ಶಿಡ್ಲಘಟ್ಟ : ಯೋಗ ಶಿಕ್ಷಕಿಯನ್ನು ಅರೆಬೆತ್ತಲೆಗೊಳಿಸಿ ಜೀವಂತ ಹೂತು ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾಸಗಿ ಡಿಟೆಕ್ಟಿವ್ ಏಜೆನ್ಸಿ ಮಾಲೀಕ ಸತೀಶ್ರೆಡ್ಡಿ, ರಮಣ, ಸಲ್ಮಾನ್, ರವಿ ಎಂಬುವವರನ್ನು ದಿಬ್ಬೂರಹಳ್ಳಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಶಿಡ್ಲಘಟ್ಟ ತಾಲೂಕಿನ ದಿಬ್ಬೂರಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು.
ಆರೋಪಿ ಸತೀಶ್ ರೆಡ್ಡಿ ಯೋಗ ಶಿಕ್ಷಕಿಯ ಬಳಿ ಯೋಗ ಕಲಿಯುವುದಕ್ಕೆ ಹೊಗುತ್ತಿದ್ದ. ನಂತರ ಗನ್ ತರಬೇತಿ ಕೊಡುವುದಾಗಿ ಆಕೆಯ ಮನೆಗೆ ಬಂದಿದ್ದ. ಈ ವೇಳೆ ಆರೋಪಿಗಳ ಗ್ಯಾಂಗ್ ಶಿಕ್ಷಕಿಯನ್ನು ಅಪಹರಿಸಿತ್ತು.
ಬೆಂಗಳೂರಿನ ಕೆ.ಆರ್.ಪುರಂ ನಿವಾಸಿಯಾದ ಶಿಕ್ಷಕಿಯನ್ನು ಅ.23 ರಂದು ಆರೋಪಿಗಳ ಗ್ಯಾಂಗ್ ಅಪಹರಿಸಿತ್ತು. ಬಳಿಕ ಶಿಡ್ಲಘಟ್ಟ ತಾಲ್ಲೂಕಿನ ಧನಮಿಟ್ಟೇನಹಳ್ಳಿ ಬಳಿ ಜೀವಂತವಾಗಿ ಹೂತು ಹಾಕಲಾಗಿತ್ತು. ಸತ್ತಂತೆ ನಟಿಸಿದ್ದ ಶಿಕ್ಷಕಿ ಬಳಿಕ ಸ್ಥಳೀಯರ ಬಳಿ ಬಟ್ಟೆ ಪಡೆದುಕೊಂಡು ಬಂದು ದಿಬ್ಬೂರಹಳ್ಳಿ ಠಾಣೆಗೆ ಆಗಮಿಸಿದ್ದಾರೆ. ಕೊಲೆಗೆ ಯತ್ನ, ಅಪಹರಣ, ಅತ್ಯಾಚಾರಕ್ಕೆ ಯತ್ನಿಸಿದ್ದಾರೆಂದು ದೂರು ನೀಡಿದ್ದಾರೆ.
ಮಹಿಳೆ ದೂರು ಆಧರಿಸಿ ಆರೋಪಿಗಳ ಪತ್ತೆಗೆ ಎಸ್ಪಿ ಕುಶಾಲ್ ಚೌಕ್ಸೆ ಆದೇಶದಂತೆ ಸರ್ಕಲ್ ಇನ್ಸ್ಪೆಕ್ಟರ್ ಎಂ ಶ್ರೀನಿವಾಸ್ ಸಹಕಾರದೊಂದಿಗೆ ಪಿಎಸ್ ಐ ಶ್ಯಾಮಲ ಹಾಗೂ ವಿಶೇಷ ತನಿಖಾ ತಂಡ ರಚಿಸಿ ಸದ್ಯ ಆರೋಪಿಗಳನ್ನು ಬಂಧಿಸಿದ್ದಾರೆ.
ಚಿಕ್ಕಬಳ್ಳಾಪುರ: ಜಿಲ್ಲೆಯ ತಾಲೂಕಿನ ಅರಸನಹಳ್ಳಿಯಲ್ಲಿ ತಡರಾತ್ರಿ ಭೀಕರ ಘಟನೆಯೊಂದು ನಡೆದಿದೆ. ಮದುವೆ ಕಾರ್ಯಕ್ರಮವಿದ್ದ ಮನೆಯ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಕಿಡಿಗೇಡಿಗಳು…
ಶನೇಶ್ವರ ಜಯಂತಿ ಹಾಗೂ ಅಮಾವಾಸ್ಯೆ ಒಂದೇ ದಿನ ಬಂದಿರುವ ಹಿನ್ನೆಲೆ ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಶನೇಶ್ವರ ದೇವಸ್ಥಾನದಲ್ಲಿ ಅಪಾರ ಭಕ್ತಸಾಗರ…
ಬೆಂಗಳೂರು: ಬೆಂಗಳೂರು ನಗರ ಹಾಗೂ ಗ್ರಾಮಾಂತರ ಭಾಗಗಳಿಗೆ ಪ್ರಯಾಣಿಸುವ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಬಿಎಂಟಿಸಿ(Bangalore Metropolitan Transport Corporation) ಮೇ 18ರಿಂದ…
ದೊಡ್ಡಬಳ್ಳಾಪುರ: ತಾಲೂಕಿನ ಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.…
ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿರುವುದನ್ನು ರಾಜ್ಯ ಸರ್ಕಾರ ಖಂಡಿಸಲಿದ್ದು, ಬೆಲೆ ಏರಿಕೆಯನ್ನು ಹಿಂಪಡೆಯಲು ಒತ್ತಾಯಿಸುತ್ತೇವೆ ಎಂದು ಸಿಎಂ…
ಬಾಲ್ಯ ವಿವಾಹಗಳನ್ನು ತಡೆಯುವ ನಿಟ್ಟಿನಲ್ಲಿ ಅಧಿಕಾರಿಗಳು ಸದಾ ಜಾಗೃತರಾಗಿದ್ದು, ಕಳೆದ ಆರ್ಥಿಕ ವರ್ಷ ಜಿಲ್ಲೆಯಲ್ಲಿ 24 ಬಾಲ್ಯ ವಿವಾಹ ಪ್ರಕರಣಗಳನ್ನು…