Categories: ಕೃಷಿ

ಯೂರಿಯಾ ಮಿತ ಬಳಕೆಗೆ ಕೃಷಿ ಇಲಾಖೆ ಸಲಹೆ

 

ಯೂರಿಯಾ ಗೊಬ್ಬರವು ಸಸ್ಯಗಳಿಗೆ ಹೆಚ್ಚು ಪೋಷಕಾಂಶಗಳನ್ನು ಒದಗಿಸುತ್ತದೆ, ಯೂರಿಯಾ ಸಾರಜನಕವನ್ನು ಮಾತ್ರ ಒದಗಿಸುತ್ತದೆ ಮತ್ತು ರಂಜಕ ಮತ್ತು ಪೊಟ್ಯಾಷಿಯಂ ನಂತಹ ಇತರೆ ಅಗತ್ಯ ಅಂಶಗಳನ್ನು ಪೂರೈಸುವುದಿಲ್ಲ. ಆದರೆ ಇದರ ಬಳಕೆ ಹೆಚ್ಚಾದಷ್ಟು ಅಮೃತವು ವಿಷವಾಗುತ್ತೆ, ಎನ್ನುವುದು ವಾಸ್ತವಾಂಶ ಆದ್ದರಿಂದ ಆದಷ್ಟು ಕಡಿಮೆ ಪ್ರಮಾಣದಲ್ಲಿ ಯೂರಿಯಾ ಬಳಸುವುದು ಉತ್ತಮ ಎಂದು ಕೃಷಿ ಇಲಾಖೆ ತಿಳಿಸಿದೆ.

ಯೂರಿಯಾ ಗೊಬ್ಬರವು ಸಸ್ಯಗಳಿಗೆ ಸಾರಜನಕದ ಸಾಮಾನ್ಯ ಮೂಲವಾಗಿದ್ದರೂ, ಹಲವಾರು ಅನಾನುಕೂಲ ಹೊಂದಿದೆ. ಯೂರಿಯಾ ತ್ವರಿತವಾಗಿ ಅಮೋನಿಯಾ ಅನಿಲವಾಗಿ ಪರಿವರ್ತನೆಗೊಂಡು ಬಾಷ್ಪೀಕರಣದ ಮೂಲಕ ವಿಶೇಷವಾಗಿ ಶುಷ್ಕ ಅಥವಾ ಕ್ಷಾರೀಯ ಪರಿಸ್ಥಿತಿಗಳಲ್ಲಿ ನಷ್ಟವಾಗುವ ಸಾಧ್ಯತೆ ಹೆಚ್ಚಿರುತ್ತದೆ. ಕಾಲಾಂತರದಲ್ಲಿ ಯೂರಿಯಾ ಬಳಕೆಯಿಂದ ಮಣ್ಣಿನ pH ಪ್ರಮಾಣವು ಸುಮಾರು 0.5-1.0 ರಷ್ಟು ಕಡಿಮೆ ಆಗುವುದು, ಇದರಿಂದ ಮಣ್ಣಿನಲ್ಲಿ ಆಮ್ಲೀಕರಣವಾಗಿ ಸಸ್ಯಗಳ ಬೆಳವಣಿಗೆ ಮತ್ತು ಪೋಷಕಾಂಶಗಳ ಹೀರಿಕೊಳ್ಳುವಿಕೆಗೆ ಹಾನಿಯಾಗುತ್ತದೆ. ಯೂರಿಯಾವು ಮಣ್ಣಿನಲ್ಲಿ ಲವಣಗಳ ಬೆಳವಣಿಗೆಗೆ ಕಾರಣವಾಗಬಹುದು, ಇದರಿಂದ ಮಣ್ಣಿನ ರಚನೆಯಲ್ಲಿ ವ್ಯತ್ಯಾಸವಾಗಿ ಬೇರು ವಲಯಕ್ಕೆ ಗಾಳಿ ಮತ್ತು ನೀರಿನ ಪ್ರವೇಶವನ್ನು ಮಿತಗೊಳಿಸಿ ಸಸ್ಯಗಳ ಬೆಳವಣಿಗೆಯ ಸಾಮರ್ಥ್ಯ ಕಡಿಮೆಯಾಗುತ್ತದೆ.

ಅತಿಯಾದ ಬಳಕೆಯಿಂದ ಸಸ್ಯಗಳ ಬೆಳವಣಿಗೆ ದುರ್ಬಲವಾಗಿ ಹೂವು ಮತ್ತು ಹಣ್ಣಿನ ಇಳುವರಿಯ ಕುಂಠಿತವಾಗುವುದರ, ಜೊತೆಗೆ ಕೀಟಗಳು ಮತ್ತು ರೋಗಗಳಿಗೆ ಕಾರಣವಾಗುತ್ತದೆ. ಮುಖ್ಯವಾಗಿ ಮಣ್ಣಿನಲ್ಲಿರುವ ಸೂಕ್ಷ್ಮ ಜೀವಿಗಳ ವೈವಿಧ್ಯತೆ ಮತ್ತು ಪರಿಸರದ ಮೇಲೆ ಗಮನಾರ್ಹವಾದ ಪರಿಣಾಮ ಬೀರುತ್ತದೆ.

*ಆರೋಗ್ಯದ ಮೇಲೆ ಬೀರುವ ದುಷ್ಪರಿಣಾಮಗಳು*
ಯೂರಿಯಾ ಗೊಬ್ಬರವು ರೂಪಾಂತರಗೊಳ್ಳುವುದರಿಂದ ನೈಟ್ರೇಟ್ ಗಳು ಅಂತರ್ಜಲ ಸೇರಿ ಆರೋಗ್ಯದ ಮೇಲೆ ಹಲವು ದುಷ್ಪರಿಣಾಮಗಳು ಬೀರುತ್ತದೆ. ಯೂರಿಯಾ ಹೆಚ್ಚಾಗಿ ಬಳಸಿದಾಗ ಬೆಳೆದ ತರಕಾರಿ, ಹಣ್ಣುಗಳು ಹಾಗೂ ಧಾನ್ಯಗಳಲ್ಲಿ ನೈಟ್ರೇಟ್ ಪದಾರ್ಥಗಳ ಅಂಶ ಹೆಚ್ಚಾಗುತ್ತದೆ. ಇವುಗಳನ್ನು ದೀರ್ಘಾವಧಿಯಲ್ಲಿ ಸೇವಿಸಿದರೆ ಅದರಿಂದ ಮಾನವನಿಗೆ ವಿಷಕಾರಿಯಗಿ ಹೊಟ್ಟೆ ನೋವು, ವಾಂತಿ ಮುಂತಾದ ಕಾಯಿಲೆಗಳು ಸಂಭವಿಸಬಹುದು. ಆಹಾರದಲ್ಲಿ ನೈಟ್ರೇಟ್ ಗಳು ಹೆಚ್ಚಾಗಿದ್ದಾರೆ ಅವು ನೈಟ್ರೋಸಾಮೈನ್ಗಳಾಗಿ ಪರಿವರ್ತನೆಯಾಗಿ ಕ್ಯಾನ್ಸರ್ ಗೆ ಕಾರಣವಾಗಬಹುದು, ಶಿಶುಗಳಲ್ಲಿ ‘ಬ್ಲೂ ಬೇಬಿ ಸಿಂಡ್ರೋಮ್’ ಎಂಬ ಸಮಸ್ಯೆ ಉಂಟಾಗಬಹುದು. ಇದು ರಕ್ತದಲ್ಲಿ ಆಮ್ಲಜನಕದ ಮಟ್ಟವನ್ನು ಕಡಿಮೆ ಮಾಡುತ್ತದೆ.

ಪರಿಸರದ ಮೇಲಿನ ದುಷ್ಪರಿಣಾಮ ಮತ್ತು ಇತರೆ ಪರ್ಯಾಯ ಮಾರ್ಗಗಳನ್ನು ಅನುಸರಿಸುವುದು ಸೂಕ್ತ. ಶಿಫಾರಸ್ಸಿನಂತೆ ಅಗತ್ಯವಿರುವಷ್ಟೇ ಸಮತೋಲನದ ಪೋಷಕಾಂಶಗಳನ್ನು ಮಣ್ಣಿಗೆ ಸೇರಿಸಿ.
ಬೆಳವಣಿಗೆ ಹಂತದಲ್ಲಿ ಅವಶ್ಯವಿದ್ದಲ್ಲಿ ಶೇಕಡಾ 100ರಷ್ಟು ನೀರಿನಲ್ಲಿ ಕರಗುವ ಸಂಯುಕ್ತ ರಸಗೊಬ್ಬರಗಳ / ನ್ಯಾನೋ ಯೂರಿಯಾ ಪ್ಲಸ್ ಸಿಂಪರಣೆ / ಡ್ರಿಪ್ ಮೂಲಕ ನೀಡುವುದು.
ರಾಗಿ ಬೆಳೆಗೆ ಗೊಬ್ಬರವಾಗಿ ಶಿಫಾರಸ್ಸಿನ ಪ್ರಮಾಣದ ಶೇಕಡಾ 50 ರಷ್ಟು ಸಾರಜನಕವನ್ನು ಯೂರಿಯಾ ರೂಪದಲ್ಲಿ ಸಿಂಪರಣೆ ಮಾಡಬೇಕು.

ರಾಗಿ ಬೆಳೆಗೆ ಕೃಷಿ ವಿಶ್ವವಿದ್ಯಾಲಯ ಬೆಂಗಳೂರು ಇವರ ಶಿಫಾರಸ್ಸಿತ ಸಾರಜನಕ ಪ್ರಮಾಣವು ಒಂದು ಎಕರೆಗೆ 20 ಕೆ.ಜಿ ಮಾತ್ರ, ಅಂದರೆ ಒಂದು ಎಕರೆಗೆ ಸುಮಾರು 45 ಕೆ.ಜಿ ಯೂರಿಯಾ ಸಿಂಪರಣೆ ಮಾಡಬೇಕು. ಈಗಾಗಲೇ ಬಿತ್ತನೆ ಸಮಯದಲ್ಲಿ ಅರ್ಧದಷ್ಟು ಸಾರಜನಕವನ್ನು ಯೂರಿಯಾ ಮತ್ತು ಡಿಎಪಿ ಮೂಲಕ ಸಿಂಪರಣೆ ಮಾಡುವುದರಿಂದ, ಉಳಿದ ಅರ್ಧದಷ್ಟು ಸಾರಜನಕವನ್ನು ಅಂದರೆ ಸುಮಾರು 22-23 ಕೆ.ಜಿ ಯೂರಿಯಾ ಗೊಬ್ಬರವನ್ನು 2 ಹಂತಗಳಲ್ಲಿ, ಅಂದರೆ ರಾಗಿ ಬೆಳವಣಿಗೆಯ 20-25 ದಿನದೊಳಗೆ ಒಮ್ಮೆ ಹಾಗೂ ಮತ್ತೊಮ್ಮೆ 30-45 ದಿನದೊಳಗೆ ಹಾಕಿದಾಗ ಉತ್ತಮ ಇಳುವರಿ ದೊರೆಯುತ್ತದೆ.

ರೈತರು ಆದಷ್ಟು ಬೇಸಾಯದ ಖರ್ಚು ಕಡಿಮೆ ಮಾಡಿಕೊಳ್ಳಲು ಹಾಗೂ ಪರಿಸರದ ಹಾನಿ ತಪ್ಪಿಸುವ ಸಲುವಾಗಿ ಶಿಫಾರಸ್ಸಿನ ಪ್ರಮಾಣದಲ್ಲಿ ರಸಗೊಬ್ಬರಗಳನ್ನು ಖರೀದಿಸಲು ಪ್ರಕಟಣೆಯಲ್ಲಿ ಕೃಷಿ ಇಲಾಖೆ ತಿಳಿಸಿದೆ.

Ramesh Babu

Journalist

Recent Posts

ಏ.25ರ ರಾತ್ರಿ ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತದಲ್ಲಿ ಇಬ್ಬರ ಸಾವು ಪ್ರಕರಣ: ಕತ್ತಲಲ್ಲಿ ಪ್ರಯಾಣಿಸುತ್ತಿದ್ದವರ ಬದುಕಲ್ಲಿ ಶಾಶ್ವತ ಕತ್ತಲು ಮೂಡಿಸಿದ ಜವರಾಯ: ಎಚ್ಚೆತ್ತ ನಗರಸಭೆ ಬೀದಿ ದೀಪ ಅಳವಡಿಕೆ

ಏ.25ರ ರಾತ್ರಿ ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿದ್ದರು. ರಸ್ತೆ ಇಕ್ಕೆಲಗಳಲ್ಲಿ ಬೀದಿ ದೀಪಗಳು ಬೆಳಗದ…

7 minutes ago

ರಾಷ್ಟ್ರೀಯತೆ ಎಂಬ ಪರಿಕಲ್ಪನೆಯ ಸುತ್ತಾ…….

ದೇಶಭಕ್ತಿ ಮತ್ತು ದೇಶದ್ರೋಹ...... ಇದು ಬ್ರಿಟಿಷರ ಕಾಲದ್ದೇ ಅಥವಾ ಈ ಕಾಲಕ್ಕೂ ಅನ್ವಯಿಸುತ್ತದೆಯೇ..... ರಾಷ್ಟ್ರೀಯತೆ ಎಂಬ ಪರಿಕಲ್ಪನೆಯ ಸುತ್ತಾ....... ರಾಷ್ಟ್ರ…

5 hours ago

ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತ: ಇಬ್ಬರು ಸಾವು

ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಬೈಕ್ ಸಾವನ್ನಪ್ಪಿದರೆ, ಮತ್ತೋರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ…

1 day ago

ಕೆಯುಡಬ್ಲ್ಯೂಜೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಹೆಚ್ಚು ಅಂಕಗಳಿಸಿದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ…

1 day ago

ಎಸ್ಸೆಸ್ಸೆಲ್ಸಿ ಪರೀಕ್ಷೆ-01 ಫಲಿತಾಂಶ ಪ್ರಕಟ: ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆ ವಿದ್ಯಾರ್ಥಿನಿಗೆ 625ಕ್ಕೆ 622 ಅಂಕ: ನಮ್ಮ ತಪಸ್ಸಿಗೆ ಸಿಕ್ಕ ಯಶಸ್ಸು- ಶಾಲಾ ಸಂಸ್ಥಾಪಕ ಶ್ರೀನಿವಾಸ್ ಮೂರ್ತಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು, ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಗ್ರಾಮದ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯು…

2 days ago

ಬಡಪಾಯಿ ಟೀ ಅಂಗಡಿ ಹುಡುಗನ ಮೇಲೆ ಪೊಲೀಸ್ ಇನ್ಸ್ ಪೆಕ್ಟರ್ ದರ್ಪ ಆರೋಪ

ಟೀ ಅಂಗಡಿ ಹುಡುಗನ ಮೇಲೆ ಪೊಲೀಸ್ ಇನ್ಸ್ ಪೆಕ್ಟರ್ ದರ್ಪ ಮೆರೆದಿರುವ ಘಟನೆ ದೇವನಹಳ್ಳಿಯ ಕನ್ನಮಂಗಲ ಗ್ರಾಮದಲ್ಲಿ ಹಾದುಹೋಗುವ ರಾಷ್ಟ್ರೀಯ…

2 days ago