Categories: ರಾಜ್ಯ

ಯೂರಿಯಾ ಅಕ್ರಮ ದಾಸ್ತಾನು ಗೋದಾಮುಗಳ ಮೇಲೆ ಕೃಷಿ ಇಲಾಖೆ ಅಧಿಕಾರಿಗಳ ದಾಳಿ…18 ಲಕ್ಷ ಮೌಲ್ಯದ ಗೊಬ್ಬರ ವಶ..1296 ಮೂಟೆ ಯೂರಿಯಾ ವಶ…

ಅಕ್ರಮವಾಗಿ ರಸಗೊಬ್ಬರ ದಾಸ್ತಾನು ಮಾಡಲಾಗಿದ್ದ ಗೋದಾಮುಗಳ ಮೇಲೆ ಕೃಷಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ 18 ಲಕ್ಷ ಮೌಲ್ಯದ 1296 ಮೂಟೆ ಯೂರಿಯಾ ವಶಪಡಿಸಿಕೊಂಡಿದ್ದಾರೆ.

ಹುಣಸೂರಿನ ಸಾಲುಮರದ ತಿಮ್ಮಕ್ಕ ಉದ್ಯಾನವನದ ಮುಂಭಾಗವಿರುವ ಶೆಡ್ ಗಳಲ್ಲಿ ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ ಮಾಹಿತಿ ಅರಿತು ದಾಳಿ ನಡೆಸಿದ್ದಾರೆ.

ಸರ್ಕಾರದಿಂದ ಬಿಡುಗಡೆಯಾಗಿ ರೈತರಿಗೆ ಸೇರಬೇಕಿದ್ದ  ಗೊಬ್ಬರ ಖದೀಮ ದಂಧೆಕೋರರಿಂದ ವಶಪಡಿಸಿಕೊಂಡಿದ್ದಾರೆ.ಅಧಿಕಾರಿಗಳು ದಾಳಿ ನಡೆಸುತ್ತಿದ್ದಂತೆ ಸ್ಥಳದಲ್ಲಿದ್ದ ವ್ಯಕ್ತಿಗಳು ಪರಾರಿಯಾಗಿದ್ದಾರೆ.

ಮೂರು ಲಾರಿಗಳನ್ನ ವಶಪಡಿಸಿಕೊಳ್ಳಲಾಗಿದೆ.ಖಾಸಗಿ ಕಂಪನಿ ಹೆಸರಿನ ಚೀಲಗಳಿಗೆ ಬದಲಾಯಿಸಿ ಮಾರಾಟ ಮಾಡುವ ದಂಧೆ ಎಂದು ಶಂಕಿಸಲಾಗಿದೆ.ಚೀಲ ಬದಲಿಸಿವಕೇರಳಾ ರಾಜ್ಯಕ್ಕೆ ಸಾಗಿಸುವ ಶಂಕೆ ವ್ಯಕ್ತವಾಗಿದೆ.ಸಹಾಯಕ ಕೃಷಿ ಅಧಿಕಾರಿ ಅನಿಲ್ ಹಾಗೂ ಕೃಷಿ ಅಧಿಕಾರಿ ಜಯಕುಮಾರ್ ರವರು ಪೊಲೀಸರ ನೆರವಿನಿಂದ ದಾಳಿ ನಡೆಸಿದ್ದಾರೆ.

ಖಾಸಗಿ ಸಂಸ್ಥೆಯ ಬ್ರಾಂಡ್ ಇರುವ ಚೀಲಗಳು ಸ್ಥಳದಲ್ಲಿ ಪತ್ತೆಯಾಗಿದೆ.ಗೊಬ್ಬರ ಕಾಳಸಂತೆ ರಾಕೆಟ್ ಹುಣಸೂರಿನಲ್ಲಿ ಬೆಳಕಿಗೆ ಬಂದಿದೆ.ರಾಕೆಟ್ ಹಿಂದೆ ಪ್ರಭಾವಿ ಕೈಗಳ ಬೆಂಬಲ ಇರುವ ಶಂಕೆ ಇದೆ.ಇದರ ಹಿಂದಿನ ಜಾಲ ಪತ್ತೆ ಹಚ್ಚಲು ಕೃಷಿ ಇಲಾಖೆ ಅಧಿಕಾರಿಗಳು ಒತ್ತು ನೀಡಬೇಕಿದೆ.ಬಡ ರೈತರಿಗೆ ಸೇರಬೇಕಾದ ಗೊಬ್ಬರ ಕಾಳಸಂತೆಕೋರರ ಪಾಲಾಗಿರುವ ಬಗ್ಗೆ ತೆನಿಖೆ ನಡೆಸಬೇಕಿದೆ.

ಹುಣಸೂರು ಗ್ರಾಮಾಂತರ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ…

Ramesh Babu

Journalist

Recent Posts

ಬೆಳೆ ವಿಮೆ ಮಾಡಿಸಲು ಆ.14 ಕೊನೆಯ ದಿನ: ರೈತರು ತಪ್ಪದೇ ಬೆಳೆ ವಿಮೆ ಮಾಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಜಿಲ್ಲೆಯಲ್ಲಿ ಕಳೆದ ಎರಡು ತಿಂಗಳಲ್ಲಿ ವಾಡಿಕೆ ಮಳೆಗಿಂತ ಶೇಕಡ 33 ರಷ್ಟು ಮಳೆ ಕೊರತೆಯಾಗಿದ್ದು ಮುಂದಿನ ದಿನಗಳಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ…

6 hours ago

ಬರದ ನಡುವೆಯೂ ರಾಗಿ ರೈತರಿಗೆ ಆಸರೆ: ಫಸಲ್ ಬಿಮಾ ಪ್ರೀಮಿಯಂ ಭರಿಸುವುದಾಗಿ ಶಾಸಕ ಧೀರಜ್ ಮುನಿರಾಜ್ ಘೋಷಣೆ

ದೊಡ್ಡಬಳ್ಳಾಪುರ: ಸಮರ್ಪಕ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ಎದುರಿಸುತ್ತಿರುವ ದೊಡ್ಡಬಳ್ಳಾಪುರ ಕ್ಷೇತ್ರದ ರೈತರಿಗೆ ನೆರವಾಗುವ ಉದ್ದೇಶದಿಂದ, ಕ್ಷೇತ್ರದ ಪ್ರಮುಖ ಬೆಳೆಯಾದ…

9 hours ago

ಕೋಳಿ ವಿಚಾರದ ಜಗಳಕ್ಕೆ ಹೊಸ ಟ್ವಿಸ್ಟ್: ಎರಡೂ ಕಡೆಯಿಂದ ಹಲ್ಲೆ ಆರೋಪ, ಆಸ್ಪತ್ರೆಯಲ್ಲೂ ಗಲಾಟೆ

ಗೌರಿಬಿದನೂರು: ಕೋಳಿ ವಿಚಾರವಾಗಿ ಆರಂಭವಾದ ನೆರೆಹೊರೆಯವರ ನಡುವಿನ ಜಗಳ ಗಂಭೀರ ಸ್ವರೂಪ ಪಡೆದು, ಸಾರ್ವಜನಿಕ ಆಸ್ಪತ್ರೆಯೊಳಗೂ ಗಲಾಟೆ ನಡೆದ ಘಟನೆ…

10 hours ago

” ಕ್ಷಮೆ” ಎಂಬ ಭಾವದ ಸುತ್ತ……

ಕನ್ನಡದ ಖ್ಯಾತ, ಪ್ರತಿಭಾವಂತ ಚಲನಚಿತ್ರ ನಟ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಶ್ರೀ ಅನಂತನಾಗ್ ಅವರು ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ದೆಹಲಿಯ…

18 hours ago

ವೃದ್ಧ ದಂಪತಿ ಆತ್ನಹತ್ಯೆಗೆ ಯತ್ನ: ಪತಿ ಶಿವಪ್ಪ ಸಾವು

ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…

1 day ago

ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಅಂಗಡಿಯಲ್ಲಿ ದರೋಡೆ ಯತ್ನ

ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…

1 day ago