ಬಾಡಿಗೆ ಮನೆಯಲ್ಲಿ ರಕ್ತದ ಮೊಡುವಿನಲ್ಲಿ ಗೃಹಿಣಿಯೋರ್ವರ ಮೃತ ದೇಹ ಪತ್ತೆಯಾಗಿರುವ ಘಟನೆ ಕೋಳೂರು ಗ್ರಾಮದಲ್ಲಿ ಬುಧವಾರ ರಾತ್ರಿ ನಡೆದಿದೆ.
ಮೃತ ಮಹಿಳೆಯನ್ನು ಭಾರತಿ (27) ಎಂದು ಗುರುತಿಸಲಾಗಿದ್ದು, ಆಕೆಗೆ ಸುಮಾರು 5 ವರ್ಷದ ಹೆಣ್ಣು ಮಗು ಸಹ ಇದೆ.
ಗಂಡನನ್ನು ಬಿಟ್ಟು ಪ್ರಿಯಕರನ ಜೊತೆ ಸಂಸಾರ ಮಾಡಲು ಕೋಳೂರು ಗ್ರಾಮದಲ್ಲಿ ಬಾಡಿಗೆ ಮನೆ ಮಾಡಿಕೊಂಡು ವಾಸವಿದ್ದ ಭಾರತಿ, ಇದನ್ನು ಸಹಿಸದ ಭಾರತಿ ಗಂಡ ವಿಳಾಸ ಪತ್ತೆ ಮಾಡಿ ಮಂಗಳವಾರ ರಾತ್ರಿ ಮನೆಗೆ ಬಂದು ಭಾರತಿಯನ್ನು ಕೊಲೆ ಮಾಡಿ ತನ್ನ ಮಗುವನ್ನು ಕರೆದುಕೊಂಡು ಹೋಗಿದ್ದಾನೆ ಎಂದು ಶಂಕಿಸಲಾಗಿದೆ. ಪ್ರಿಯಕರ ಅಲ್ಲಿಂದ ಪರಾರಿಯಾಗಿದ್ದಾನೆ. ಘಟನೆ ಬುಧವಾರ ರಾತ್ರಿ ಬೆಳಕಿಗೆ ಬಂದಿದೆ. ಸುಮಾರು ಹತ್ತು ದಿನಗಳಿಂದೆ ಕೋಳೂರಿಗೆ ಬಂದು ಬಾಡಿಗೆ ಮನೆ ಮಾಡಿ ವಾಸವಿದ್ದರು ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.
ಘಟನ ಸ್ಥಳಕ್ಕೆ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ತನಿಖೆ ನಡೆಸಿದ್ದಾರೆ.
ಬೆಂಗಳೂರು ಗ್ರಾಮಾಂತರ: ಅಯೋಧ್ಯೆಯಲ್ಲಿ ಆರ್ಎಸ್ಎಸ್ ಹಾಗೂ ಬಿಜೆಪಿ ಪರವಾಗಿರುವವರಿಂದಲೇ ಭಾರೀ ಪ್ರಮಾಣದ ಲೂಟಿ ನಡೆದಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ…
ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ಯಾವುದೇ ಒಂದು ಸಮುದಾಯಕ್ಕಾಗಿ ಮಾತ್ರ ಹೋರಾಟ ನಡೆಸಿಲ್ಲ. ದೇಶದ ಪ್ರತಿಯೊಬ್ಬ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…
"ವಿಕಸಿತ ಭಾರತ – ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಕಾಯ್ದೆ, 2025" ಗ್ರಾಮೀಣ ಭಾರತದ ಸಮಗ್ರ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣದಲ್ಲಿ ಪತ್ತೆಹಚ್ಚಲಾಗಿದ್ದ ಬೆಲೆಬಾಳುವ ಚಿನ್ನಾಭರಣ ಹಾಗೂ ನಗದು…