ಹೆಚ್ಚಿಗೆ ಏನೂ ಹೇಳಲು ಉಳಿದಿಲ್ಲ. ಸಾಮಾಜಿಕ ಜಾಲತಾಣಗಳು ಮತ್ತು ಮಾಧ್ಯಮಗಳಲ್ಲಿ ಈಗಾಗಲೇ ದೇವರು, ಧರ್ಮ, ಸಂವಿಧಾನ, ಪ್ರಜಾಪ್ರಭುತ್ವ, ಹಿಂದು, ಮುಸ್ಲಿಂ, ಕ್ರಿಶ್ಚಿಯನ್, ಖುರಾನ್, ಬೈಬಲ್, ಭಗವದ್ಗೀತೆ, ಭಾರತ, ಪಾಕಿಸ್ತಾನ, ಚೀನಾ, ಸೌಹಾರ್ಧತೆ, ಸಂಯಮ, ಸಮನ್ವಯ ಮುಂತಾದ ವಿಷಯಗಳ ಬಗ್ಗೆ ಬಹುತೇಕ ಸಾಮಾನ್ಯ ಜನರಿಗೂ ತಲುಪುವಷ್ಟು ಚರ್ಚೆಗಳು ಅಭಿಪ್ರಾಯಗಳು ವ್ಯಕ್ತವಾಗಿದೆ……
ಈಗ ಉಳಿದಿರುವುದು ಮತ್ತು ಮುಂದುವರಿಯ ಬೇಕಾಗಿರುವುದು ನಮ್ಮ ತೀರ್ಮಾನ ಹಾಗೂ ತಿಳಿವಳಿಕೆ ಮತ್ತು ನಡವಳಿಕೆ. ಇದೇ ಅತ್ಯಂತ ಮಹತ್ವದ ವಿಷಯ……
ಆಧುನಿಕ ಸಮಾಜ ನೀಡಿರುವ ಎಲ್ಲಾ ಸಿರಿ ಸಂಪತ್ತುಗಳು – ಪ್ರಜಾಪ್ರಭುತ್ವ ಎಂಬ ಅಪರಿಮಿತ ಸ್ವಾತಂತ್ರ್ಯ ಎಲ್ಲವನ್ನೂ ಉಪಯೋಗಿಸಿಕೊಂಡು ಇರುವಷ್ಟು ದಿನ ಇರುವುದರಲ್ಲಿ ಒಂದಷ್ಟು ಸುಖ ಸಂತೋಷ ನೆಮ್ಮದಿಯಿಂದ ಬಾಳಬೇಕೆ ಅಥವಾ ಈಗಿನ ಸಂದರ್ಭಕ್ಕೆ ಅಪ್ರಸ್ತುತವಾದ ಅಥವಾ ಅಷ್ಟೇನೂ ಪ್ರಯೋಜನವಲ್ಲದ ಪುರಾತನ ಕಾಲದ ಯಾವುದೋ ನಂಬಿಕೆ, ಸಂಪ್ರದಾಯಗಳಿಗೆ ಕಟ್ಟುಬಿದ್ದು ಮನುಷ್ಯರೇ ಧರ್ಮದ, ಜಾತಿಯ ಆಧಾರದಲ್ಲಿ ಒಬ್ಬರಿಗೊಬ್ಬರು ದ್ವೇಷಿಸುತ್ತಾ, ಅಸೂಯೆಪಡುತ್ತಾ, ಮಚ್ಚು ಚಾಕು ಬಂದೂಕು ಬಾಂಬುಗಳಿಂದ ಕೊಂದುಕೊಳ್ಳುತ್ತಾ, ಸದಾ ಆತಂಕದಿಂದ ಬದುಕಬೇಕೇ ಎಂಬ ಆಯ್ಕೆಗಳು ಮಾತ್ರ….
ನಿಮಗೆ ಧರ್ಮ ಗ್ರಂಥಗಳು, ಹಿಜಾಬ್, ಕುಂಕುಮ, ನಾಮ, ಹಲಾಲ್ ಕಟ್, ಜಟ್ಕಾ ಕಟ್, ವಿಭೂತಿ, ಗಡ್ಡ, ಅಜಾನ್, ಹನುಮಾನ್ ಚಾಲೀಸು ಮುಂತಾದ ಆಚರಣೆಗಳು ಬೇಕೆ ಅಥವಾ ಮನುಷ್ಯ – ಮನುಷ್ಯತ್ವ ಪ್ರೀತಿ, ಸಹಕಾರ, ಸಂಯಮ, ಸುಖಬದುಕು ಬೇಕೆ ಎಂಬ ಆಯ್ಕೆಗಳು ಮಾತ್ರ ನಮ್ಮ ಮುಂದಿವೆ.
ಇದನ್ನು ಯಾರೋ ಮುಲ್ಲಾಗಳು, ಪಾದ್ರಿಗಳು, ಮೌಲ್ವಿಗಳು, ಸ್ವಾಮೀಜಿಗಳು, ಮಠಾಧೀಶರು ಹೇಳಿಕೊಡಬೇಕಿಲ್ಲ ಅಥವಾ ನಿರ್ಧರಿಸ ಬೇಕಿಲ್ಲ. ನಮ್ಮ ನಮ್ಮ ಜ್ಞಾನದ ಮಿತಿಯಲ್ಲಿ, ನಾವೇ ನಿರ್ಧಾರ ತೆಗೆದುಕೊಳ್ಳಬೇಕು. ಇದನ್ನು ನಿಮ್ಮ ವಿವೇಚನೆಗೆ ಬಿಡುತ್ತಾ……
ಮತ್ತೊಮ್ಮೆ ಎಲ್ಲರಿಗೂ ರಂಜಾನ್ ಹಬ್ಬದ ಶುಭಾಶಯಗಳು..
ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ, ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ, ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ, ಮನಸ್ಸುಗಳ ಅಂತರಂಗದ ಚಳವಳಿ
ಲೇಖಕ- ವಿವೇಕಾನಂದ. ಎಚ್.ಕೆ
ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…
ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…