ತಾಲೂಕಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ರಕ್ತನಿಧಿ ಸ್ಥಾಪಿಸಿ ಜನರ ಜೀವ ಉಳಿಸಬೇಕು. ಅದೇರೀತಿ ಪಾರ್ಕಿಂಗ್ ವ್ಯವಸ್ಥೆ, ನವಜಾತ ಶಿಶು ತೀವ್ರ ನಿಗಾ ಘಟಕ, ಹೆಚ್ಚುವರಿ ಅಂಬುಲೆನ್ಸ್, ನುರಿತ ವೈದ್ಯರ ನೇಮಕ, ಎಂಆರ್ ಐ ಸ್ಕ್ಯಾನಿಂಗ್ ಸೆಂಟರ್, ಆಸ್ಪತ್ರೆ ಸುತ್ತಾ ಕಾಂಪೌಂಡ್ ನಿರ್ಮಾಣ ಮಾಡಬೇಕು ಎಂದು ಪ್ರಜಾ ವಿಮೋಚನಾ ಬಹುಜನ ಸಮಿತಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಚೆನ್ನಿಗರಾಯಪ್ಪ ಆಗ್ರಹಿಸಿದರು.
ನಗರದ ಸಾರ್ವಜನಿಕ ಆಸ್ಪತ್ರೆ ಮುಂಭಾಗ ಈ ಕುರಿತು ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ರೋಗಿಗಳಿಗೆ ಸಮಯಕ್ಕೆ ಸರಿಯಾಗಿ ರಕ್ತ ಸಿಗದೇ ಅಸುನೀಗುತ್ತಿದ್ದಾರೆ. ಇದು ಇನ್ನು ಮುಂದೆ ಈ ರೀತಿ ಆಗಬಾರದು ಎಲ್ಲರ ಜೀವ ಅತ್ಯಮೂಲ್ಯ ರೋಗಿಗಳ ಪ್ರಾಣ ಉಳಿಸಬೇಕು ಎಂದರು.
ಈ ಹಿಂದೆ ಇದ್ದ ಡಾ.ಚೌಡಯ್ಯ ನಿಧನದಿಂದ ತೆರವಾದ ಸ್ಥಾನಕ್ಕೆ ತಜ್ಞ ವೈದ್ಯರನ್ನ ನೇಮಿಸಬೇಕು, ಶಿಥಿಲಗೊಂಡಿರುವ ವೀಲ್ ಚೇರ್ ಗಳನ್ನು ಬದಲಿಸಬೇಕು, ಸ್ಕ್ಯಾನಿಂಗ್ ಮಾಡಲು ಹೆಚ್ಚುವರಿ ವೈದ್ಯರನ್ನ ನೇಮಿಸಬೇಕು ಎಂದು ಒತ್ತಾಯಿಸಿದರು.
ಈ ವೇಳೆ ರಾಜ್ಯ ಕಾರ್ಯದರ್ಶಿ ಎಂ.ಸುರೇಶ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಲಕ್ಷ್ಮಿ ಶ್ರೀನಿವಾಸ್, ನಗರ ಅಧ್ಯಕ್ಷ ಶ್ರೀನಿವಾಸ್, ಸೇರಿದಂತೆ ಇತರರು ಉಪಸ್ಥಿತರಿದ್ದರು.
ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್ ಓಕ್ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ…
ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ *ಆಟೋ ಎಲ್.ಪಿ.ಜಿ*.ಗೆ ಯಾವುದೇ ರೀತಿಯ ಕೊರತೆ…
Cheap Emotional Support Animal Letter: Affordable ESA Documentation Affordable Emotional Support Animal Letters for Enhanced…
ಶ್ರೀರಾಮನವಮಿ ಅಂಗವಾಗಿ ವಿಶ್ವ ಹಿಂದೂ ಪರಿಷತ್ ಬಜರಂಗ ದಳ ವತಿಯಿಂದ ದೊಡ್ಡಬಳ್ಳಾಪುರ ನಗರದಲ್ಲಿ ಮಾರ್ಚ್ 27 ರಿಂದ ಮೂರು ದಿನಗಳ…
ಆಟವಾಡುತ್ತಾ ಈಜಲು ಹೋದ ನಾಲ್ವರು ಮಕ್ಕಳು ಕೃಷಿ ಹೊಂಡದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು…
ಶ್ರೀರಾಮನವಮಿ ಅನ್ನ ಪ್ರಸಾದಿಂದ ಗ್ರಾಮಸ್ಥರಿಗೆ ಫುಡ್ ಪಾಯಿಸನ್...!!?ಆಗಿದ್ದು, ಅನ್ನಪ್ರಸಾದ ಸೇವಿಸಿದ ಗ್ರಾಮಸ್ಥರಲ್ಲಿ ಬಹುತೇಕ ಜನ ಆಸ್ಪತ್ರೆ ಪಾಲಾಗಿದ್ದಾರೆ. ಆಸ್ಪತ್ರೆಯಲ್ಲಿ ದಾಖಲಾಗಿರುವ…