ಶಿಡ್ಲಘಟ್ಟ : ಯೋಗ ಶಿಕ್ಷಕಿಯನ್ನು ಅರೆಬೆತ್ತಲೆಗೊಳಿಸಿ ಜೀವಂತ ಹೂತು ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾಸಗಿ ಡಿಟೆಕ್ಟಿವ್ ಏಜೆನ್ಸಿ ಮಾಲೀಕ ಸತೀಶ್ರೆಡ್ಡಿ, ರಮಣ, ಸಲ್ಮಾನ್, ರವಿ ಎಂಬುವವರನ್ನು ದಿಬ್ಬೂರಹಳ್ಳಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಶಿಡ್ಲಘಟ್ಟ ತಾಲೂಕಿನ ದಿಬ್ಬೂರಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು.
ಆರೋಪಿ ಸತೀಶ್ ರೆಡ್ಡಿ ಯೋಗ ಶಿಕ್ಷಕಿಯ ಬಳಿ ಯೋಗ ಕಲಿಯುವುದಕ್ಕೆ ಹೊಗುತ್ತಿದ್ದ. ನಂತರ ಗನ್ ತರಬೇತಿ ಕೊಡುವುದಾಗಿ ಆಕೆಯ ಮನೆಗೆ ಬಂದಿದ್ದ. ಈ ವೇಳೆ ಆರೋಪಿಗಳ ಗ್ಯಾಂಗ್ ಶಿಕ್ಷಕಿಯನ್ನು ಅಪಹರಿಸಿತ್ತು.
ಬೆಂಗಳೂರಿನ ಕೆ.ಆರ್.ಪುರಂ ನಿವಾಸಿಯಾದ ಶಿಕ್ಷಕಿಯನ್ನು ಅ.23 ರಂದು ಆರೋಪಿಗಳ ಗ್ಯಾಂಗ್ ಅಪಹರಿಸಿತ್ತು. ಬಳಿಕ ಶಿಡ್ಲಘಟ್ಟ ತಾಲ್ಲೂಕಿನ ಧನಮಿಟ್ಟೇನಹಳ್ಳಿ ಬಳಿ ಜೀವಂತವಾಗಿ ಹೂತು ಹಾಕಲಾಗಿತ್ತು. ಸತ್ತಂತೆ ನಟಿಸಿದ್ದ ಶಿಕ್ಷಕಿ ಬಳಿಕ ಸ್ಥಳೀಯರ ಬಳಿ ಬಟ್ಟೆ ಪಡೆದುಕೊಂಡು ಬಂದು ದಿಬ್ಬೂರಹಳ್ಳಿ ಠಾಣೆಗೆ ಆಗಮಿಸಿದ್ದಾರೆ. ಕೊಲೆಗೆ ಯತ್ನ, ಅಪಹರಣ, ಅತ್ಯಾಚಾರಕ್ಕೆ ಯತ್ನಿಸಿದ್ದಾರೆಂದು ದೂರು ನೀಡಿದ್ದಾರೆ.
ಮಹಿಳೆ ದೂರು ಆಧರಿಸಿ ಆರೋಪಿಗಳ ಪತ್ತೆಗೆ ಎಸ್ಪಿ ಕುಶಾಲ್ ಚೌಕ್ಸೆ ಆದೇಶದಂತೆ ಸರ್ಕಲ್ ಇನ್ಸ್ಪೆಕ್ಟರ್ ಎಂ ಶ್ರೀನಿವಾಸ್ ಸಹಕಾರದೊಂದಿಗೆ ಪಿಎಸ್ ಐ ಶ್ಯಾಮಲ ಹಾಗೂ ವಿಶೇಷ ತನಿಖಾ ತಂಡ ರಚಿಸಿ ಸದ್ಯ ಆರೋಪಿಗಳನ್ನು ಬಂಧಿಸಿದ್ದಾರೆ.
ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…