Categories: ಲೇಖನ

ರಂಜಾನ್ ಹಬ್ಬದ ಶುಭಾಶಯಗಳು…. ತಿಳಿವಳಿಕೆ ನಡವಳಿಕೆಯಾಗಬೇಕಾದ ಸಂದರ್ಭದಲ್ಲಿ…….

ಹೆಚ್ಚಿಗೆ ಏನೂ ಹೇಳಲು ಉಳಿದಿಲ್ಲ. ಸಾಮಾಜಿಕ ಜಾಲತಾಣಗಳು ಮತ್ತು ಮಾಧ್ಯಮಗಳಲ್ಲಿ ಈಗಾಗಲೇ ದೇವರು, ಧರ್ಮ, ಸಂವಿಧಾನ, ಪ್ರಜಾಪ್ರಭುತ್ವ, ಹಿಂದು, ಮುಸ್ಲಿಂ, ಕ್ರಿಶ್ಚಿಯನ್, ಖುರಾನ್, ಬೈಬಲ್, ಭಗವದ್ಗೀತೆ, ಭಾರತ, ಪಾಕಿಸ್ತಾನ, ಚೀನಾ, ಸೌಹಾರ್ಧತೆ, ಸಂಯಮ, ಸಮನ್ವಯ ಮುಂತಾದ ವಿಷಯಗಳ ಬಗ್ಗೆ  ಬಹುತೇಕ ಸಾಮಾನ್ಯ ಜನರಿಗೂ ತಲುಪುವಷ್ಟು ಚರ್ಚೆಗಳು ಅಭಿಪ್ರಾಯಗಳು ವ್ಯಕ್ತವಾಗಿದೆ……

ಈಗ ಉಳಿದಿರುವುದು ಮತ್ತು ಮುಂದುವರಿಯ ಬೇಕಾಗಿರುವುದು ನಮ್ಮ ತೀರ್ಮಾನ ಹಾಗೂ ತಿಳಿವಳಿಕೆ ಮತ್ತು ನಡವಳಿಕೆ. ಇದೇ ಅತ್ಯಂತ ಮಹತ್ವದ ವಿಷಯ……

ಆಧುನಿಕ ಸಮಾಜ ನೀಡಿರುವ ಎಲ್ಲಾ ‌ಸಿರಿ ಸಂಪತ್ತುಗಳು – ಪ್ರಜಾಪ್ರಭುತ್ವ ಎಂಬ ಅಪರಿಮಿತ ಸ್ವಾತಂತ್ರ್ಯ ಎಲ್ಲವನ್ನೂ ಉಪಯೋಗಿಸಿಕೊಂಡು ಇರುವಷ್ಟು ದಿನ‌ ಇರುವುದರಲ್ಲಿ ಒಂದಷ್ಟು ಸುಖ ಸಂತೋಷ ನೆಮ್ಮದಿಯಿಂದ ಬಾಳಬೇಕೆ ಅಥವಾ ಈಗಿನ ಸಂದರ್ಭಕ್ಕೆ ಅಪ್ರಸ್ತುತವಾದ ಅಥವಾ ಅಷ್ಟೇನೂ ಪ್ರಯೋಜನವಲ್ಲದ ಪುರಾತನ ಕಾಲದ ಯಾವುದೋ ನಂಬಿಕೆ, ಸಂಪ್ರದಾಯಗಳಿಗೆ ಕಟ್ಟುಬಿದ್ದು ಮನುಷ್ಯರೇ ಧರ್ಮದ, ಜಾತಿಯ ಆಧಾರದಲ್ಲಿ ಒಬ್ಬರಿಗೊಬ್ಬರು ದ್ವೇಷಿಸುತ್ತಾ, ಅಸೂಯೆಪಡುತ್ತಾ, ಮಚ್ಚು ಚಾಕು ಬಂದೂಕು ಬಾಂಬುಗಳಿಂದ ಕೊಂದುಕೊಳ್ಳುತ್ತಾ, ಸದಾ ಆತಂಕದಿಂದ ಬದುಕಬೇಕೇ ಎಂಬ ಆಯ್ಕೆಗಳು ಮಾತ್ರ….

ನಿಮಗೆ ಧರ್ಮ ಗ್ರಂಥಗಳು, ಹಿಜಾಬ್, ಕುಂಕುಮ, ನಾಮ, ಹಲಾಲ್ ಕಟ್, ಜಟ್ಕಾ ಕಟ್, ವಿಭೂತಿ, ಗಡ್ಡ, ಅಜಾನ್, ಹನುಮಾನ್ ಚಾಲೀಸು ಮುಂತಾದ ಆಚರಣೆಗಳು ಬೇಕೆ ಅಥವಾ ಮನುಷ್ಯ – ಮನುಷ್ಯತ್ವ  ಪ್ರೀತಿ, ಸಹಕಾರ, ಸಂಯಮ, ಸುಖಬದುಕು ಬೇಕೆ ಎಂಬ ಆಯ್ಕೆಗಳು ಮಾತ್ರ ನಮ್ಮ ಮುಂದಿವೆ.

ಇದನ್ನು ಯಾರೋ ಮುಲ್ಲಾಗಳು, ಪಾದ್ರಿಗಳು, ಮೌಲ್ವಿಗಳು, ಸ್ವಾಮೀಜಿಗಳು, ಮಠಾಧೀಶರು ಹೇಳಿಕೊಡಬೇಕಿಲ್ಲ ಅಥವಾ ನಿರ್ಧರಿಸ ಬೇಕಿಲ್ಲ. ನಮ್ಮ ನಮ್ಮ ಜ್ಞಾನದ ಮಿತಿಯಲ್ಲಿ, ನಾವೇ ನಿರ್ಧಾರ ತೆಗೆದುಕೊಳ್ಳಬೇಕು. ಇದನ್ನು ನಿಮ್ಮ ವಿವೇಚನೆಗೆ ಬಿಡುತ್ತಾ……

ಮತ್ತೊಮ್ಮೆ ಎಲ್ಲರಿಗೂ ರಂಜಾನ್ ಹಬ್ಬದ ಶುಭಾಶಯಗಳು..

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ, ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ, ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ, ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ- ವಿವೇಕಾನಂದ. ಎಚ್.ಕೆ

Ramesh Babu

Journalist

Recent Posts

ಸೈಕಲ್‌ಗೆ ಡಿಕ್ಕಿ ಹೊಡೆದು ನಿಯಂತ್ರಣ ತಪ್ಪಿದ ಬೈಕ್: ಮಹಿಳೆ ಸಾವು

ದೇವನಹಳ್ಳಿ: ರಸ್ತೆಯಲ್ಲಿ ತೆರಳುತ್ತಿದ್ದ ಸೈಕಲ್‌ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು, ಬಳಿಕ ಬೈಕ್ ಡಿವೈಡರ್‌ಗೆ ಅಪ್ಪಳಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ…

10 hours ago

ಬೆಳೆಗಳಿಗೆ ಅಸಮರ್ಪಕ ರಸಗೊಬ್ಬರ ಬಳಕೆ: ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮ- ಮಣ್ಣು ವಿಜ್ಞಾನಿ ಡಾ. ಬಾಲಾಜಿ ನಾಯ್ಕ್

ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…

15 hours ago

ಬಾಲ್ಯ ವಿವಾಹ ತಡೆದ ಅಧಿಕಾರಿಗಳು: 16 ವರ್ಷದ ಬಾಲಕಿ ರಕ್ಷಣೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…

16 hours ago

ರಾಜ್ಯದಲ್ಲಿ ಹೆಚ್ಚಿದ ಸನ್ ಸ್ಟ್ರೋಕ್‌ ಪ್ರಕರಣ : ಉರಿ ಬಿಸಿಲಿಗೆ ತತ್ತರಿಸಿದ ಜನಜೀವನ

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…

18 hours ago

ವಿಜಯ್, ಆಃಡವನ್ ಮತ್ತು ಪ್ರಮಾಣವಚನ ನಿಷ್ಠೆ…….

ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…

21 hours ago

ಸಿನಿಮಾ ಸ್ಟೈಲ್‌ನಲ್ಲಿ ಪೊಲೀಸರ ಚೇಸಿಂಗ್: ಎರಡೇ ಗಂಟೆಗಳಲ್ಲಿ ಕಳವು ಮಾಡಿದ್ದ ಕ್ಯಾಷ್‌ ಸಮೇತ ಕಳ್ಳರ ಬಂಧನ

ಚಿಕ್ಕಬಳ್ಳಾಪುರ-‌ ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…

1 day ago