ರಾಗಿ, ಮುಸುಕಿನ ಜೋಳದ ಬೆಳೆಗೆ ಹಾಕುವ ಯೂರಿಯಾ ರಸಗೊಬ್ಬರ ಕೊಳ್ಳಲು ರಸಗೊಬ್ಬರ ಅಂಗಡಿಗಳ ಮುಂದೆ ರೈತರು ಸಾಲುಗಟ್ಟಿನಿಂತಿದ್ದಾರೆ.
ಕಳೆದ ಒಂದು ವಾರದಿಂದ ಮಳೆ ಬೀಳುತ್ತರುವ ಹಿನ್ನೆಲೆ ಬೆಳೆಗಳಿಗೆ ಕಳೆ ಬಂದಿದೆ. ಉತ್ತಮ ಫಸಲು ಬರಲೆಂದು ರೈತರು ಯೂರಿಯಾ ರಸಗೊಬ್ಬರ ಕೊಳ್ಳಲು ಮುಗಿಬಿದ್ದಿದ್ದಾರೆ.
ನಗರ ಸೇರಿದಂತೆ ತಾಲ್ಲೂಕಿನ ಎಲ್ಲಾ ರಸಗೊಬ್ಬರ ಮಾರಾಟದ ಅಂಗಡಿಗಳಲ್ಲೂ ಯೂರಿಯಾ ರಸಗೊಬ್ಬರ ದಾಸ್ತಾನು ಖಾಲಿಯಾಗಿದೆ ಎಂಬ ಮಾಹಿತಿ ಕೇಳಿ ಬಂದಿದೆ. ನಗರದ ಟಿಎಪಿಎಂಸಿಎಸ್ ಮಾರಾಟ ಮಳಿಗೆಯಲ್ಲಿ ಮಾತ್ರ 29 ಟನ್ ದಾಸ್ತಾನು ಇದ್ದು, ಬುಧವಾರ ಬೆಳಗಿನಿಂದಲೆ ನೂರಾರು ಜನ ರೈತರು ಯೂರಿಯಾ ಖರೀದಿಸಲು ಸಾಲುಗಟ್ಟಿ ನಿಂತಿದ್ದಾರೆ.
ಯೂರಿಯಾ ರಸಗೊಬ್ಬರ ದಾಸ್ತಾನು ಕೊರತೆ ಇರುವ ಹಿನ್ನೆಲೆ ಒಬ್ಬ ರೈತರಿಗೆ ಒಂದು ಚೀಲ ಮಾತ್ರ ನೀಡಲಾಗುತ್ತಿದೆ.
ಕೃಷಿ ಇಲಾಖೆ ಅಧಿಕಾರಿಗಳ ಮಾಹಿತಿಯಂತೆ ಮಂಗಳೂರಿನಿಂದ ಯೂರಿಯಾ ತುಂಬಿದ ಗೂಡ್ಸ್ ರೈಲು ಬರುವುದು ವಿಳಂಬವಾಗಿರುವುದರಿಂದ ಇನ್ನೂ ನಾಲ್ಕು ದಿನಗಳ ಒಳಗೆ 150 ಟನ್ ಬರಲಿದೆ ಎನ್ನಲಾಗಿದೆ.
ಇಂದು ಬೆಂಗಳೂರಿನ ಮಡಿವಾಳದಲ್ಲಿರುವ ಎಫ್ಎಸ್ಎಲ್ ಕಚೇರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಪರಿಶೀಲನಾ ಸಭೆ ನಡೆಸಿದರು. ಈ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…
ದೊಡ್ಡಬಳ್ಳಾಪುರ: ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ನೀಡಲಾಗುವ ಪ್ರತಿಷ್ಠಿತ 2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ…
ದೇವನಹಳ್ಳಿ: ಕೆಂಪೇಗೌಡರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ಕೆಲ ದಿನಗಳಲ್ಲಿ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಗಳಲ್ಲಿ ಮಾದಕ ವಸ್ತುಗಳು…
ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ರೌಡಿ ಶೀಟರ್ ಖಲೀಮ್ (35)…