ಶಿಡ್ಲಘಟ್ಟ : ಯೋಗ ಶಿಕ್ಷಕಿಯನ್ನು ಅರೆಬೆತ್ತಲೆಗೊಳಿಸಿ ಜೀವಂತ ಹೂತು ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾಸಗಿ ಡಿಟೆಕ್ಟಿವ್ ಏಜೆನ್ಸಿ ಮಾಲೀಕ ಸತೀಶ್ರೆಡ್ಡಿ, ರಮಣ, ಸಲ್ಮಾನ್, ರವಿ ಎಂಬುವವರನ್ನು ದಿಬ್ಬೂರಹಳ್ಳಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಶಿಡ್ಲಘಟ್ಟ ತಾಲೂಕಿನ ದಿಬ್ಬೂರಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು.
ಆರೋಪಿ ಸತೀಶ್ ರೆಡ್ಡಿ ಯೋಗ ಶಿಕ್ಷಕಿಯ ಬಳಿ ಯೋಗ ಕಲಿಯುವುದಕ್ಕೆ ಹೊಗುತ್ತಿದ್ದ. ನಂತರ ಗನ್ ತರಬೇತಿ ಕೊಡುವುದಾಗಿ ಆಕೆಯ ಮನೆಗೆ ಬಂದಿದ್ದ. ಈ ವೇಳೆ ಆರೋಪಿಗಳ ಗ್ಯಾಂಗ್ ಶಿಕ್ಷಕಿಯನ್ನು ಅಪಹರಿಸಿತ್ತು.
ಬೆಂಗಳೂರಿನ ಕೆ.ಆರ್.ಪುರಂ ನಿವಾಸಿಯಾದ ಶಿಕ್ಷಕಿಯನ್ನು ಅ.23 ರಂದು ಆರೋಪಿಗಳ ಗ್ಯಾಂಗ್ ಅಪಹರಿಸಿತ್ತು. ಬಳಿಕ ಶಿಡ್ಲಘಟ್ಟ ತಾಲ್ಲೂಕಿನ ಧನಮಿಟ್ಟೇನಹಳ್ಳಿ ಬಳಿ ಜೀವಂತವಾಗಿ ಹೂತು ಹಾಕಲಾಗಿತ್ತು. ಸತ್ತಂತೆ ನಟಿಸಿದ್ದ ಶಿಕ್ಷಕಿ ಬಳಿಕ ಸ್ಥಳೀಯರ ಬಳಿ ಬಟ್ಟೆ ಪಡೆದುಕೊಂಡು ಬಂದು ದಿಬ್ಬೂರಹಳ್ಳಿ ಠಾಣೆಗೆ ಆಗಮಿಸಿದ್ದಾರೆ. ಕೊಲೆಗೆ ಯತ್ನ, ಅಪಹರಣ, ಅತ್ಯಾಚಾರಕ್ಕೆ ಯತ್ನಿಸಿದ್ದಾರೆಂದು ದೂರು ನೀಡಿದ್ದಾರೆ.
ಮಹಿಳೆ ದೂರು ಆಧರಿಸಿ ಆರೋಪಿಗಳ ಪತ್ತೆಗೆ ಎಸ್ಪಿ ಕುಶಾಲ್ ಚೌಕ್ಸೆ ಆದೇಶದಂತೆ ಸರ್ಕಲ್ ಇನ್ಸ್ಪೆಕ್ಟರ್ ಎಂ ಶ್ರೀನಿವಾಸ್ ಸಹಕಾರದೊಂದಿಗೆ ಪಿಎಸ್ ಐ ಶ್ಯಾಮಲ ಹಾಗೂ ವಿಶೇಷ ತನಿಖಾ ತಂಡ ರಚಿಸಿ ಸದ್ಯ ಆರೋಪಿಗಳನ್ನು ಬಂಧಿಸಿದ್ದಾರೆ.
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…