Categories: ಲೇಖನ

ರಂಜಾನ್ ಹಬ್ಬದ ಶುಭಾಶಯಗಳು…. ತಿಳಿವಳಿಕೆ ನಡವಳಿಕೆಯಾಗಬೇಕಾದ ಸಂದರ್ಭದಲ್ಲಿ…….

ಹೆಚ್ಚಿಗೆ ಏನೂ ಹೇಳಲು ಉಳಿದಿಲ್ಲ. ಸಾಮಾಜಿಕ ಜಾಲತಾಣಗಳು ಮತ್ತು ಮಾಧ್ಯಮಗಳಲ್ಲಿ ಈಗಾಗಲೇ ದೇವರು, ಧರ್ಮ, ಸಂವಿಧಾನ, ಪ್ರಜಾಪ್ರಭುತ್ವ, ಹಿಂದು, ಮುಸ್ಲಿಂ, ಕ್ರಿಶ್ಚಿಯನ್, ಖುರಾನ್, ಬೈಬಲ್, ಭಗವದ್ಗೀತೆ, ಭಾರತ, ಪಾಕಿಸ್ತಾನ, ಚೀನಾ, ಸೌಹಾರ್ಧತೆ, ಸಂಯಮ, ಸಮನ್ವಯ ಮುಂತಾದ ವಿಷಯಗಳ ಬಗ್ಗೆ  ಬಹುತೇಕ ಸಾಮಾನ್ಯ ಜನರಿಗೂ ತಲುಪುವಷ್ಟು ಚರ್ಚೆಗಳು ಅಭಿಪ್ರಾಯಗಳು ವ್ಯಕ್ತವಾಗಿದೆ……

ಈಗ ಉಳಿದಿರುವುದು ಮತ್ತು ಮುಂದುವರಿಯ ಬೇಕಾಗಿರುವುದು ನಮ್ಮ ತೀರ್ಮಾನ ಹಾಗೂ ತಿಳಿವಳಿಕೆ ಮತ್ತು ನಡವಳಿಕೆ. ಇದೇ ಅತ್ಯಂತ ಮಹತ್ವದ ವಿಷಯ……

ಆಧುನಿಕ ಸಮಾಜ ನೀಡಿರುವ ಎಲ್ಲಾ ‌ಸಿರಿ ಸಂಪತ್ತುಗಳು – ಪ್ರಜಾಪ್ರಭುತ್ವ ಎಂಬ ಅಪರಿಮಿತ ಸ್ವಾತಂತ್ರ್ಯ ಎಲ್ಲವನ್ನೂ ಉಪಯೋಗಿಸಿಕೊಂಡು ಇರುವಷ್ಟು ದಿನ‌ ಇರುವುದರಲ್ಲಿ ಒಂದಷ್ಟು ಸುಖ ಸಂತೋಷ ನೆಮ್ಮದಿಯಿಂದ ಬಾಳಬೇಕೆ ಅಥವಾ ಈಗಿನ ಸಂದರ್ಭಕ್ಕೆ ಅಪ್ರಸ್ತುತವಾದ ಅಥವಾ ಅಷ್ಟೇನೂ ಪ್ರಯೋಜನವಲ್ಲದ ಪುರಾತನ ಕಾಲದ ಯಾವುದೋ ನಂಬಿಕೆ, ಸಂಪ್ರದಾಯಗಳಿಗೆ ಕಟ್ಟುಬಿದ್ದು ಮನುಷ್ಯರೇ ಧರ್ಮದ, ಜಾತಿಯ ಆಧಾರದಲ್ಲಿ ಒಬ್ಬರಿಗೊಬ್ಬರು ದ್ವೇಷಿಸುತ್ತಾ, ಅಸೂಯೆಪಡುತ್ತಾ, ಮಚ್ಚು ಚಾಕು ಬಂದೂಕು ಬಾಂಬುಗಳಿಂದ ಕೊಂದುಕೊಳ್ಳುತ್ತಾ, ಸದಾ ಆತಂಕದಿಂದ ಬದುಕಬೇಕೇ ಎಂಬ ಆಯ್ಕೆಗಳು ಮಾತ್ರ….

ನಿಮಗೆ ಧರ್ಮ ಗ್ರಂಥಗಳು, ಹಿಜಾಬ್, ಕುಂಕುಮ, ನಾಮ, ಹಲಾಲ್ ಕಟ್, ಜಟ್ಕಾ ಕಟ್, ವಿಭೂತಿ, ಗಡ್ಡ, ಅಜಾನ್, ಹನುಮಾನ್ ಚಾಲೀಸು ಮುಂತಾದ ಆಚರಣೆಗಳು ಬೇಕೆ ಅಥವಾ ಮನುಷ್ಯ – ಮನುಷ್ಯತ್ವ  ಪ್ರೀತಿ, ಸಹಕಾರ, ಸಂಯಮ, ಸುಖಬದುಕು ಬೇಕೆ ಎಂಬ ಆಯ್ಕೆಗಳು ಮಾತ್ರ ನಮ್ಮ ಮುಂದಿವೆ.

ಇದನ್ನು ಯಾರೋ ಮುಲ್ಲಾಗಳು, ಪಾದ್ರಿಗಳು, ಮೌಲ್ವಿಗಳು, ಸ್ವಾಮೀಜಿಗಳು, ಮಠಾಧೀಶರು ಹೇಳಿಕೊಡಬೇಕಿಲ್ಲ ಅಥವಾ ನಿರ್ಧರಿಸ ಬೇಕಿಲ್ಲ. ನಮ್ಮ ನಮ್ಮ ಜ್ಞಾನದ ಮಿತಿಯಲ್ಲಿ, ನಾವೇ ನಿರ್ಧಾರ ತೆಗೆದುಕೊಳ್ಳಬೇಕು. ಇದನ್ನು ನಿಮ್ಮ ವಿವೇಚನೆಗೆ ಬಿಡುತ್ತಾ……

ಮತ್ತೊಮ್ಮೆ ಎಲ್ಲರಿಗೂ ರಂಜಾನ್ ಹಬ್ಬದ ಶುಭಾಶಯಗಳು..

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ, ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ, ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ, ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ- ವಿವೇಕಾನಂದ. ಎಚ್.ಕೆ

Ramesh Babu

Journalist

Recent Posts

ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಡಿ.ಜಿ. ನೇಮಕ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…

7 hours ago

ಡಿಪಿಎ ಅಧ್ಯಕ್ಷ ಸ್ಥಾನ ಶಿಷ್ಟಾಚಾರಕ್ಕೆ ಅನ್ವಯಿಸುವುದಿಲ್ಲ: ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಿಗೆ ಅಡ್ಡಿ: ಮಾಜಿ ಶಾಸಕ ವೆಂಕಟರಮಣಯ್ಯ ವಿರುದ್ಧ ಶಾಸಕ ಧೀರಜ್ ಮುನಿರಾಜು ಆಕ್ರೋಶ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…

15 hours ago

ಹಾಲಿನ ದರ 10 ಏರಿಕೆಗೆ ಆಗ್ರಹಿಸಿ ಸೆ.22ರಂದು ಬೃಹತ್ ಹೋರಾಟ

ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…

16 hours ago

ದೇಶದ ನಿರ್ಮಾಣದಲ್ಲಿ ಎಂಜಿನಿಯರ್‌ಗಳ ಪಾತ್ರ ಅನನ್ಯ – ಸಚಿವ ಎನ್. ಚಲುವರಾಯಸ್ವಾಮಿ ಬಣ್ಣನೆ

ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್‌ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…

1 day ago

ಪ್ರಜಾಪ್ರಭುತ್ವ ಪ್ರತಿಯೊಬ್ಬರ ಆಶಯಗಳಿಗೆ ಧ್ವನಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

  ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…

2 days ago

ಮೂರು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ರೌಡಿ ಶೀಟರ್ ಅರೆಸ್ಟ್! ದೊಡ್ಡಬಳ್ಳಾಪುರದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ | 2 ಕೆ.ಜಿ. 64 ಗ್ರಾಂ ಗಾಂಜಾ ವಶ

ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್‌ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…

2 days ago