ಯೋಜನಾ ನಿರ್ದೇಶಕ ಮತ್ತು ಗುಮಾಸ್ತ ಕಂ ಲೆಕ್ಕಿಗ ಹುದ್ದೆಗೆ ಅರ್ಜಿ ಆಹ್ವಾನ

ಜಿಲ್ಲಾ ಬಾಲಕಾರ್ಮಿಕ ಯೋಜನೆಯಲ್ಲಿ ಯೋಜನಾ ನಿರ್ದೇಶಕ ಮತ್ತು ಗುಮಾಸ್ತ ಕಂ ಲೆಕ್ಕಿಗ ಹುದ್ದೆಗೆ ಗೌರವಧನ ಆಧಾರದ ಮೇರೆಗೆ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಯೋಜನಾ ನಿರ್ದೇಶಕ 01 ಹುದ್ದೆಗೆ ಮಾಸಿಕ ಗೌರವಧನ 31,763 ಹಾಗೂ ಪ್ರಯಾಣ ಭತ್ಯೆ 3,000 ನೀಡಿ 1 ವರ್ಷ ಅವಧಿ ವರೆಗೆ ನೇಮಕಾತಿ ಮಾಡಿಕೊಳ್ಳಲಾಗುವುದು. ಯೋಜನಾ ನಿರ್ದೇಶಕ ಹುದ್ದೆಗೆ ಸಮಾಜ ಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ/ ಎಂ.ಎಸ್.ಡಬ್ಲೂ/ ಅಭಿವೃದ್ಧಿ ಅಧ್ಯಯನ/ ಲಾಭರಹಿತ ಸಂಸ್ಥೆಗಳ (ಎನ್ ಜಿಒ ) ನಿರ್ವಹಣಾ ಶಾಸ್ತ್ರ ಸ್ನಾತಕೋತ್ತರ ಪದವಿಯನ್ನು ಹೊಂದಿರಬೇಕು. ವಿವಿಧ ಸಾಮಾಜಿಕ ಕಾರ್ಯಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿದ ಕುರಿತು 05 ವರ್ಷಗಳ ಸೇವಾ ಅನುಭವ ಹೊಂದಿರಬೇಕು. ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಮಾಡುವಲ್ಲಿ ಅನುಭವ ಹೊಂದಿರುವವರಿಗೆ ಆದ್ಯತೆಯನ್ನು ನೀಡಲಾಗುವುದು. ಕನ್ನಡ ಮತ್ತು ಇಂಗ್ಲೀಷ್ ಮಾತನಾಡುವ ಹಾಗೂ ಬರೆಯುವಲ್ಲಿ ಉತ್ತಮ ಕೌಶಲ್ಯ ಹೊಂದಿರಬೇಕು. ಕಂಪ್ಯೂಟರ್ ಜ್ಞಾನವನ್ನು ಹೊಂದಿರುವುದು ಅವಶ್ಯಕವಾಗಿರುತ್ತದೆ (MS Office, MS Excel & MS Powerpoint & Internet Operation.). ಕಂಪ್ಯೂಟರ್ ಜ್ಞಾನದ ಬಗ್ಗೆ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಹೊಂದಿರಬೇಕು. 40 ವಯೋಮಾನ ಮೀರಿರಬಾರದು. ಕಛೇರಿಯ ಲೆಕ್ಕಪತ್ರಗಳ ವ್ಯವಹಾರವನ್ನು ಅರಿತಿರಬೇಕು. ಕಛೇರಿಯ ಲೆಕ್ಕಪತ್ರಗಳ ವ್ಯವಹಾರವನ್ನು ಅರಿತಿರಬೇಕು. ಯಾವುದೇ ಸರ್ಕಾರಿ ಕೆಲಸದಿಂದ ವಜಾಗೊಂಡಿರುವ ಹಾಗೂ ನಿವೃತ್ತಿ ಹೊಂದಿರುವ ಮತ್ತು ಸರ್ಕಾರಿ ಕೆಲಸ ನಿರ್ವಹಿಸುತ್ತಿರುವ ವ್ಯಕ್ತಿಗಳಾಗಿರಬಾರದು.

ಗುಮಾಸ್ತ ಕಂ ಲೆಕ್ಕಿಗ 01 ಹುದ್ದೆಗೆ ಮಾಸಿಕ ಗೌರವಧನ 21,909 ನೀಡಿ 1 ವರ್ಷ ಅವಧಿ ವರೆಗೆ ನೇಮಕಾತಿ ಮಾಡಿಕೊಳ್ಳಲಾಗುವುದು. ಗುಮಾಸ್ತ ಕಂ ಲೆಕ್ಕಿಗ ಹುದ್ದೆಗೆ ಬಿ.ಕಾಂ ಪದವಿ ಹೊಂದಿರಬೇಕು. ಲೆಕ್ಕಪತ್ರಗಳನ್ನು ನಿರ್ವಹಿಸುವಲ್ಲಿ/ ಅಕೌಂಟೆಂಟ್ ಹುದ್ದೆಯಲ್ಲಿ ಕನಿಷ್ಠ 05 ವರ್ಷಗಳ ಅನುಭವ ಹೊಂದಿರಬೇಕು. ಲೆಕ್ಕ ಪತ್ರದಲ್ಲಿ ಬ್ಯಾಂಕ್ ವ್ಯವಹಾರಗಳನ್ನು, ಸರ್ಕಾರದ ಲೆಕ್ಕಪತ್ರಗಳನ್ನು ತಯಾರಿಸುವ ಲೆಕ್ಕಪತ್ರಗಳಿಗೆ ಸಂಬಂಧಿಸಿದ ದಾಖಲಾತಿಗಳು, ರಿಜಿಸ್ಟರ್ಗಳ ಕುರಿತು ಮಾಹಿತಿಯನ್ನು ಹೊಂದಿರಬೇಕು. ಕನ್ನಡ ಮತ್ತು ಇಂಗ್ಲೀಷ್ ಮಾತನಾಡುವ ಹಾಗೂ ಬರೆಯುವಲ್ಲಿ ಉತ್ತಮ ಕೌಶಲ್ಯ ಹೊಂದಿರಬೇಕು. ಕಂಪ್ಯೂಟರ್ ಜ್ಞಾನವನ್ನು ಹೊಂದಿರುವುದು ಅವಶ್ಯಕವಾಗಿರುತ್ತದೆ. ಟ್ಯಾಲಿ ಸಾಪ್ಟವೇರ್ ಕಂಪ್ಯೂಟರ್ ಜ್ಞಾನದ ಬಗ್ಗೆ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಹೊಂದಿರಬೇಕು. 40 ವಯೋಮಾನ ಮೀರಿರಬಾರದು. ಕಛೇರಿಯ ಪತ್ರ ವ್ಯವಹಾರಗಳು, ಲೆಕ್ಕಪತ್ರಗಳ ವ್ಯವಹಾರವನ್ನು ಗಣಕೀಕೃತದಲ್ಲಿ ನಮೂದಿಸಿ. ಕೇಂದ್ರ ಕಛೇರಿಗಳಿಗೆ ಗಣಕ ಯಂತ್ರ ಮೂಲಕ ಕಳುಹಿಸುವ ಕುರಿತು ಪರಿಣತಿ ಹೊಂದಿರಬೇಕು.

ಅರ್ಹ ಅಭ್ಯರ್ಥಿಗಳು ಆಗಸ್ಟ್ 20 ರೊಳಗಾಗಿ ಕಾರ್ಮಿಕ ಅಧಿಕಾರಿ ಹಾಗೂ ಸದಸ್ಯ ಕಾರ್ಯದರ್ಶಿ- ಜಿಲ್ಲಾ ಬಾಲಕಾರ್ಮಿಕ ಯೋಜನೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ, 5 ನೇ ಮುಖ್ಯ ರಸ್ತೆ, 2 ನೇ ಹಂತ, ಸೋಮೇಶ್ವರ ಬಡಾವಣೆ, ದೊಡ್ಡಬಳ್ಳಾಪುರ-561203 ಇಲ್ಲಿ ನೇರವಾಗಿ ಅರ್ಜಿ ಸಲ್ಲಿಸತಕ್ಕದ್ದು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080-27622133, ಇಮೇಲ್ ವಿಳಾಸ lobngrural@gmail.com ಅಥವಾ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಬಾಲ ಕಾರ್ಮಿಕ ಯೋಜನೆ ಕಾರ್ಮಿಕ ಅಧಿಕಾರಿ ಮತ್ತು ಸದಸ್ಯ ಕಾರ್ಯದರ್ಶಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಬದುಕಿದ್ದ ಗಂಡನಿಗೆ ಸೋಷಿಯಲ್ ಮೀಡಿಯಾದಲ್ಲಿ “RIP” ಹಾಕಿದ ಹೆಂಡತಿ.?: ಬಿಟ್ಟೋದ ಹೆಂಡತಿಯನ್ನು ಕರೆತರಲು ಹೋದ ಗಂಡನ ಮೇಲೆ ಮಾರಣಾಂತಿಕ ಹಲ್ಲೆ…?

ಶೋಕಿಗೆ ಬಿದ್ದ ಹೆಂಡತಿ ಹೈಪೈ ಜೀವನಕ್ಕಾಗಿ ಗಂಡನಿಗೆ ಊರು ಬಿಡಿಸಿ ಸಿಟಿ ಸೇರಿದ್ದರು.. ಗಂಡನ ಕೈತುಂಬಾ ಕಾಸಿದ್ದಾಗ ಚಿನ್ನ, ರನ್ನ…

5 hours ago

ಅನುಮಾನಸ್ಪದ ರೀತಿಯಲ್ಲಿ ಮಹಿಳೆ ಶವ ಪತ್ತೆ

ಚಿಕ್ಕಬಳ್ಳಾಪುರ: ಅನುಮಾನಸ್ಪದ ರೀತಿಯಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿರುವ ಘಟನೆ ಚಿಕ್ಕಬಳ್ಳಾಪುರ ನಗರದ ರಂಗಸ್ಥಳ ದೇವಸ್ಥಾನದ ಪಕ್ಕದ ನಿರ್ಜನ ಪ್ರದೇಶದಲ್ಲಿ ನಡೆದಿದೆ.…

6 hours ago

ದೇಶದ ಅಭಿವೃದ್ಧಿಗೆ ದೇವೇಗೌಡರ ಸೇವೆ ಅಗತ್ಯ: ದೇವೇಗೌಡರು ರಾಜ್ಯಸಭೆಯಲ್ಲಿ ಮುಂದುವರಿಯಲಿ- ಬಿ.ಮುನೇಗೌಡ ಒತ್ತಾಯ

ದೊಡ್ಡಬಳ್ಳಾಪುರ: ನಾಳೆ(ಮೇ.18) ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅವರ ಜನ್ಮದಿನದ ಅಂಗವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜೆಡಿಎಸ್ ನಿಕಟಪೂರ್ವ ಜಿಲ್ಲಾಧ್ಯಕ್ಷ…

10 hours ago

ಕೇವಲ 200 ರೂ. ಬಾಕಿ ಹಣ ಕೇಳಿದ್ದಕ್ಕೆ ಕಾಫಿ-ಟೀ ಅಂಗಡಿ ಮಾಲೀಕನ ಕೊಲೆ

ದೊಡ್ಡಬಳ್ಳಾಪುರ: ಕೇವಲ 200 ರೂಪಾಯಿ ಬಾಕಿ ಹಣ ಕೇಳಿದ್ದಕ್ಕೆ ಕಾಫಿ-ಟೀ ಅಂಗಡಿ ಮಾಲೀಕನ ಮೇಲೆ ದೊಣ್ಣೆಯಿಂದ ಹಲ್ಲೆ ನಡೆಸಿ ಕೊಲೆ…

17 hours ago

2025–26 ಹಣಕಾಸು ವರ್ಷದಲ್ಲಿ ಕೆಂಪೇಗೌಡ ವಿಮಾನ ನಿಲ್ದಾಣದ ದಾಖಲೆ ಬೆಳವಣಿಗೆ

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ 2025–26ನೇ ಹಣಕಾಸು ವರ್ಷದಲ್ಲಿ ಪ್ರಯಾಣಿಕರ ಸಂಚಾರ ಮತ್ತು ಸರಕು ಸಾಗಣೆ ಎರಡೂ ವಿಭಾಗಗಳಲ್ಲಿ…

19 hours ago

ರೌಡಿಯಿಸಂ, ಗೂಂಡಾಗಿರಿ, ದೌರ್ಜನ್ಯದಿಂದ ಏನೂ ಪ್ರಯೋಜನವಿಲ್ಲ- ಕಾನೂನು ಬಾಹಿರ ಚಟುವಟಿಕೆ ಸಂಪೂರ್ಣವಾಗಿ ತ್ಯಜಿಸಬೇಕು- ಪೊಲೀಸ್ ಮೇಷ್ಟ್ರಿಂದ ರೌಡಿಗಳಿಗೆ ಕಾನೂನು ಪಾಠ: ಮಿಟ್ಟೆ ಗ್ಯಾಂಗ್ ಗೆ ವಿಶೇಷ ವಾರ್ನಿಂಗ್

ರೌಡಿಯಿಸಂ, ಗೂಂಡಾಗಿರಿ, ದೌರ್ಜನ್ಯದಿಂದ ಏನೂ ಪ್ರಯೋಜನವಿಲ್ಲ. ನೆಮ್ಮದಿ ಕಳೆದುಕೊಂಡು, ಕುಟಂಬದಿಂದ ದೂರಾವಾಗಿ ಭಯಭೀತಿಯಲ್ಲಿ ಜೀವನ ಮಾಡಬೇಕಷ್ಟೇ. ಹೀಗಾಗಿ ಅಕ್ರಮ, ಅನೈತಿಕ,…

1 day ago