ಶಿಡ್ಲಘಟ್ಟ : ಯೋಗ ಶಿಕ್ಷಕಿಯನ್ನು ಅರೆಬೆತ್ತಲೆಗೊಳಿಸಿ ಜೀವಂತ ಹೂತು ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾಸಗಿ ಡಿಟೆಕ್ಟಿವ್ ಏಜೆನ್ಸಿ ಮಾಲೀಕ ಸತೀಶ್ರೆಡ್ಡಿ, ರಮಣ, ಸಲ್ಮಾನ್, ರವಿ ಎಂಬುವವರನ್ನು ದಿಬ್ಬೂರಹಳ್ಳಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಶಿಡ್ಲಘಟ್ಟ ತಾಲೂಕಿನ ದಿಬ್ಬೂರಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು.
ಆರೋಪಿ ಸತೀಶ್ ರೆಡ್ಡಿ ಯೋಗ ಶಿಕ್ಷಕಿಯ ಬಳಿ ಯೋಗ ಕಲಿಯುವುದಕ್ಕೆ ಹೊಗುತ್ತಿದ್ದ. ನಂತರ ಗನ್ ತರಬೇತಿ ಕೊಡುವುದಾಗಿ ಆಕೆಯ ಮನೆಗೆ ಬಂದಿದ್ದ. ಈ ವೇಳೆ ಆರೋಪಿಗಳ ಗ್ಯಾಂಗ್ ಶಿಕ್ಷಕಿಯನ್ನು ಅಪಹರಿಸಿತ್ತು.
ಬೆಂಗಳೂರಿನ ಕೆ.ಆರ್.ಪುರಂ ನಿವಾಸಿಯಾದ ಶಿಕ್ಷಕಿಯನ್ನು ಅ.23 ರಂದು ಆರೋಪಿಗಳ ಗ್ಯಾಂಗ್ ಅಪಹರಿಸಿತ್ತು. ಬಳಿಕ ಶಿಡ್ಲಘಟ್ಟ ತಾಲ್ಲೂಕಿನ ಧನಮಿಟ್ಟೇನಹಳ್ಳಿ ಬಳಿ ಜೀವಂತವಾಗಿ ಹೂತು ಹಾಕಲಾಗಿತ್ತು. ಸತ್ತಂತೆ ನಟಿಸಿದ್ದ ಶಿಕ್ಷಕಿ ಬಳಿಕ ಸ್ಥಳೀಯರ ಬಳಿ ಬಟ್ಟೆ ಪಡೆದುಕೊಂಡು ಬಂದು ದಿಬ್ಬೂರಹಳ್ಳಿ ಠಾಣೆಗೆ ಆಗಮಿಸಿದ್ದಾರೆ. ಕೊಲೆಗೆ ಯತ್ನ, ಅಪಹರಣ, ಅತ್ಯಾಚಾರಕ್ಕೆ ಯತ್ನಿಸಿದ್ದಾರೆಂದು ದೂರು ನೀಡಿದ್ದಾರೆ.
ಮಹಿಳೆ ದೂರು ಆಧರಿಸಿ ಆರೋಪಿಗಳ ಪತ್ತೆಗೆ ಎಸ್ಪಿ ಕುಶಾಲ್ ಚೌಕ್ಸೆ ಆದೇಶದಂತೆ ಸರ್ಕಲ್ ಇನ್ಸ್ಪೆಕ್ಟರ್ ಎಂ ಶ್ರೀನಿವಾಸ್ ಸಹಕಾರದೊಂದಿಗೆ ಪಿಎಸ್ ಐ ಶ್ಯಾಮಲ ಹಾಗೂ ವಿಶೇಷ ತನಿಖಾ ತಂಡ ರಚಿಸಿ ಸದ್ಯ ಆರೋಪಿಗಳನ್ನು ಬಂಧಿಸಿದ್ದಾರೆ.
ದೊಡ್ಡಬಳ್ಳಾಪುರ ತಾಲೂಕಿನ ಪಾಲನಜೋಗಹಳ್ಳಿ ಸಮೀಪ ಹಿಂದೂಪುರ–ಯಲಹಂಕ ರಾಜ್ಯ ಹೆದ್ದಾರಿಯಲ್ಲಿ ಬಸ್ ಹಾಗೂ ನೀರಿನ ಟ್ಯಾಂಕರ್ ಹೊತ್ತ ಟ್ರ್ಯಾಕ್ಟರ್ ನಡುವೆ ಸಂಭವಿಸಿದ…
ಚಿಕ್ಕಬಳ್ಳಾಪುರ: ಶಾಸಕ ಪ್ರದೀಪ್ ಈಶ್ವರ್ ಅವರ ಕಾರಿಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಬೆಂಬಲಿಗರು ಮುತ್ತಿಗೆ ಹಾಕಿದ ಘಟನೆ ಶನಿವಾರ…
ದೇವನಹಳ್ಳಿ: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ…
ಬೆಂಗಳೂರು: ನಾಡಪ್ರಭು ಕೆಂಪೇಗೌಡರ 517ನೇ ಜಯಂತಿಯ ಅಂಗವಾಗಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…
ದೇವನಹಳ್ಳಿ: 517ನೇ ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ಶನಿವಾರ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ…
ಪ್ರತೀಕಾರಾತ್ಮಕ ಅಶ್ಲೀಲತೆ , ಸೆಕ್ಸ್ಟಾರ್ಷನ್ ಹಾಗೂ ಬ್ಲ್ಯಾಕ್ಮೇಲ್ ವಿಡಿಯೋಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಕಡ್ಡಾಯವಾಗಿ ಎಫ್ಐಆರ್ ದಾಖಲಿಸುವಂತೆ ಗೃಹ ಇಲಾಖೆಗೆ ಸೂಚನೆ…