ರಾಗಿ, ಮುಸುಕಿನ ಜೋಳದ ಬೆಳೆಗೆ ಹಾಕುವ ಯೂರಿಯಾ ರಸಗೊಬ್ಬರ ಕೊಳ್ಳಲು ರಸಗೊಬ್ಬರ ಅಂಗಡಿಗಳ ಮುಂದೆ ರೈತರು ಸಾಲುಗಟ್ಟಿನಿಂತಿದ್ದಾರೆ.
ಕಳೆದ ಒಂದು ವಾರದಿಂದ ಮಳೆ ಬೀಳುತ್ತರುವ ಹಿನ್ನೆಲೆ ಬೆಳೆಗಳಿಗೆ ಕಳೆ ಬಂದಿದೆ. ಉತ್ತಮ ಫಸಲು ಬರಲೆಂದು ರೈತರು ಯೂರಿಯಾ ರಸಗೊಬ್ಬರ ಕೊಳ್ಳಲು ಮುಗಿಬಿದ್ದಿದ್ದಾರೆ.
ನಗರ ಸೇರಿದಂತೆ ತಾಲ್ಲೂಕಿನ ಎಲ್ಲಾ ರಸಗೊಬ್ಬರ ಮಾರಾಟದ ಅಂಗಡಿಗಳಲ್ಲೂ ಯೂರಿಯಾ ರಸಗೊಬ್ಬರ ದಾಸ್ತಾನು ಖಾಲಿಯಾಗಿದೆ ಎಂಬ ಮಾಹಿತಿ ಕೇಳಿ ಬಂದಿದೆ. ನಗರದ ಟಿಎಪಿಎಂಸಿಎಸ್ ಮಾರಾಟ ಮಳಿಗೆಯಲ್ಲಿ ಮಾತ್ರ 29 ಟನ್ ದಾಸ್ತಾನು ಇದ್ದು, ಬುಧವಾರ ಬೆಳಗಿನಿಂದಲೆ ನೂರಾರು ಜನ ರೈತರು ಯೂರಿಯಾ ಖರೀದಿಸಲು ಸಾಲುಗಟ್ಟಿ ನಿಂತಿದ್ದಾರೆ.
ಯೂರಿಯಾ ರಸಗೊಬ್ಬರ ದಾಸ್ತಾನು ಕೊರತೆ ಇರುವ ಹಿನ್ನೆಲೆ ಒಬ್ಬ ರೈತರಿಗೆ ಒಂದು ಚೀಲ ಮಾತ್ರ ನೀಡಲಾಗುತ್ತಿದೆ.
ಕೃಷಿ ಇಲಾಖೆ ಅಧಿಕಾರಿಗಳ ಮಾಹಿತಿಯಂತೆ ಮಂಗಳೂರಿನಿಂದ ಯೂರಿಯಾ ತುಂಬಿದ ಗೂಡ್ಸ್ ರೈಲು ಬರುವುದು ವಿಳಂಬವಾಗಿರುವುದರಿಂದ ಇನ್ನೂ ನಾಲ್ಕು ದಿನಗಳ ಒಳಗೆ 150 ಟನ್ ಬರಲಿದೆ ಎನ್ನಲಾಗಿದೆ.
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…