ಹೆಚ್ಚಿಗೆ ಏನೂ ಹೇಳಲು ಉಳಿದಿಲ್ಲ. ಸಾಮಾಜಿಕ ಜಾಲತಾಣಗಳು ಮತ್ತು ಮಾಧ್ಯಮಗಳಲ್ಲಿ ಈಗಾಗಲೇ ದೇವರು, ಧರ್ಮ, ಸಂವಿಧಾನ, ಪ್ರಜಾಪ್ರಭುತ್ವ, ಹಿಂದು, ಮುಸ್ಲಿಂ, ಕ್ರಿಶ್ಚಿಯನ್, ಖುರಾನ್, ಬೈಬಲ್, ಭಗವದ್ಗೀತೆ, ಭಾರತ, ಪಾಕಿಸ್ತಾನ, ಚೀನಾ, ಸೌಹಾರ್ಧತೆ, ಸಂಯಮ, ಸಮನ್ವಯ ಮುಂತಾದ ವಿಷಯಗಳ ಬಗ್ಗೆ ಬಹುತೇಕ ಸಾಮಾನ್ಯ ಜನರಿಗೂ ತಲುಪುವಷ್ಟು ಚರ್ಚೆಗಳು ಅಭಿಪ್ರಾಯಗಳು ವ್ಯಕ್ತವಾಗಿದೆ……
ಈಗ ಉಳಿದಿರುವುದು ಮತ್ತು ಮುಂದುವರಿಯ ಬೇಕಾಗಿರುವುದು ನಮ್ಮ ತೀರ್ಮಾನ ಹಾಗೂ ತಿಳಿವಳಿಕೆ ಮತ್ತು ನಡವಳಿಕೆ. ಇದೇ ಅತ್ಯಂತ ಮಹತ್ವದ ವಿಷಯ……
ಆಧುನಿಕ ಸಮಾಜ ನೀಡಿರುವ ಎಲ್ಲಾ ಸಿರಿ ಸಂಪತ್ತುಗಳು – ಪ್ರಜಾಪ್ರಭುತ್ವ ಎಂಬ ಅಪರಿಮಿತ ಸ್ವಾತಂತ್ರ್ಯ ಎಲ್ಲವನ್ನೂ ಉಪಯೋಗಿಸಿಕೊಂಡು ಇರುವಷ್ಟು ದಿನ ಇರುವುದರಲ್ಲಿ ಒಂದಷ್ಟು ಸುಖ ಸಂತೋಷ ನೆಮ್ಮದಿಯಿಂದ ಬಾಳಬೇಕೆ ಅಥವಾ ಈಗಿನ ಸಂದರ್ಭಕ್ಕೆ ಅಪ್ರಸ್ತುತವಾದ ಅಥವಾ ಅಷ್ಟೇನೂ ಪ್ರಯೋಜನವಲ್ಲದ ಪುರಾತನ ಕಾಲದ ಯಾವುದೋ ನಂಬಿಕೆ, ಸಂಪ್ರದಾಯಗಳಿಗೆ ಕಟ್ಟುಬಿದ್ದು ಮನುಷ್ಯರೇ ಧರ್ಮದ, ಜಾತಿಯ ಆಧಾರದಲ್ಲಿ ಒಬ್ಬರಿಗೊಬ್ಬರು ದ್ವೇಷಿಸುತ್ತಾ, ಅಸೂಯೆಪಡುತ್ತಾ, ಮಚ್ಚು ಚಾಕು ಬಂದೂಕು ಬಾಂಬುಗಳಿಂದ ಕೊಂದುಕೊಳ್ಳುತ್ತಾ, ಸದಾ ಆತಂಕದಿಂದ ಬದುಕಬೇಕೇ ಎಂಬ ಆಯ್ಕೆಗಳು ಮಾತ್ರ….
ನಿಮಗೆ ಧರ್ಮ ಗ್ರಂಥಗಳು, ಹಿಜಾಬ್, ಕುಂಕುಮ, ನಾಮ, ಹಲಾಲ್ ಕಟ್, ಜಟ್ಕಾ ಕಟ್, ವಿಭೂತಿ, ಗಡ್ಡ, ಅಜಾನ್, ಹನುಮಾನ್ ಚಾಲೀಸು ಮುಂತಾದ ಆಚರಣೆಗಳು ಬೇಕೆ ಅಥವಾ ಮನುಷ್ಯ – ಮನುಷ್ಯತ್ವ ಪ್ರೀತಿ, ಸಹಕಾರ, ಸಂಯಮ, ಸುಖಬದುಕು ಬೇಕೆ ಎಂಬ ಆಯ್ಕೆಗಳು ಮಾತ್ರ ನಮ್ಮ ಮುಂದಿವೆ.
ಇದನ್ನು ಯಾರೋ ಮುಲ್ಲಾಗಳು, ಪಾದ್ರಿಗಳು, ಮೌಲ್ವಿಗಳು, ಸ್ವಾಮೀಜಿಗಳು, ಮಠಾಧೀಶರು ಹೇಳಿಕೊಡಬೇಕಿಲ್ಲ ಅಥವಾ ನಿರ್ಧರಿಸ ಬೇಕಿಲ್ಲ. ನಮ್ಮ ನಮ್ಮ ಜ್ಞಾನದ ಮಿತಿಯಲ್ಲಿ, ನಾವೇ ನಿರ್ಧಾರ ತೆಗೆದುಕೊಳ್ಳಬೇಕು. ಇದನ್ನು ನಿಮ್ಮ ವಿವೇಚನೆಗೆ ಬಿಡುತ್ತಾ……
ಮತ್ತೊಮ್ಮೆ ಎಲ್ಲರಿಗೂ ರಂಜಾನ್ ಹಬ್ಬದ ಶುಭಾಶಯಗಳು..
ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ, ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ, ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ, ಮನಸ್ಸುಗಳ ಅಂತರಂಗದ ಚಳವಳಿ
ಲೇಖಕ- ವಿವೇಕಾನಂದ. ಎಚ್.ಕೆ
ವಿಧಾನಸೌಧದಲ್ಲಿ ಇಂದು ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿಗೆ ಸಂಬಂಧಿಸಿದ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ…
ಕನ್ನಡದ ಕಣ್ಮಣಿ ಡಾ.ರಾಜ್ಕುಮಾರ್ ಅವರು ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಹಸಿರಾಗಿ, ಜನರ ಉಸಿರಾಗಿದ್ದಾರೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.…
ಕರ್ನಾಟಕ ರಾಜ್ಯ ಪೌರನೌಕರರ ಸಂಘದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷರಾಗಿ ನಗರಸಭೆಯ ಲೆಕ್ಕಾಧಿಕಾರಿ ಡಾ. ಪಿ.ಪಾಂಡುಸಿಂಧೆ ಎರಡನೇ ಬಾರಿಗೆ ಅವಿರೋಧವಾಗಿ…
ಗ್ರಾಮೀಣ ಪ್ರದೇಶದ ಜನರ ಆಶೋತ್ತರಗಳಿಗೆ ಧ್ವನಿಯಾಗಿ ಪಂಚಾಯತ್ ರಾಜ್ ಇಲಾಖೆಯು ಕೆಲಸ ನಿರ್ವಹಿಸುತ್ತಿದೆ. ಪಾರದರ್ಶಕವಾಗಿ ಸ್ಥಳೀಯ ಆಡಳಿತ ವ್ಯವಸ್ಥೆ ನಡೆಯುತ್ತಾ,…
ಜೆಡಿಎಸ್ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಹರೀಶ್ ಗೌಡ ಅವರನ್ನು ಆಯ್ಕೆ ಮಾಡಲಾಗಿದೆ. ಬೆಂಗಳೂರಿನಲ್ಲಿರುವ ಜೆಡಿಎಸ್ ಪಕ್ಷದ ಕಚೇರಿಯಲ್ಲಿ ನಡೆದ ಜೆಡಿಎಸ್…
ನಾಗರಿಕರಿಗೆ ಇನ್ನಷ್ಟು ಹತ್ತಿರದಲ್ಲಿ ಸರ್ಕಾರಿ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಇ-ಆಡಳಿತ ಇಲಾಖೆಯ…