ಶಿಡ್ಲಘಟ್ಟ : ಯೋಗ ಶಿಕ್ಷಕಿಯನ್ನು ಅರೆಬೆತ್ತಲೆಗೊಳಿಸಿ ಜೀವಂತ ಹೂತು ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾಸಗಿ ಡಿಟೆಕ್ಟಿವ್ ಏಜೆನ್ಸಿ ಮಾಲೀಕ ಸತೀಶ್ರೆಡ್ಡಿ, ರಮಣ, ಸಲ್ಮಾನ್, ರವಿ ಎಂಬುವವರನ್ನು ದಿಬ್ಬೂರಹಳ್ಳಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಶಿಡ್ಲಘಟ್ಟ ತಾಲೂಕಿನ ದಿಬ್ಬೂರಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು.
ಆರೋಪಿ ಸತೀಶ್ ರೆಡ್ಡಿ ಯೋಗ ಶಿಕ್ಷಕಿಯ ಬಳಿ ಯೋಗ ಕಲಿಯುವುದಕ್ಕೆ ಹೊಗುತ್ತಿದ್ದ. ನಂತರ ಗನ್ ತರಬೇತಿ ಕೊಡುವುದಾಗಿ ಆಕೆಯ ಮನೆಗೆ ಬಂದಿದ್ದ. ಈ ವೇಳೆ ಆರೋಪಿಗಳ ಗ್ಯಾಂಗ್ ಶಿಕ್ಷಕಿಯನ್ನು ಅಪಹರಿಸಿತ್ತು.
ಬೆಂಗಳೂರಿನ ಕೆ.ಆರ್.ಪುರಂ ನಿವಾಸಿಯಾದ ಶಿಕ್ಷಕಿಯನ್ನು ಅ.23 ರಂದು ಆರೋಪಿಗಳ ಗ್ಯಾಂಗ್ ಅಪಹರಿಸಿತ್ತು. ಬಳಿಕ ಶಿಡ್ಲಘಟ್ಟ ತಾಲ್ಲೂಕಿನ ಧನಮಿಟ್ಟೇನಹಳ್ಳಿ ಬಳಿ ಜೀವಂತವಾಗಿ ಹೂತು ಹಾಕಲಾಗಿತ್ತು. ಸತ್ತಂತೆ ನಟಿಸಿದ್ದ ಶಿಕ್ಷಕಿ ಬಳಿಕ ಸ್ಥಳೀಯರ ಬಳಿ ಬಟ್ಟೆ ಪಡೆದುಕೊಂಡು ಬಂದು ದಿಬ್ಬೂರಹಳ್ಳಿ ಠಾಣೆಗೆ ಆಗಮಿಸಿದ್ದಾರೆ. ಕೊಲೆಗೆ ಯತ್ನ, ಅಪಹರಣ, ಅತ್ಯಾಚಾರಕ್ಕೆ ಯತ್ನಿಸಿದ್ದಾರೆಂದು ದೂರು ನೀಡಿದ್ದಾರೆ.
ಮಹಿಳೆ ದೂರು ಆಧರಿಸಿ ಆರೋಪಿಗಳ ಪತ್ತೆಗೆ ಎಸ್ಪಿ ಕುಶಾಲ್ ಚೌಕ್ಸೆ ಆದೇಶದಂತೆ ಸರ್ಕಲ್ ಇನ್ಸ್ಪೆಕ್ಟರ್ ಎಂ ಶ್ರೀನಿವಾಸ್ ಸಹಕಾರದೊಂದಿಗೆ ಪಿಎಸ್ ಐ ಶ್ಯಾಮಲ ಹಾಗೂ ವಿಶೇಷ ತನಿಖಾ ತಂಡ ರಚಿಸಿ ಸದ್ಯ ಆರೋಪಿಗಳನ್ನು ಬಂಧಿಸಿದ್ದಾರೆ.
ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…
ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…
ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…
ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…
ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…