ರಾಗಿ, ಮುಸುಕಿನ ಜೋಳದ ಬೆಳೆಗೆ ಹಾಕುವ ಯೂರಿಯಾ ರಸಗೊಬ್ಬರ ಕೊಳ್ಳಲು ರಸಗೊಬ್ಬರ ಅಂಗಡಿಗಳ ಮುಂದೆ ರೈತರು ಸಾಲುಗಟ್ಟಿನಿಂತಿದ್ದಾರೆ.
ಕಳೆದ ಒಂದು ವಾರದಿಂದ ಮಳೆ ಬೀಳುತ್ತರುವ ಹಿನ್ನೆಲೆ ಬೆಳೆಗಳಿಗೆ ಕಳೆ ಬಂದಿದೆ. ಉತ್ತಮ ಫಸಲು ಬರಲೆಂದು ರೈತರು ಯೂರಿಯಾ ರಸಗೊಬ್ಬರ ಕೊಳ್ಳಲು ಮುಗಿಬಿದ್ದಿದ್ದಾರೆ.
ನಗರ ಸೇರಿದಂತೆ ತಾಲ್ಲೂಕಿನ ಎಲ್ಲಾ ರಸಗೊಬ್ಬರ ಮಾರಾಟದ ಅಂಗಡಿಗಳಲ್ಲೂ ಯೂರಿಯಾ ರಸಗೊಬ್ಬರ ದಾಸ್ತಾನು ಖಾಲಿಯಾಗಿದೆ ಎಂಬ ಮಾಹಿತಿ ಕೇಳಿ ಬಂದಿದೆ. ನಗರದ ಟಿಎಪಿಎಂಸಿಎಸ್ ಮಾರಾಟ ಮಳಿಗೆಯಲ್ಲಿ ಮಾತ್ರ 29 ಟನ್ ದಾಸ್ತಾನು ಇದ್ದು, ಬುಧವಾರ ಬೆಳಗಿನಿಂದಲೆ ನೂರಾರು ಜನ ರೈತರು ಯೂರಿಯಾ ಖರೀದಿಸಲು ಸಾಲುಗಟ್ಟಿ ನಿಂತಿದ್ದಾರೆ.
ಯೂರಿಯಾ ರಸಗೊಬ್ಬರ ದಾಸ್ತಾನು ಕೊರತೆ ಇರುವ ಹಿನ್ನೆಲೆ ಒಬ್ಬ ರೈತರಿಗೆ ಒಂದು ಚೀಲ ಮಾತ್ರ ನೀಡಲಾಗುತ್ತಿದೆ.
ಕೃಷಿ ಇಲಾಖೆ ಅಧಿಕಾರಿಗಳ ಮಾಹಿತಿಯಂತೆ ಮಂಗಳೂರಿನಿಂದ ಯೂರಿಯಾ ತುಂಬಿದ ಗೂಡ್ಸ್ ರೈಲು ಬರುವುದು ವಿಳಂಬವಾಗಿರುವುದರಿಂದ ಇನ್ನೂ ನಾಲ್ಕು ದಿನಗಳ ಒಳಗೆ 150 ಟನ್ ಬರಲಿದೆ ಎನ್ನಲಾಗಿದೆ.
ಚಿಕ್ಕಬಳ್ಳಾಪುರ ನಗರದ ಬಿ ಬಿ ರಸ್ತೆಯಲ್ಲಿರುವ ಎಯು ಜ್ಯುವೆಲ್ಲರಿ ಶಾಪ್ ಗೆ ಕನ್ನ ಹಾಕಿರುವ ಕಳ್ಳರು ಸರಿಸುಮಾರು 3 ಕೋಟಿ…
ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…
ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…