ಹೆಚ್ಚಿಗೆ ಏನೂ ಹೇಳಲು ಉಳಿದಿಲ್ಲ. ಸಾಮಾಜಿಕ ಜಾಲತಾಣಗಳು ಮತ್ತು ಮಾಧ್ಯಮಗಳಲ್ಲಿ ಈಗಾಗಲೇ ದೇವರು, ಧರ್ಮ, ಸಂವಿಧಾನ, ಪ್ರಜಾಪ್ರಭುತ್ವ, ಹಿಂದು, ಮುಸ್ಲಿಂ, ಕ್ರಿಶ್ಚಿಯನ್, ಖುರಾನ್, ಬೈಬಲ್, ಭಗವದ್ಗೀತೆ, ಭಾರತ, ಪಾಕಿಸ್ತಾನ, ಚೀನಾ, ಸೌಹಾರ್ಧತೆ, ಸಂಯಮ, ಸಮನ್ವಯ ಮುಂತಾದ ವಿಷಯಗಳ ಬಗ್ಗೆ ಬಹುತೇಕ ಸಾಮಾನ್ಯ ಜನರಿಗೂ ತಲುಪುವಷ್ಟು ಚರ್ಚೆಗಳು ಅಭಿಪ್ರಾಯಗಳು ವ್ಯಕ್ತವಾಗಿದೆ……
ಈಗ ಉಳಿದಿರುವುದು ಮತ್ತು ಮುಂದುವರಿಯ ಬೇಕಾಗಿರುವುದು ನಮ್ಮ ತೀರ್ಮಾನ ಹಾಗೂ ತಿಳಿವಳಿಕೆ ಮತ್ತು ನಡವಳಿಕೆ. ಇದೇ ಅತ್ಯಂತ ಮಹತ್ವದ ವಿಷಯ……
ಆಧುನಿಕ ಸಮಾಜ ನೀಡಿರುವ ಎಲ್ಲಾ ಸಿರಿ ಸಂಪತ್ತುಗಳು – ಪ್ರಜಾಪ್ರಭುತ್ವ ಎಂಬ ಅಪರಿಮಿತ ಸ್ವಾತಂತ್ರ್ಯ ಎಲ್ಲವನ್ನೂ ಉಪಯೋಗಿಸಿಕೊಂಡು ಇರುವಷ್ಟು ದಿನ ಇರುವುದರಲ್ಲಿ ಒಂದಷ್ಟು ಸುಖ ಸಂತೋಷ ನೆಮ್ಮದಿಯಿಂದ ಬಾಳಬೇಕೆ ಅಥವಾ ಈಗಿನ ಸಂದರ್ಭಕ್ಕೆ ಅಪ್ರಸ್ತುತವಾದ ಅಥವಾ ಅಷ್ಟೇನೂ ಪ್ರಯೋಜನವಲ್ಲದ ಪುರಾತನ ಕಾಲದ ಯಾವುದೋ ನಂಬಿಕೆ, ಸಂಪ್ರದಾಯಗಳಿಗೆ ಕಟ್ಟುಬಿದ್ದು ಮನುಷ್ಯರೇ ಧರ್ಮದ, ಜಾತಿಯ ಆಧಾರದಲ್ಲಿ ಒಬ್ಬರಿಗೊಬ್ಬರು ದ್ವೇಷಿಸುತ್ತಾ, ಅಸೂಯೆಪಡುತ್ತಾ, ಮಚ್ಚು ಚಾಕು ಬಂದೂಕು ಬಾಂಬುಗಳಿಂದ ಕೊಂದುಕೊಳ್ಳುತ್ತಾ, ಸದಾ ಆತಂಕದಿಂದ ಬದುಕಬೇಕೇ ಎಂಬ ಆಯ್ಕೆಗಳು ಮಾತ್ರ….
ನಿಮಗೆ ಧರ್ಮ ಗ್ರಂಥಗಳು, ಹಿಜಾಬ್, ಕುಂಕುಮ, ನಾಮ, ಹಲಾಲ್ ಕಟ್, ಜಟ್ಕಾ ಕಟ್, ವಿಭೂತಿ, ಗಡ್ಡ, ಅಜಾನ್, ಹನುಮಾನ್ ಚಾಲೀಸು ಮುಂತಾದ ಆಚರಣೆಗಳು ಬೇಕೆ ಅಥವಾ ಮನುಷ್ಯ – ಮನುಷ್ಯತ್ವ ಪ್ರೀತಿ, ಸಹಕಾರ, ಸಂಯಮ, ಸುಖಬದುಕು ಬೇಕೆ ಎಂಬ ಆಯ್ಕೆಗಳು ಮಾತ್ರ ನಮ್ಮ ಮುಂದಿವೆ.
ಇದನ್ನು ಯಾರೋ ಮುಲ್ಲಾಗಳು, ಪಾದ್ರಿಗಳು, ಮೌಲ್ವಿಗಳು, ಸ್ವಾಮೀಜಿಗಳು, ಮಠಾಧೀಶರು ಹೇಳಿಕೊಡಬೇಕಿಲ್ಲ ಅಥವಾ ನಿರ್ಧರಿಸ ಬೇಕಿಲ್ಲ. ನಮ್ಮ ನಮ್ಮ ಜ್ಞಾನದ ಮಿತಿಯಲ್ಲಿ, ನಾವೇ ನಿರ್ಧಾರ ತೆಗೆದುಕೊಳ್ಳಬೇಕು. ಇದನ್ನು ನಿಮ್ಮ ವಿವೇಚನೆಗೆ ಬಿಡುತ್ತಾ……
ಮತ್ತೊಮ್ಮೆ ಎಲ್ಲರಿಗೂ ರಂಜಾನ್ ಹಬ್ಬದ ಶುಭಾಶಯಗಳು..
ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ, ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ, ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ, ಮನಸ್ಸುಗಳ ಅಂತರಂಗದ ಚಳವಳಿ
ಲೇಖಕ- ವಿವೇಕಾನಂದ. ಎಚ್.ಕೆ
ಸೇವೆಗಾಗಿ ಬಾಳು ಭಾರತ ಸೇವಾದಳ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಭಾರತ ಸೇವಾದಳ ದೇವನಹಳ್ಳಿ ತಾಲೂಕು ಘಟಕ, ಕರ್ನಾಟಕ ರಾಜ್ಯ ಪ್ರಾಥಮಿಕ…
ಭೂದಾಖಲೆಗಳ ತಿದ್ದುಪಡಿಗಾಗಿ ಸಾರ್ವಜನಿಕರಿಂದ ಹಣಕ್ಕೆ ಬೇಡಿಕೆಯಿಟ್ಟಿದ್ದ ಗ್ರಾಮ ಆಡಳಿತಾಧಿಕಾರಿಯೊಬ್ಬರು ಲೋಕಾಯುಕ್ತ ಪೊಲೀಸರ ಕಾರ್ಯಾಚರಣೆಯಲ್ಲಿ ಸಿಕ್ಕಿಬಿದ್ದಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ…
ಸಣ್ಣಪುಟ್ಟ ಜಗಳಗಳಿಂದ ಕೋರ್ಟಿನ ಮೆಟ್ಟಿಲೇರಿ ದೂರಾವಾಗಲು ನಿರ್ಧರಿಸಿದ್ದ ನಾಲ್ವರು ದಂಪತಿಗಳನ್ನು ಶನಿವಾರ ನಡೆದ ಲೋಕಾಅದಾಲತ್ ನಲ್ಲಿ ನ್ಯಾಯಾಧೀಶರುಗಳು ಹೇಳಿದ ಬುದ್ಧಿಮಾತಿನಿಂದ…
ಕೊಲ್ಲಿ ದೇಶಗಳಲ್ಲಿ ಯುದ್ಧದ ಪರಿಸ್ಥಿತಿ ಹಿನ್ನೆಲೆಯಲ್ಲಿ ಉಂಟಾದ ಗೃಹ ಬಳಕೆ ಹಾಗೂ ವಾಣಿಜ್ಯ ಬಳಕೆ ಗ್ಯಾಸ್ ಸಿಲಿಂಡರ್ ಗಳ ಪೂರೈಕೆ…
ಗೃಹಬಳಕೆ ಸಿಲಿಂಡರ್ ಅನ್ನು ವಾಣಿಜ್ಯ ಉದ್ದೇಶಕ್ಕಾಗಿ ಬಳಸಿದ್ದಲ್ಲಿ ಸೂಕ್ತ ಕಾನೂನುಕ್ರಮ ಕೈಗೊಳ್ಳಲು ಆಹಾರ ಸಚಿವರು ಸೂಚಿಸಿದ್ದು, ಅದರಂತೆ ಗೃಹ ಬಳಕೆ…
ವಾಣಿಜ್ಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಹಿನ್ನೆಲೆ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಪ್ರತಿಕ್ರಿಯೆ. ಈ ಸಮಸ್ಯೆ ಇನ್ನು ಒಂದು ವಾರಗಳ ಕಾಲ…