ಯೋಜನಾ ನಿರ್ದೇಶಕ ಮತ್ತು ಗುಮಾಸ್ತ ಕಂ ಲೆಕ್ಕಿಗ ಹುದ್ದೆಗೆ ಅರ್ಜಿ ಆಹ್ವಾನ

ಜಿಲ್ಲಾ ಬಾಲಕಾರ್ಮಿಕ ಯೋಜನೆಯಲ್ಲಿ ಯೋಜನಾ ನಿರ್ದೇಶಕ ಮತ್ತು ಗುಮಾಸ್ತ ಕಂ ಲೆಕ್ಕಿಗ ಹುದ್ದೆಗೆ ಗೌರವಧನ ಆಧಾರದ ಮೇರೆಗೆ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಯೋಜನಾ ನಿರ್ದೇಶಕ 01 ಹುದ್ದೆಗೆ ಮಾಸಿಕ ಗೌರವಧನ 31,763 ಹಾಗೂ ಪ್ರಯಾಣ ಭತ್ಯೆ 3,000 ನೀಡಿ 1 ವರ್ಷ ಅವಧಿ ವರೆಗೆ ನೇಮಕಾತಿ ಮಾಡಿಕೊಳ್ಳಲಾಗುವುದು. ಯೋಜನಾ ನಿರ್ದೇಶಕ ಹುದ್ದೆಗೆ ಸಮಾಜ ಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ/ ಎಂ.ಎಸ್.ಡಬ್ಲೂ/ ಅಭಿವೃದ್ಧಿ ಅಧ್ಯಯನ/ ಲಾಭರಹಿತ ಸಂಸ್ಥೆಗಳ (ಎನ್ ಜಿಒ ) ನಿರ್ವಹಣಾ ಶಾಸ್ತ್ರ ಸ್ನಾತಕೋತ್ತರ ಪದವಿಯನ್ನು ಹೊಂದಿರಬೇಕು. ವಿವಿಧ ಸಾಮಾಜಿಕ ಕಾರ್ಯಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿದ ಕುರಿತು 05 ವರ್ಷಗಳ ಸೇವಾ ಅನುಭವ ಹೊಂದಿರಬೇಕು. ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಮಾಡುವಲ್ಲಿ ಅನುಭವ ಹೊಂದಿರುವವರಿಗೆ ಆದ್ಯತೆಯನ್ನು ನೀಡಲಾಗುವುದು. ಕನ್ನಡ ಮತ್ತು ಇಂಗ್ಲೀಷ್ ಮಾತನಾಡುವ ಹಾಗೂ ಬರೆಯುವಲ್ಲಿ ಉತ್ತಮ ಕೌಶಲ್ಯ ಹೊಂದಿರಬೇಕು. ಕಂಪ್ಯೂಟರ್ ಜ್ಞಾನವನ್ನು ಹೊಂದಿರುವುದು ಅವಶ್ಯಕವಾಗಿರುತ್ತದೆ (MS Office, MS Excel & MS Powerpoint & Internet Operation.). ಕಂಪ್ಯೂಟರ್ ಜ್ಞಾನದ ಬಗ್ಗೆ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಹೊಂದಿರಬೇಕು. 40 ವಯೋಮಾನ ಮೀರಿರಬಾರದು. ಕಛೇರಿಯ ಲೆಕ್ಕಪತ್ರಗಳ ವ್ಯವಹಾರವನ್ನು ಅರಿತಿರಬೇಕು. ಕಛೇರಿಯ ಲೆಕ್ಕಪತ್ರಗಳ ವ್ಯವಹಾರವನ್ನು ಅರಿತಿರಬೇಕು. ಯಾವುದೇ ಸರ್ಕಾರಿ ಕೆಲಸದಿಂದ ವಜಾಗೊಂಡಿರುವ ಹಾಗೂ ನಿವೃತ್ತಿ ಹೊಂದಿರುವ ಮತ್ತು ಸರ್ಕಾರಿ ಕೆಲಸ ನಿರ್ವಹಿಸುತ್ತಿರುವ ವ್ಯಕ್ತಿಗಳಾಗಿರಬಾರದು.

ಗುಮಾಸ್ತ ಕಂ ಲೆಕ್ಕಿಗ 01 ಹುದ್ದೆಗೆ ಮಾಸಿಕ ಗೌರವಧನ 21,909 ನೀಡಿ 1 ವರ್ಷ ಅವಧಿ ವರೆಗೆ ನೇಮಕಾತಿ ಮಾಡಿಕೊಳ್ಳಲಾಗುವುದು. ಗುಮಾಸ್ತ ಕಂ ಲೆಕ್ಕಿಗ ಹುದ್ದೆಗೆ ಬಿ.ಕಾಂ ಪದವಿ ಹೊಂದಿರಬೇಕು. ಲೆಕ್ಕಪತ್ರಗಳನ್ನು ನಿರ್ವಹಿಸುವಲ್ಲಿ/ ಅಕೌಂಟೆಂಟ್ ಹುದ್ದೆಯಲ್ಲಿ ಕನಿಷ್ಠ 05 ವರ್ಷಗಳ ಅನುಭವ ಹೊಂದಿರಬೇಕು. ಲೆಕ್ಕ ಪತ್ರದಲ್ಲಿ ಬ್ಯಾಂಕ್ ವ್ಯವಹಾರಗಳನ್ನು, ಸರ್ಕಾರದ ಲೆಕ್ಕಪತ್ರಗಳನ್ನು ತಯಾರಿಸುವ ಲೆಕ್ಕಪತ್ರಗಳಿಗೆ ಸಂಬಂಧಿಸಿದ ದಾಖಲಾತಿಗಳು, ರಿಜಿಸ್ಟರ್ಗಳ ಕುರಿತು ಮಾಹಿತಿಯನ್ನು ಹೊಂದಿರಬೇಕು. ಕನ್ನಡ ಮತ್ತು ಇಂಗ್ಲೀಷ್ ಮಾತನಾಡುವ ಹಾಗೂ ಬರೆಯುವಲ್ಲಿ ಉತ್ತಮ ಕೌಶಲ್ಯ ಹೊಂದಿರಬೇಕು. ಕಂಪ್ಯೂಟರ್ ಜ್ಞಾನವನ್ನು ಹೊಂದಿರುವುದು ಅವಶ್ಯಕವಾಗಿರುತ್ತದೆ. ಟ್ಯಾಲಿ ಸಾಪ್ಟವೇರ್ ಕಂಪ್ಯೂಟರ್ ಜ್ಞಾನದ ಬಗ್ಗೆ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಹೊಂದಿರಬೇಕು. 40 ವಯೋಮಾನ ಮೀರಿರಬಾರದು. ಕಛೇರಿಯ ಪತ್ರ ವ್ಯವಹಾರಗಳು, ಲೆಕ್ಕಪತ್ರಗಳ ವ್ಯವಹಾರವನ್ನು ಗಣಕೀಕೃತದಲ್ಲಿ ನಮೂದಿಸಿ. ಕೇಂದ್ರ ಕಛೇರಿಗಳಿಗೆ ಗಣಕ ಯಂತ್ರ ಮೂಲಕ ಕಳುಹಿಸುವ ಕುರಿತು ಪರಿಣತಿ ಹೊಂದಿರಬೇಕು.

ಅರ್ಹ ಅಭ್ಯರ್ಥಿಗಳು ಆಗಸ್ಟ್ 20 ರೊಳಗಾಗಿ ಕಾರ್ಮಿಕ ಅಧಿಕಾರಿ ಹಾಗೂ ಸದಸ್ಯ ಕಾರ್ಯದರ್ಶಿ- ಜಿಲ್ಲಾ ಬಾಲಕಾರ್ಮಿಕ ಯೋಜನೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ, 5 ನೇ ಮುಖ್ಯ ರಸ್ತೆ, 2 ನೇ ಹಂತ, ಸೋಮೇಶ್ವರ ಬಡಾವಣೆ, ದೊಡ್ಡಬಳ್ಳಾಪುರ-561203 ಇಲ್ಲಿ ನೇರವಾಗಿ ಅರ್ಜಿ ಸಲ್ಲಿಸತಕ್ಕದ್ದು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080-27622133, ಇಮೇಲ್ ವಿಳಾಸ lobngrural@gmail.com ಅಥವಾ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಬಾಲ ಕಾರ್ಮಿಕ ಯೋಜನೆ ಕಾರ್ಮಿಕ ಅಧಿಕಾರಿ ಮತ್ತು ಸದಸ್ಯ ಕಾರ್ಯದರ್ಶಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

1 hour ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

5 hours ago

ಇರುವುದೊಂದೇ ಬದುಕು, ಅದನ್ನು ಅರ್ಥಪೂರ್ಣವಾಗಿ ಸಾರ್ಥಕ ಪಡಿಸಿಕೊಳ್ಳಿ…….

ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…

7 hours ago

ಜಿಂಕೆಗೆ ವಾಹನ ಡಿಕ್ಕಿ; ಸ್ಥಳದಲ್ಲೇ ಸಾವು

ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…

7 hours ago

ಬಾಶೆಟ್ಟಿಹಳ್ಳಿ ಕೋಟ್ಯಂತರ ಹಗರಣ ಆರೋಪ: ಶಾಸಕರು ಮೌನ ಏಕೆ ಎಂದು ಸ್ಥಳೀಯರ ಪ್ರಶ್ನೆ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…

18 hours ago

ಅಗಸ್ಟ್ 2ರ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ: ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ, ಎಸ್ಪಿ

ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…

19 hours ago