ರಕ್ತದಲ್ಲಿ ಹಾರ್ಟ್ ಚಿತ್ರ ಬರೆದು “ಚಿನ್ನಿ ಐ ಲವ್ ಯು, ಯು ಮಸ್ಟ್ ಲವ್ ಮಿ” ಎಂದು ಇನ್ಸ್ ಪೆಕ್ಟರ್ ಹಿಂದೆ ಬಿದ್ದ ಮಹಿಳೆ: ಮಹಿಳೆ ಕಾಟಕ್ಕೆ ಬೇಸತ್ತು FIR ದಾಖಲಿಸಿದ ಇನ್ಸ್ ಪೆಕ್ಟರ್

ಬೆಂಗಳೂರು : ಮಹಿಳೆಯೊಬ್ಬರು ಪೊಲೀಸ್ ಇನ್ಸ್ ಪೆಕ್ಟರ್ ಹಿಂದೆ ಬಿದ್ದು, ಪ್ರೀತಿಸುವಂತೆ ಕಾಟ ಕೊಡುತ್ತಿರುವ ಘಟನೆ ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ ನಡೆದಿದೆ.

ರಾಮಮೂರ್ತಿ ನಗರ ಠಾಣೆ ಇನ್ಸ್ ಪೆಕ್ಟರ್ ಸತೀಶ್ ಎಂಬುವವರಿಗೆ ಮಹಿಳೆಯೊಬ್ಬರು ತನ್ನನ್ನು ಪ್ರೀತಿಸುವಂತೆ ಹಲವು ಮೊಬೈಲ್ ನಂಬರ್ ಗಳ ಮೂಲಕ ಕರೆ ಮಾಡಿ, ಸಾಲು ಸಾಲು ಲೆಟರ್ ಗಳನ್ನು ಬರೆದು ಕಳುಹಿಸಿದ್ದಾರೆ.

ಚಿನ್ನಿ ಐ ಲವ್ ಯು, ಯು ಮಸ್ಟ್ ಲವ್ ಮಿ ಎಂದು ಸಾವಿರಾರು ಮೆಸೇಜ್ ಗಳನ್ನು ಕಳುಹಿಸಿತ್ತಾರಂತೆ. ಮಹಿಳೆ ಬರ್ರೋಬ್ಬರಿ 11 ಮೊಬೈಲ್ ನಂಬರ್ ಗಳಿಂದ ಇನ್ಸ್ ಪೆಕ್ಟರ್ ಗೆ ಮೆಸೇಜ್ ಕಳುಹಿಸಿ ಕಾಟ ಕೊಡುತ್ತಿದ್ದು, ಇದರಿಂದ ಬೇಸತ್ತ ಇನ್ಸ್ ಪೆಕ್ಟರ್ 11 ನಂಬರ್ ಗಳನ್ನು ಬ್ಲಾಕ್ ಮಾಡಿದ್ದಾರೆ.

ಆದಾಗ್ಯೂ ಮಹಿಳೆಯ ಕಾಟ ನಿಂತಿಲ್ಲ. ತನ್ನನ್ನು ಪ್ರೀತಿಸದಿದ್ದರೆ ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ. ತಾನು ಕಾಂರೆಸ್ ಕಾರ್ಯಕರ್ತೆ, ತನಗೆ ಗೃಹ ಸಚಿವರು, ಡಿಸಿಎಂ ಗೊತ್ತು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕೂಡ ಗೊತ್ತು ಎಂದು ಅವರೊಂದಿಗಿರುವ ಫೋಟೋಗಳನ್ನು ಇನ್ಸ್ ಪೆಕ್ಟರ್ ಗೆ ಕಳುಹಿಸಿದ್ದಾಳಂತೆ. ಠಾಣೆಯಲ್ಲಿ ಪಿಐ ಇಲ್ಲದಿದ್ದಾಗ ಕಜ್ಜಾಯ ಡಬ್ಬಿ, ಹೂ ಬೊಕ್ಕೆಗಳನ್ನು ಠಾಣೆಗೆ ತಂದಿಟ್ಟಿದ್ದು, ಲವ್ ಲೆಟರ್ ಜೊತೆಗೆ ನಿದ್ರೆ ಮಾತ್ರೆಯನ್ನೂ ಕಳುಹಿಸಿಕೊಟ್ಟಿದ್ದಾಳಂತೆ. ನನ್ನ ಪ್ರೀತಿಯನ್ನು ನೀವು ಒಪ್ಪುತ್ತಿಲ್ಲ. ತೊಂದರೆ ಕೊಡುವುದಿಲ್ಲ. ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆಯೊಡ್ದಿದ್ದಾಳೆ. ನನ್ನ ಸಾವಿಗೆ ನೀವೆ ಕಾರಣ ಎಂದು ರಕ್ತದಲ್ಲಿ ಹಾರ್ಟ್ ಚಿತ್ರ ಬರೆದು ಕಳುಹಿಸಿದ್ದಾಳಂತೆ.

ಮಹಿಳೆಯ ಕಾಟಕ್ಕೆ ಬೇಸತ್ತ ಇನ್ಸ್ ಪೆಕ್ಟರ್ ಸತೀಶ್, ಕರ್ತವ್ಯಕ್ಕೆ ಅಡ್ಡಿ, ಮಹಿಳೆಯಿಂದ ಕಿರುಕುಳ, ಬೆದರಿಕೆ ಹಿನ್ನೆಲೆಯಲ್ಲಿ ಎಫ್ ಐ ಆರ್ ದಾಖಲಿಸಿದ್ದಾರೆ.

Ramesh Babu

Journalist

Recent Posts

ವಿಶ್ವದ ಅತಿಮುಖ್ಯ ನಗರ, ಭಾರತದ ಆಡಳಿತ ಶಕ್ತಿ ಕೇಂದ್ರ ದೆಹಲಿಯಲ್ಲಿ ವಾಯು ಮಾಲಿನ್ಯ….

ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…

44 minutes ago

ಸಿದ್ದೇನಾಯಕನಹಳ್ಳಿಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಪುತ್ಥಳಿ ಅನಾವರಣ: ಸಚಿವ ಕೆ.ಎಚ್ ಮುನಿಯಪ್ಪ ಭಾಗಿ

ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…

12 hours ago

ಬಾಶೆಟ್ಟಿಹಳ್ಳಿ ಪಪಂ ಚುನಾವಣೆ: ಶೇ.78ರಷ್ಟು ಮತದಾನ: ನಕಲಿ ಮತದಾನಕ್ಕೆ ಯತ್ನಿಸಿದ ವ್ಯಕ್ತಿಯನ್ನು ವಶಕ್ಕೆ ಪಡೆದ ಪೊಲೀಸರು: ಕುಡಿದು ಚುನಾವಣೆ ಕೆಲಸಕ್ಕೆ ಬಂದ ಶಿಕ್ಷಕ

ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಭಾನುವಾರ ಸೂಸುತ್ರವಾಗಿ ಪೂರ್ಣಗೊಂಡಿದೆ. ರಾಜ್ಯ ಚುನಾವಣಾ ಆಯೋಗ, ಜಿಲ್ಲಾಡಳಿತ, ತಾಲೂಕು ಆಡಳಿತ, ಬಾಶೆಟ್ಟಿಹಳ್ಳಿ…

13 hours ago

ಒಂಟಿ ಮನೆ ಸುತ್ತಾ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳು: ಗಾಬರಿಗೊಂಡ ಮಹಿಳೆ: ಗ್ರಾಮಸ್ಥರ ಕೈಗೆ ಸಿಕ್ಕ ಆಸಾಮಿಗಳು, ಸದ್ಯ ವಶಕ್ಕೆ ಪಡೆದ ಪೊಲೀಸರು

ಒಂಟಿ ಮನೆ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಊರಿನ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಇಂದು…

13 hours ago

ಚಿಕ್ಕಜಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಎಸಿ ಗೋವಿಂದಪ್ಪ ಅವಿರೋಧ ಆಯ್ಕೆ

ಯಲಹಂಕ ತಾಲೂಕಿನ ಜಾಲ ಹೋಬಳಿಯ ಚಿಕ್ಕಜಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಎ.ಸಿ. ಗೋವಿಂದಪ್ಪ ಅವಿರೋಧವಾಗಿ…

14 hours ago

ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ: ಜಿಲ್ಲೆಯ 99,828 ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ- ಸಚಿವ ಕೆ.ಎಚ್ ಮುನಿಯಪ್ಪ

ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪೋಲಿಯೋ ಹನಿ ಹಾಕಿಸುವ ಮೂಲಕ ಪೋಲಿಯೋ ಮುಕ್ತ ರಾಷ್ಟ್ರ ಎಂದು ಮತ್ತೊಮ್ಮೆ ಸಾಬೀತು ಮಾಡೋಣ…

21 hours ago