ಯೋಜನಾ ನಿರ್ದೇಶಕ ಮತ್ತು ಗುಮಾಸ್ತ ಕಂ ಲೆಕ್ಕಿಗ ಹುದ್ದೆಗೆ ಅರ್ಜಿ ಆಹ್ವಾನ

ಜಿಲ್ಲಾ ಬಾಲಕಾರ್ಮಿಕ ಯೋಜನೆಯಲ್ಲಿ ಯೋಜನಾ ನಿರ್ದೇಶಕ ಮತ್ತು ಗುಮಾಸ್ತ ಕಂ ಲೆಕ್ಕಿಗ ಹುದ್ದೆಗೆ ಗೌರವಧನ ಆಧಾರದ ಮೇರೆಗೆ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಯೋಜನಾ ನಿರ್ದೇಶಕ 01 ಹುದ್ದೆಗೆ ಮಾಸಿಕ ಗೌರವಧನ 31,763 ಹಾಗೂ ಪ್ರಯಾಣ ಭತ್ಯೆ 3,000 ನೀಡಿ 1 ವರ್ಷ ಅವಧಿ ವರೆಗೆ ನೇಮಕಾತಿ ಮಾಡಿಕೊಳ್ಳಲಾಗುವುದು. ಯೋಜನಾ ನಿರ್ದೇಶಕ ಹುದ್ದೆಗೆ ಸಮಾಜ ಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ/ ಎಂ.ಎಸ್.ಡಬ್ಲೂ/ ಅಭಿವೃದ್ಧಿ ಅಧ್ಯಯನ/ ಲಾಭರಹಿತ ಸಂಸ್ಥೆಗಳ (ಎನ್ ಜಿಒ ) ನಿರ್ವಹಣಾ ಶಾಸ್ತ್ರ ಸ್ನಾತಕೋತ್ತರ ಪದವಿಯನ್ನು ಹೊಂದಿರಬೇಕು. ವಿವಿಧ ಸಾಮಾಜಿಕ ಕಾರ್ಯಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿದ ಕುರಿತು 05 ವರ್ಷಗಳ ಸೇವಾ ಅನುಭವ ಹೊಂದಿರಬೇಕು. ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಮಾಡುವಲ್ಲಿ ಅನುಭವ ಹೊಂದಿರುವವರಿಗೆ ಆದ್ಯತೆಯನ್ನು ನೀಡಲಾಗುವುದು. ಕನ್ನಡ ಮತ್ತು ಇಂಗ್ಲೀಷ್ ಮಾತನಾಡುವ ಹಾಗೂ ಬರೆಯುವಲ್ಲಿ ಉತ್ತಮ ಕೌಶಲ್ಯ ಹೊಂದಿರಬೇಕು. ಕಂಪ್ಯೂಟರ್ ಜ್ಞಾನವನ್ನು ಹೊಂದಿರುವುದು ಅವಶ್ಯಕವಾಗಿರುತ್ತದೆ (MS Office, MS Excel & MS Powerpoint & Internet Operation.). ಕಂಪ್ಯೂಟರ್ ಜ್ಞಾನದ ಬಗ್ಗೆ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಹೊಂದಿರಬೇಕು. 40 ವಯೋಮಾನ ಮೀರಿರಬಾರದು. ಕಛೇರಿಯ ಲೆಕ್ಕಪತ್ರಗಳ ವ್ಯವಹಾರವನ್ನು ಅರಿತಿರಬೇಕು. ಕಛೇರಿಯ ಲೆಕ್ಕಪತ್ರಗಳ ವ್ಯವಹಾರವನ್ನು ಅರಿತಿರಬೇಕು. ಯಾವುದೇ ಸರ್ಕಾರಿ ಕೆಲಸದಿಂದ ವಜಾಗೊಂಡಿರುವ ಹಾಗೂ ನಿವೃತ್ತಿ ಹೊಂದಿರುವ ಮತ್ತು ಸರ್ಕಾರಿ ಕೆಲಸ ನಿರ್ವಹಿಸುತ್ತಿರುವ ವ್ಯಕ್ತಿಗಳಾಗಿರಬಾರದು.

ಗುಮಾಸ್ತ ಕಂ ಲೆಕ್ಕಿಗ 01 ಹುದ್ದೆಗೆ ಮಾಸಿಕ ಗೌರವಧನ 21,909 ನೀಡಿ 1 ವರ್ಷ ಅವಧಿ ವರೆಗೆ ನೇಮಕಾತಿ ಮಾಡಿಕೊಳ್ಳಲಾಗುವುದು. ಗುಮಾಸ್ತ ಕಂ ಲೆಕ್ಕಿಗ ಹುದ್ದೆಗೆ ಬಿ.ಕಾಂ ಪದವಿ ಹೊಂದಿರಬೇಕು. ಲೆಕ್ಕಪತ್ರಗಳನ್ನು ನಿರ್ವಹಿಸುವಲ್ಲಿ/ ಅಕೌಂಟೆಂಟ್ ಹುದ್ದೆಯಲ್ಲಿ ಕನಿಷ್ಠ 05 ವರ್ಷಗಳ ಅನುಭವ ಹೊಂದಿರಬೇಕು. ಲೆಕ್ಕ ಪತ್ರದಲ್ಲಿ ಬ್ಯಾಂಕ್ ವ್ಯವಹಾರಗಳನ್ನು, ಸರ್ಕಾರದ ಲೆಕ್ಕಪತ್ರಗಳನ್ನು ತಯಾರಿಸುವ ಲೆಕ್ಕಪತ್ರಗಳಿಗೆ ಸಂಬಂಧಿಸಿದ ದಾಖಲಾತಿಗಳು, ರಿಜಿಸ್ಟರ್ಗಳ ಕುರಿತು ಮಾಹಿತಿಯನ್ನು ಹೊಂದಿರಬೇಕು. ಕನ್ನಡ ಮತ್ತು ಇಂಗ್ಲೀಷ್ ಮಾತನಾಡುವ ಹಾಗೂ ಬರೆಯುವಲ್ಲಿ ಉತ್ತಮ ಕೌಶಲ್ಯ ಹೊಂದಿರಬೇಕು. ಕಂಪ್ಯೂಟರ್ ಜ್ಞಾನವನ್ನು ಹೊಂದಿರುವುದು ಅವಶ್ಯಕವಾಗಿರುತ್ತದೆ. ಟ್ಯಾಲಿ ಸಾಪ್ಟವೇರ್ ಕಂಪ್ಯೂಟರ್ ಜ್ಞಾನದ ಬಗ್ಗೆ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಹೊಂದಿರಬೇಕು. 40 ವಯೋಮಾನ ಮೀರಿರಬಾರದು. ಕಛೇರಿಯ ಪತ್ರ ವ್ಯವಹಾರಗಳು, ಲೆಕ್ಕಪತ್ರಗಳ ವ್ಯವಹಾರವನ್ನು ಗಣಕೀಕೃತದಲ್ಲಿ ನಮೂದಿಸಿ. ಕೇಂದ್ರ ಕಛೇರಿಗಳಿಗೆ ಗಣಕ ಯಂತ್ರ ಮೂಲಕ ಕಳುಹಿಸುವ ಕುರಿತು ಪರಿಣತಿ ಹೊಂದಿರಬೇಕು.

ಅರ್ಹ ಅಭ್ಯರ್ಥಿಗಳು ಆಗಸ್ಟ್ 20 ರೊಳಗಾಗಿ ಕಾರ್ಮಿಕ ಅಧಿಕಾರಿ ಹಾಗೂ ಸದಸ್ಯ ಕಾರ್ಯದರ್ಶಿ- ಜಿಲ್ಲಾ ಬಾಲಕಾರ್ಮಿಕ ಯೋಜನೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ, 5 ನೇ ಮುಖ್ಯ ರಸ್ತೆ, 2 ನೇ ಹಂತ, ಸೋಮೇಶ್ವರ ಬಡಾವಣೆ, ದೊಡ್ಡಬಳ್ಳಾಪುರ-561203 ಇಲ್ಲಿ ನೇರವಾಗಿ ಅರ್ಜಿ ಸಲ್ಲಿಸತಕ್ಕದ್ದು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080-27622133, ಇಮೇಲ್ ವಿಳಾಸ lobngrural@gmail.com ಅಥವಾ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಬಾಲ ಕಾರ್ಮಿಕ ಯೋಜನೆ ಕಾರ್ಮಿಕ ಅಧಿಕಾರಿ ಮತ್ತು ಸದಸ್ಯ ಕಾರ್ಯದರ್ಶಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

1 hour ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

1 hour ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

9 hours ago

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಕ್ಷಯರೋಗದ ಆತಂಕ: ಏಳು ತಿಂಗಳಲ್ಲಿ 26,531 ಮಂದಿಗೆ ಕಫ ಪರೀಕ್ಷೆ; 434 ಪ್ರಕರಣಗಳು ಪತ್ತೆ, 530 ಸಕ್ರಿಯ ರೋಗಿಗಳು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…

2 days ago

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

3 days ago