ಹೆಚ್ಚಿಗೆ ಏನೂ ಹೇಳಲು ಉಳಿದಿಲ್ಲ. ಸಾಮಾಜಿಕ ಜಾಲತಾಣಗಳು ಮತ್ತು ಮಾಧ್ಯಮಗಳಲ್ಲಿ ಈಗಾಗಲೇ ದೇವರು, ಧರ್ಮ, ಸಂವಿಧಾನ, ಪ್ರಜಾಪ್ರಭುತ್ವ, ಹಿಂದು, ಮುಸ್ಲಿಂ, ಕ್ರಿಶ್ಚಿಯನ್, ಖುರಾನ್, ಬೈಬಲ್, ಭಗವದ್ಗೀತೆ, ಭಾರತ, ಪಾಕಿಸ್ತಾನ, ಚೀನಾ, ಸೌಹಾರ್ಧತೆ, ಸಂಯಮ, ಸಮನ್ವಯ ಮುಂತಾದ ವಿಷಯಗಳ ಬಗ್ಗೆ ಬಹುತೇಕ ಸಾಮಾನ್ಯ ಜನರಿಗೂ ತಲುಪುವಷ್ಟು ಚರ್ಚೆಗಳು ಅಭಿಪ್ರಾಯಗಳು ವ್ಯಕ್ತವಾಗಿದೆ……
ಈಗ ಉಳಿದಿರುವುದು ಮತ್ತು ಮುಂದುವರಿಯ ಬೇಕಾಗಿರುವುದು ನಮ್ಮ ತೀರ್ಮಾನ ಹಾಗೂ ತಿಳಿವಳಿಕೆ ಮತ್ತು ನಡವಳಿಕೆ. ಇದೇ ಅತ್ಯಂತ ಮಹತ್ವದ ವಿಷಯ……
ಆಧುನಿಕ ಸಮಾಜ ನೀಡಿರುವ ಎಲ್ಲಾ ಸಿರಿ ಸಂಪತ್ತುಗಳು – ಪ್ರಜಾಪ್ರಭುತ್ವ ಎಂಬ ಅಪರಿಮಿತ ಸ್ವಾತಂತ್ರ್ಯ ಎಲ್ಲವನ್ನೂ ಉಪಯೋಗಿಸಿಕೊಂಡು ಇರುವಷ್ಟು ದಿನ ಇರುವುದರಲ್ಲಿ ಒಂದಷ್ಟು ಸುಖ ಸಂತೋಷ ನೆಮ್ಮದಿಯಿಂದ ಬಾಳಬೇಕೆ ಅಥವಾ ಈಗಿನ ಸಂದರ್ಭಕ್ಕೆ ಅಪ್ರಸ್ತುತವಾದ ಅಥವಾ ಅಷ್ಟೇನೂ ಪ್ರಯೋಜನವಲ್ಲದ ಪುರಾತನ ಕಾಲದ ಯಾವುದೋ ನಂಬಿಕೆ, ಸಂಪ್ರದಾಯಗಳಿಗೆ ಕಟ್ಟುಬಿದ್ದು ಮನುಷ್ಯರೇ ಧರ್ಮದ, ಜಾತಿಯ ಆಧಾರದಲ್ಲಿ ಒಬ್ಬರಿಗೊಬ್ಬರು ದ್ವೇಷಿಸುತ್ತಾ, ಅಸೂಯೆಪಡುತ್ತಾ, ಮಚ್ಚು ಚಾಕು ಬಂದೂಕು ಬಾಂಬುಗಳಿಂದ ಕೊಂದುಕೊಳ್ಳುತ್ತಾ, ಸದಾ ಆತಂಕದಿಂದ ಬದುಕಬೇಕೇ ಎಂಬ ಆಯ್ಕೆಗಳು ಮಾತ್ರ….
ನಿಮಗೆ ಧರ್ಮ ಗ್ರಂಥಗಳು, ಹಿಜಾಬ್, ಕುಂಕುಮ, ನಾಮ, ಹಲಾಲ್ ಕಟ್, ಜಟ್ಕಾ ಕಟ್, ವಿಭೂತಿ, ಗಡ್ಡ, ಅಜಾನ್, ಹನುಮಾನ್ ಚಾಲೀಸು ಮುಂತಾದ ಆಚರಣೆಗಳು ಬೇಕೆ ಅಥವಾ ಮನುಷ್ಯ – ಮನುಷ್ಯತ್ವ ಪ್ರೀತಿ, ಸಹಕಾರ, ಸಂಯಮ, ಸುಖಬದುಕು ಬೇಕೆ ಎಂಬ ಆಯ್ಕೆಗಳು ಮಾತ್ರ ನಮ್ಮ ಮುಂದಿವೆ.
ಇದನ್ನು ಯಾರೋ ಮುಲ್ಲಾಗಳು, ಪಾದ್ರಿಗಳು, ಮೌಲ್ವಿಗಳು, ಸ್ವಾಮೀಜಿಗಳು, ಮಠಾಧೀಶರು ಹೇಳಿಕೊಡಬೇಕಿಲ್ಲ ಅಥವಾ ನಿರ್ಧರಿಸ ಬೇಕಿಲ್ಲ. ನಮ್ಮ ನಮ್ಮ ಜ್ಞಾನದ ಮಿತಿಯಲ್ಲಿ, ನಾವೇ ನಿರ್ಧಾರ ತೆಗೆದುಕೊಳ್ಳಬೇಕು. ಇದನ್ನು ನಿಮ್ಮ ವಿವೇಚನೆಗೆ ಬಿಡುತ್ತಾ……
ಮತ್ತೊಮ್ಮೆ ಎಲ್ಲರಿಗೂ ರಂಜಾನ್ ಹಬ್ಬದ ಶುಭಾಶಯಗಳು..
ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ, ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ, ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ, ಮನಸ್ಸುಗಳ ಅಂತರಂಗದ ಚಳವಳಿ
ಲೇಖಕ- ವಿವೇಕಾನಂದ. ಎಚ್.ಕೆ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…
ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…