Categories: ಲೇಖನ

ರಂಜಾನ್ ಹಬ್ಬದ ಶುಭಾಶಯಗಳು…. ತಿಳಿವಳಿಕೆ ನಡವಳಿಕೆಯಾಗಬೇಕಾದ ಸಂದರ್ಭದಲ್ಲಿ…….

ಹೆಚ್ಚಿಗೆ ಏನೂ ಹೇಳಲು ಉಳಿದಿಲ್ಲ. ಸಾಮಾಜಿಕ ಜಾಲತಾಣಗಳು ಮತ್ತು ಮಾಧ್ಯಮಗಳಲ್ಲಿ ಈಗಾಗಲೇ ದೇವರು, ಧರ್ಮ, ಸಂವಿಧಾನ, ಪ್ರಜಾಪ್ರಭುತ್ವ, ಹಿಂದು, ಮುಸ್ಲಿಂ, ಕ್ರಿಶ್ಚಿಯನ್, ಖುರಾನ್, ಬೈಬಲ್, ಭಗವದ್ಗೀತೆ, ಭಾರತ, ಪಾಕಿಸ್ತಾನ, ಚೀನಾ, ಸೌಹಾರ್ಧತೆ, ಸಂಯಮ, ಸಮನ್ವಯ ಮುಂತಾದ ವಿಷಯಗಳ ಬಗ್ಗೆ  ಬಹುತೇಕ ಸಾಮಾನ್ಯ ಜನರಿಗೂ ತಲುಪುವಷ್ಟು ಚರ್ಚೆಗಳು ಅಭಿಪ್ರಾಯಗಳು ವ್ಯಕ್ತವಾಗಿದೆ……

ಈಗ ಉಳಿದಿರುವುದು ಮತ್ತು ಮುಂದುವರಿಯ ಬೇಕಾಗಿರುವುದು ನಮ್ಮ ತೀರ್ಮಾನ ಹಾಗೂ ತಿಳಿವಳಿಕೆ ಮತ್ತು ನಡವಳಿಕೆ. ಇದೇ ಅತ್ಯಂತ ಮಹತ್ವದ ವಿಷಯ……

ಆಧುನಿಕ ಸಮಾಜ ನೀಡಿರುವ ಎಲ್ಲಾ ‌ಸಿರಿ ಸಂಪತ್ತುಗಳು – ಪ್ರಜಾಪ್ರಭುತ್ವ ಎಂಬ ಅಪರಿಮಿತ ಸ್ವಾತಂತ್ರ್ಯ ಎಲ್ಲವನ್ನೂ ಉಪಯೋಗಿಸಿಕೊಂಡು ಇರುವಷ್ಟು ದಿನ‌ ಇರುವುದರಲ್ಲಿ ಒಂದಷ್ಟು ಸುಖ ಸಂತೋಷ ನೆಮ್ಮದಿಯಿಂದ ಬಾಳಬೇಕೆ ಅಥವಾ ಈಗಿನ ಸಂದರ್ಭಕ್ಕೆ ಅಪ್ರಸ್ತುತವಾದ ಅಥವಾ ಅಷ್ಟೇನೂ ಪ್ರಯೋಜನವಲ್ಲದ ಪುರಾತನ ಕಾಲದ ಯಾವುದೋ ನಂಬಿಕೆ, ಸಂಪ್ರದಾಯಗಳಿಗೆ ಕಟ್ಟುಬಿದ್ದು ಮನುಷ್ಯರೇ ಧರ್ಮದ, ಜಾತಿಯ ಆಧಾರದಲ್ಲಿ ಒಬ್ಬರಿಗೊಬ್ಬರು ದ್ವೇಷಿಸುತ್ತಾ, ಅಸೂಯೆಪಡುತ್ತಾ, ಮಚ್ಚು ಚಾಕು ಬಂದೂಕು ಬಾಂಬುಗಳಿಂದ ಕೊಂದುಕೊಳ್ಳುತ್ತಾ, ಸದಾ ಆತಂಕದಿಂದ ಬದುಕಬೇಕೇ ಎಂಬ ಆಯ್ಕೆಗಳು ಮಾತ್ರ….

ನಿಮಗೆ ಧರ್ಮ ಗ್ರಂಥಗಳು, ಹಿಜಾಬ್, ಕುಂಕುಮ, ನಾಮ, ಹಲಾಲ್ ಕಟ್, ಜಟ್ಕಾ ಕಟ್, ವಿಭೂತಿ, ಗಡ್ಡ, ಅಜಾನ್, ಹನುಮಾನ್ ಚಾಲೀಸು ಮುಂತಾದ ಆಚರಣೆಗಳು ಬೇಕೆ ಅಥವಾ ಮನುಷ್ಯ – ಮನುಷ್ಯತ್ವ  ಪ್ರೀತಿ, ಸಹಕಾರ, ಸಂಯಮ, ಸುಖಬದುಕು ಬೇಕೆ ಎಂಬ ಆಯ್ಕೆಗಳು ಮಾತ್ರ ನಮ್ಮ ಮುಂದಿವೆ.

ಇದನ್ನು ಯಾರೋ ಮುಲ್ಲಾಗಳು, ಪಾದ್ರಿಗಳು, ಮೌಲ್ವಿಗಳು, ಸ್ವಾಮೀಜಿಗಳು, ಮಠಾಧೀಶರು ಹೇಳಿಕೊಡಬೇಕಿಲ್ಲ ಅಥವಾ ನಿರ್ಧರಿಸ ಬೇಕಿಲ್ಲ. ನಮ್ಮ ನಮ್ಮ ಜ್ಞಾನದ ಮಿತಿಯಲ್ಲಿ, ನಾವೇ ನಿರ್ಧಾರ ತೆಗೆದುಕೊಳ್ಳಬೇಕು. ಇದನ್ನು ನಿಮ್ಮ ವಿವೇಚನೆಗೆ ಬಿಡುತ್ತಾ……

ಮತ್ತೊಮ್ಮೆ ಎಲ್ಲರಿಗೂ ರಂಜಾನ್ ಹಬ್ಬದ ಶುಭಾಶಯಗಳು..

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ, ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ, ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ, ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ- ವಿವೇಕಾನಂದ. ಎಚ್.ಕೆ

Ramesh Babu

Journalist

Recent Posts

ಟಿವಿಎಸ್ ಎಕ್ಸ್‌ಎಲ್-100 ಕಳವು: ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಸೆರೆ

ದೊಡ್ಡಬಳ್ಳಾಪುರ ನಗರದ ಡಿ ಕ್ರಾಸ್ ಬಳಿ ನಿಲ್ಲಿಸಿದ್ದ ಟಿವಿಎಸ್ ಎಕ್ಸ್‌ಎಲ್-100 ವಾಹನವನ್ನು ಕಳ್ಳನೊಬ್ಬ ಕಳವು ಮಾಡಿಕೊಂಡು ಹೋಗಿರುವ ಘಟನೆ ಬುಧವಾರ…

1 hour ago

KPCC ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…

15 hours ago

ಶಾಲಾ-ಕಾಲೇಜು ಹುಡುಗರಿಗೂ ಉಚಿತ ಬಸ್ ಪಾಸ್ ಘೋಷಿಸಿದ ಸಿಎಂ ಡಿಕೆಶಿ

ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…

16 hours ago

ಎಸ್.ಐ.ಆರ್ ಬಗ್ಗೆ ಗೊಂದಲ, ಭಯ ಬೇಡ: ಮತದಾರರ ಪಟ್ಟಿ ಪರಿಷ್ಕರಣೆಗೆ ಸಾರ್ವಜನಿಕರ ಸಹಕಾರ ಅಗತ್ಯ- ಎಸಿ ಟಿ.ಆರ್ ಮಂಜುನಾಥ

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್‌ಐಆರ್‌ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…

16 hours ago

ಸಿಎಂ ಆದ ಬಳಿಕ ಜನತೆಗೆ ಕೃತಜ್ಞತೆ ಸಲ್ಲಿಸಿದ ಡಿ.ಕೆ. ಶಿವಕುಮಾರ್

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…

17 hours ago

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…

20 hours ago