ಯೋಜನಾ ನಿರ್ದೇಶಕ ಮತ್ತು ಗುಮಾಸ್ತ ಕಂ ಲೆಕ್ಕಿಗ ಹುದ್ದೆಗೆ ಅರ್ಜಿ ಆಹ್ವಾನ

ಜಿಲ್ಲಾ ಬಾಲಕಾರ್ಮಿಕ ಯೋಜನೆಯಲ್ಲಿ ಯೋಜನಾ ನಿರ್ದೇಶಕ ಮತ್ತು ಗುಮಾಸ್ತ ಕಂ ಲೆಕ್ಕಿಗ ಹುದ್ದೆಗೆ ಗೌರವಧನ ಆಧಾರದ ಮೇರೆಗೆ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಯೋಜನಾ ನಿರ್ದೇಶಕ 01 ಹುದ್ದೆಗೆ ಮಾಸಿಕ ಗೌರವಧನ 31,763 ಹಾಗೂ ಪ್ರಯಾಣ ಭತ್ಯೆ 3,000 ನೀಡಿ 1 ವರ್ಷ ಅವಧಿ ವರೆಗೆ ನೇಮಕಾತಿ ಮಾಡಿಕೊಳ್ಳಲಾಗುವುದು. ಯೋಜನಾ ನಿರ್ದೇಶಕ ಹುದ್ದೆಗೆ ಸಮಾಜ ಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ/ ಎಂ.ಎಸ್.ಡಬ್ಲೂ/ ಅಭಿವೃದ್ಧಿ ಅಧ್ಯಯನ/ ಲಾಭರಹಿತ ಸಂಸ್ಥೆಗಳ (ಎನ್ ಜಿಒ ) ನಿರ್ವಹಣಾ ಶಾಸ್ತ್ರ ಸ್ನಾತಕೋತ್ತರ ಪದವಿಯನ್ನು ಹೊಂದಿರಬೇಕು. ವಿವಿಧ ಸಾಮಾಜಿಕ ಕಾರ್ಯಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿದ ಕುರಿತು 05 ವರ್ಷಗಳ ಸೇವಾ ಅನುಭವ ಹೊಂದಿರಬೇಕು. ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಮಾಡುವಲ್ಲಿ ಅನುಭವ ಹೊಂದಿರುವವರಿಗೆ ಆದ್ಯತೆಯನ್ನು ನೀಡಲಾಗುವುದು. ಕನ್ನಡ ಮತ್ತು ಇಂಗ್ಲೀಷ್ ಮಾತನಾಡುವ ಹಾಗೂ ಬರೆಯುವಲ್ಲಿ ಉತ್ತಮ ಕೌಶಲ್ಯ ಹೊಂದಿರಬೇಕು. ಕಂಪ್ಯೂಟರ್ ಜ್ಞಾನವನ್ನು ಹೊಂದಿರುವುದು ಅವಶ್ಯಕವಾಗಿರುತ್ತದೆ (MS Office, MS Excel & MS Powerpoint & Internet Operation.). ಕಂಪ್ಯೂಟರ್ ಜ್ಞಾನದ ಬಗ್ಗೆ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಹೊಂದಿರಬೇಕು. 40 ವಯೋಮಾನ ಮೀರಿರಬಾರದು. ಕಛೇರಿಯ ಲೆಕ್ಕಪತ್ರಗಳ ವ್ಯವಹಾರವನ್ನು ಅರಿತಿರಬೇಕು. ಕಛೇರಿಯ ಲೆಕ್ಕಪತ್ರಗಳ ವ್ಯವಹಾರವನ್ನು ಅರಿತಿರಬೇಕು. ಯಾವುದೇ ಸರ್ಕಾರಿ ಕೆಲಸದಿಂದ ವಜಾಗೊಂಡಿರುವ ಹಾಗೂ ನಿವೃತ್ತಿ ಹೊಂದಿರುವ ಮತ್ತು ಸರ್ಕಾರಿ ಕೆಲಸ ನಿರ್ವಹಿಸುತ್ತಿರುವ ವ್ಯಕ್ತಿಗಳಾಗಿರಬಾರದು.

ಗುಮಾಸ್ತ ಕಂ ಲೆಕ್ಕಿಗ 01 ಹುದ್ದೆಗೆ ಮಾಸಿಕ ಗೌರವಧನ 21,909 ನೀಡಿ 1 ವರ್ಷ ಅವಧಿ ವರೆಗೆ ನೇಮಕಾತಿ ಮಾಡಿಕೊಳ್ಳಲಾಗುವುದು. ಗುಮಾಸ್ತ ಕಂ ಲೆಕ್ಕಿಗ ಹುದ್ದೆಗೆ ಬಿ.ಕಾಂ ಪದವಿ ಹೊಂದಿರಬೇಕು. ಲೆಕ್ಕಪತ್ರಗಳನ್ನು ನಿರ್ವಹಿಸುವಲ್ಲಿ/ ಅಕೌಂಟೆಂಟ್ ಹುದ್ದೆಯಲ್ಲಿ ಕನಿಷ್ಠ 05 ವರ್ಷಗಳ ಅನುಭವ ಹೊಂದಿರಬೇಕು. ಲೆಕ್ಕ ಪತ್ರದಲ್ಲಿ ಬ್ಯಾಂಕ್ ವ್ಯವಹಾರಗಳನ್ನು, ಸರ್ಕಾರದ ಲೆಕ್ಕಪತ್ರಗಳನ್ನು ತಯಾರಿಸುವ ಲೆಕ್ಕಪತ್ರಗಳಿಗೆ ಸಂಬಂಧಿಸಿದ ದಾಖಲಾತಿಗಳು, ರಿಜಿಸ್ಟರ್ಗಳ ಕುರಿತು ಮಾಹಿತಿಯನ್ನು ಹೊಂದಿರಬೇಕು. ಕನ್ನಡ ಮತ್ತು ಇಂಗ್ಲೀಷ್ ಮಾತನಾಡುವ ಹಾಗೂ ಬರೆಯುವಲ್ಲಿ ಉತ್ತಮ ಕೌಶಲ್ಯ ಹೊಂದಿರಬೇಕು. ಕಂಪ್ಯೂಟರ್ ಜ್ಞಾನವನ್ನು ಹೊಂದಿರುವುದು ಅವಶ್ಯಕವಾಗಿರುತ್ತದೆ. ಟ್ಯಾಲಿ ಸಾಪ್ಟವೇರ್ ಕಂಪ್ಯೂಟರ್ ಜ್ಞಾನದ ಬಗ್ಗೆ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಹೊಂದಿರಬೇಕು. 40 ವಯೋಮಾನ ಮೀರಿರಬಾರದು. ಕಛೇರಿಯ ಪತ್ರ ವ್ಯವಹಾರಗಳು, ಲೆಕ್ಕಪತ್ರಗಳ ವ್ಯವಹಾರವನ್ನು ಗಣಕೀಕೃತದಲ್ಲಿ ನಮೂದಿಸಿ. ಕೇಂದ್ರ ಕಛೇರಿಗಳಿಗೆ ಗಣಕ ಯಂತ್ರ ಮೂಲಕ ಕಳುಹಿಸುವ ಕುರಿತು ಪರಿಣತಿ ಹೊಂದಿರಬೇಕು.

ಅರ್ಹ ಅಭ್ಯರ್ಥಿಗಳು ಆಗಸ್ಟ್ 20 ರೊಳಗಾಗಿ ಕಾರ್ಮಿಕ ಅಧಿಕಾರಿ ಹಾಗೂ ಸದಸ್ಯ ಕಾರ್ಯದರ್ಶಿ- ಜಿಲ್ಲಾ ಬಾಲಕಾರ್ಮಿಕ ಯೋಜನೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ, 5 ನೇ ಮುಖ್ಯ ರಸ್ತೆ, 2 ನೇ ಹಂತ, ಸೋಮೇಶ್ವರ ಬಡಾವಣೆ, ದೊಡ್ಡಬಳ್ಳಾಪುರ-561203 ಇಲ್ಲಿ ನೇರವಾಗಿ ಅರ್ಜಿ ಸಲ್ಲಿಸತಕ್ಕದ್ದು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080-27622133, ಇಮೇಲ್ ವಿಳಾಸ lobngrural@gmail.com ಅಥವಾ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಬಾಲ ಕಾರ್ಮಿಕ ಯೋಜನೆ ಕಾರ್ಮಿಕ ಅಧಿಕಾರಿ ಮತ್ತು ಸದಸ್ಯ ಕಾರ್ಯದರ್ಶಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಗುಂಡಿ ರಸ್ತೆಗೆ ಕೆಎಸ್‌ಆರ್‌ಟಿಸಿ ಬಸ್‌ಗಳೇ ಬಲಿಪಶು: ಹದಗೆಟ್ಟ ರಸ್ತೆ–ನಿರ್ವಹಣೆ ಕೊರತೆ; ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುವ ಬಸ್‌ಗಳಿಂದ ಪ್ರಯಾಣಿಕರ ಪರದಾಟ

ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್‌ಆರ್‌ಟಿಸಿ ಬಸ್‌ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…

9 hours ago

ಗಜಮುಖನ ಆರಾಧನೆಯಲ್ಲಿ ಮಿಂದೆದ್ದ ದೊಡ್ಡಬಳ್ಳಾಪುರ: ಬೆಸ್ತರಪೇಟೆಯಲ್ಲಿ 14 ಅಡಿ ಎತ್ತರದ ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ: 7ನೇ ವರ್ಷದ ಗಣೇಶೋತ್ಸವಕ್ಕೆ ಅದ್ಧೂರಿ ಮೆರುಗು

ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…

10 hours ago

ಗಣೇಶ ವಿಸರ್ಜನೆಗೆ ಗುಂಡಮಗೆರೆ ಕೆರೆ ಬಳಿ ವಿಶೇಷ ವ್ಯವಸ್ಥೆ

ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…

11 hours ago

ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ: ತೂಬಗೆರೆಯಲ್ಲೂ ಕಳೆಗಟ್ಟಿದ ಗೌರಿ ಗಣೇಶ ಹಬ್ಬದ ಆಚರಣೆ: 20 ಅಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…

15 hours ago

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

22 hours ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

1 day ago