಕಾದ ಗೊಬ್ಬರ ಕಾಳಸಂತೆಕೋರರ ಪಾಲಾಗಿರುವ ಬಗ್ಗೆ ತೆನಿಖೆ ನಡೆಸಬೇಕಿದೆ.
ಹುಣಸೂರು ಗ್ರಾಮಾಂತರ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ…
ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮವಾಗಿರುವ ಘಟನೆ ಇಂದು ಮಧ್ಯಾಹ್ನ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಶ್ರೀ ತೊಗಟವೀರ ಕ್ಷತ್ರಿಯ ಸಮಾಜ ಸೇವಾ ಸಂಘದ ವತಿಯಿಂದ ನಗರದ ಶ್ರೀ ಕೊಂಗಾಡಿಯಪ್ಪ ಕಾಲೇಜು ರಸ್ತೆಯಲ್ಲಿರುವ ಶ್ರೀ ಅಭಯ…
ಶ್ರೀ ರಾಮಾಂಜನೇಯ ಸ್ವಾಮಿ ಸೇವಾ ಸಮಿತಿ ಅಭಿವೃದ್ಧಿ ಟ್ರಸ್ಟ್ ವತಿಯಿಂದ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಗಂಗಸಂದ್ರ ಗ್ರಾಮದಲ್ಲಿ ಮೇ.6,…
ಸಿಗ್ಮಂಡ್ ಫ್ರಾಯ್ಡ್ ಎಂಬುವವನನ್ನು ಪ್ರಖ್ಯಾತ ಮನಶಾಸ್ತ್ರಜ್ಞ ಎಂದು ಕರೆಯಲಾಗುತ್ತದೆ. ಪಾಶ್ಚಾತ್ಯ ಸಂಸ್ಕೃತಿಯ ಹಿನ್ನಲೆಯ ಆತನ ವಿಚಾರಗಳು ವಿಶ್ವವ್ಯಾಪಿ ಮನ್ನಣೆ ಪಡೆದಿವೆ.....…
ದೊಡ್ಡಬಳ್ಳಾಪುರ ನಗರದ ಕೋರ್ಟ್ ಎದುರಿನ ಕಾರ್ಮಲ್ ಜ್ಯೋತಿ ರಸ್ತೆಯಲ್ಲಿ ಕಳೆದ ಒಂದು ತಿಂಗಳ ಹಿಂದೆಯೇ ಒಳಚರಂಡಿಯ ಹೊಸ ಮ್ಯಾನ್ ಹೋಲ್…
ಜ್ಞಾನದ ಬೆಳಕನ್ನು ಜಗತ್ತಿಗೇ ಸಾರಿದಂತಹ ಮಹಾನ್ ಪುರುಷ ಭಗವಾನ್ ಬುದ್ಧರ ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಒಳ್ಳೆಯ ಸಮಾಜ ನಿರ್ಮಿಸಲು…