ರಾಗಿ, ಮುಸುಕಿನ ಜೋಳದ ಬೆಳೆಗೆ ಹಾಕುವ ಯೂರಿಯಾ ರಸಗೊಬ್ಬರ ಕೊಳ್ಳಲು ರಸಗೊಬ್ಬರ ಅಂಗಡಿಗಳ ಮುಂದೆ ರೈತರು ಸಾಲುಗಟ್ಟಿನಿಂತಿದ್ದಾರೆ.
ಕಳೆದ ಒಂದು ವಾರದಿಂದ ಮಳೆ ಬೀಳುತ್ತರುವ ಹಿನ್ನೆಲೆ ಬೆಳೆಗಳಿಗೆ ಕಳೆ ಬಂದಿದೆ. ಉತ್ತಮ ಫಸಲು ಬರಲೆಂದು ರೈತರು ಯೂರಿಯಾ ರಸಗೊಬ್ಬರ ಕೊಳ್ಳಲು ಮುಗಿಬಿದ್ದಿದ್ದಾರೆ.
ನಗರ ಸೇರಿದಂತೆ ತಾಲ್ಲೂಕಿನ ಎಲ್ಲಾ ರಸಗೊಬ್ಬರ ಮಾರಾಟದ ಅಂಗಡಿಗಳಲ್ಲೂ ಯೂರಿಯಾ ರಸಗೊಬ್ಬರ ದಾಸ್ತಾನು ಖಾಲಿಯಾಗಿದೆ ಎಂಬ ಮಾಹಿತಿ ಕೇಳಿ ಬಂದಿದೆ. ನಗರದ ಟಿಎಪಿಎಂಸಿಎಸ್ ಮಾರಾಟ ಮಳಿಗೆಯಲ್ಲಿ ಮಾತ್ರ 29 ಟನ್ ದಾಸ್ತಾನು ಇದ್ದು, ಬುಧವಾರ ಬೆಳಗಿನಿಂದಲೆ ನೂರಾರು ಜನ ರೈತರು ಯೂರಿಯಾ ಖರೀದಿಸಲು ಸಾಲುಗಟ್ಟಿ ನಿಂತಿದ್ದಾರೆ.
ಯೂರಿಯಾ ರಸಗೊಬ್ಬರ ದಾಸ್ತಾನು ಕೊರತೆ ಇರುವ ಹಿನ್ನೆಲೆ ಒಬ್ಬ ರೈತರಿಗೆ ಒಂದು ಚೀಲ ಮಾತ್ರ ನೀಡಲಾಗುತ್ತಿದೆ.
ಕೃಷಿ ಇಲಾಖೆ ಅಧಿಕಾರಿಗಳ ಮಾಹಿತಿಯಂತೆ ಮಂಗಳೂರಿನಿಂದ ಯೂರಿಯಾ ತುಂಬಿದ ಗೂಡ್ಸ್ ರೈಲು ಬರುವುದು ವಿಳಂಬವಾಗಿರುವುದರಿಂದ ಇನ್ನೂ ನಾಲ್ಕು ದಿನಗಳ ಒಳಗೆ 150 ಟನ್ ಬರಲಿದೆ ಎನ್ನಲಾಗಿದೆ.
The desert sun has always promised a bright future for Arizona residents, but the rising…
ಪಿ. ಲಂಕೇಶ್........ ಮಾರ್ಚ್ 8, 1935, ಜನವರಿ 25, 2000.... ಎರಡು ವೈರುಧ್ಯಗಳ ಚಿಂತನೆಯ ಜನರಲ್ಲಿ ಪ್ರೀತಿ - ದ್ವೇಷ…
ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ಮಾರ್ಚ್ 11ರಿಂದ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು…
ಮೇಲಿನ ಜೂಗಾನಹಳ್ಳಿ ಕ್ರಿಕೆಟರ್ಸ್ ವತಿಯಿಂದ (ದಿವಂಗತ ಡಾ. ಪುನಿತ್ ರಾಜ್ಕುಮಾರ್ ಸವಿನೆನಪಿಗಾಗಿ) ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟನ್ನು ಮಾ.19 ರಿಂದ…
ನನ್ನ ಶಾಲೆ ನನ್ನ ಜವಾಬ್ದಾರಿ ಎಂಬ ಧ್ಯೇಯ ವಾಕ್ಯದೊಂದಿಗೆ ತಾನು ಓದಿದ ಸರ್ಕಾರಿ ಶಾಲೆಯ ಪರಿಸ್ಥಿತಿ ಹೇಗಿದೆ ಎಂಬುದನ್ನು ಹಿಂದಿರುಗಿ…
ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರದಲ್ಲಿ ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ ಹೊಡೆದಿರುವ ಘಟನೆ…