ಯೂರಿಯಾ ರಸಗೊಬ್ಬರ ಕೊಳ್ಳಲು ಸಾಲುಗಟ್ಟಿನಿಂತ ರೈತರು: ದಾಸ್ತಾನು ಕೊರತೆ ಹಿನ್ನೆಲೆ ಒಬ್ಬ ರೈತರಿಗೆ ಒಂದು ಚೀಲ ಮಾತ್ರ ವಿತರಣೆ

ರಾಗಿ, ಮುಸುಕಿನ ಜೋಳದ ಬೆಳೆಗೆ ಹಾಕುವ ಯೂರಿಯಾ ರಸಗೊಬ್ಬರ ಕೊಳ್ಳಲು ರಸಗೊಬ್ಬರ ಅಂಗಡಿಗಳ ಮುಂದೆ ರೈತರು ಸಾಲುಗಟ್ಟಿನಿಂತಿದ್ದಾರೆ.

ಕಳೆದ ಒಂದು ವಾರದಿಂದ ಮಳೆ ಬೀಳುತ್ತರುವ ಹಿನ್ನೆಲೆ ಬೆಳೆಗಳಿಗೆ ಕಳೆ ಬಂದಿದೆ. ಉತ್ತಮ ಫಸಲು ಬರಲೆಂದು ರೈತರು ಯೂರಿಯಾ ರಸಗೊಬ್ಬರ ಕೊಳ್ಳಲು ಮುಗಿಬಿದ್ದಿದ್ದಾರೆ.

ನಗರ ಸೇರಿದಂತೆ ತಾಲ್ಲೂಕಿನ ಎಲ್ಲಾ ರಸಗೊಬ್ಬರ ಮಾರಾಟದ ಅಂಗಡಿಗಳಲ್ಲೂ ಯೂರಿಯಾ ರಸಗೊಬ್ಬರ ದಾಸ್ತಾನು ಖಾಲಿಯಾಗಿದೆ ಎಂಬ ಮಾಹಿತಿ ಕೇಳಿ ಬಂದಿದೆ. ನಗರದ ಟಿಎಪಿಎಂಸಿಎಸ್ ಮಾರಾಟ ಮಳಿಗೆಯಲ್ಲಿ ಮಾತ್ರ   29 ಟನ್ ದಾಸ್ತಾನು ಇದ್ದು, ಬುಧವಾರ ಬೆಳಗಿನಿಂದಲೆ ನೂರಾರು ಜನ ರೈತರು ಯೂರಿಯಾ ಖರೀದಿಸಲು ಸಾಲುಗಟ್ಟಿ ನಿಂತಿದ್ದಾರೆ.

ಯೂರಿಯಾ ರಸಗೊಬ್ಬರ ದಾಸ್ತಾನು ಕೊರತೆ ಇರುವ ಹಿನ್ನೆಲೆ ಒಬ್ಬ ರೈತರಿಗೆ ಒಂದು ಚೀಲ ಮಾತ್ರ ನೀಡಲಾಗುತ್ತಿದೆ.

ಕೃಷಿ ಇಲಾಖೆ ಅಧಿಕಾರಿಗಳ ಮಾಹಿತಿಯಂತೆ ಮಂಗಳೂರಿನಿಂದ ಯೂರಿಯಾ ತುಂಬಿದ ಗೂಡ್ಸ್ ರೈಲು ಬರುವುದು ವಿಳಂಬವಾಗಿರುವುದರಿಂದ ಇನ್ನೂ ನಾಲ್ಕು ದಿನಗಳ ಒಳಗೆ 150 ಟನ್ ಬರಲಿದೆ ಎನ್ನಲಾಗಿದೆ.

Ramesh Babu

Journalist

Recent Posts

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

1 hour ago

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

10 hours ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

14 hours ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

23 hours ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

1 day ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

1 day ago