ಬಾಡಿಗೆ ಮನೆಯಲ್ಲಿ ರಕ್ತದ ಮೊಡುವಿನಲ್ಲಿ ಗೃಹಿಣಿಯೋರ್ವರ ಮೃತ ದೇಹ ಪತ್ತೆಯಾಗಿರುವ ಘಟನೆ ಕೋಳೂರು ಗ್ರಾಮದಲ್ಲಿ ಬುಧವಾರ ರಾತ್ರಿ ನಡೆದಿದೆ.
ಮೃತ ಮಹಿಳೆಯನ್ನು ಭಾರತಿ (27) ಎಂದು ಗುರುತಿಸಲಾಗಿದ್ದು, ಆಕೆಗೆ ಸುಮಾರು 5 ವರ್ಷದ ಹೆಣ್ಣು ಮಗು ಸಹ ಇದೆ.
ಗಂಡನನ್ನು ಬಿಟ್ಟು ಪ್ರಿಯಕರನ ಜೊತೆ ಸಂಸಾರ ಮಾಡಲು ಕೋಳೂರು ಗ್ರಾಮದಲ್ಲಿ ಬಾಡಿಗೆ ಮನೆ ಮಾಡಿಕೊಂಡು ವಾಸವಿದ್ದ ಭಾರತಿ, ಇದನ್ನು ಸಹಿಸದ ಭಾರತಿ ಗಂಡ ವಿಳಾಸ ಪತ್ತೆ ಮಾಡಿ ಮಂಗಳವಾರ ರಾತ್ರಿ ಮನೆಗೆ ಬಂದು ಭಾರತಿಯನ್ನು ಕೊಲೆ ಮಾಡಿ ತನ್ನ ಮಗುವನ್ನು ಕರೆದುಕೊಂಡು ಹೋಗಿದ್ದಾನೆ ಎಂದು ಶಂಕಿಸಲಾಗಿದೆ. ಪ್ರಿಯಕರ ಅಲ್ಲಿಂದ ಪರಾರಿಯಾಗಿದ್ದಾನೆ. ಘಟನೆ ಬುಧವಾರ ರಾತ್ರಿ ಬೆಳಕಿಗೆ ಬಂದಿದೆ. ಸುಮಾರು ಹತ್ತು ದಿನಗಳಿಂದೆ ಕೋಳೂರಿಗೆ ಬಂದು ಬಾಡಿಗೆ ಮನೆ ಮಾಡಿ ವಾಸವಿದ್ದರು ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.
ಘಟನ ಸ್ಥಳಕ್ಕೆ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ತನಿಖೆ ನಡೆಸಿದ್ದಾರೆ.
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…