ರಕ್ತನಿಧಿ ಸ್ಥಾಪಿಸಿ ಜನರ ಜೀವ ಉಳಿಸಿ- ಪ್ರ.ವಿ‌.ಬ.ಸಮಿತಿ ರಾ.ಪ್ರ.ಕಾರ್ಯದರ್ಶಿ ಎಂ ಚೆನ್ನಿಗರಾಯಪ್ಪ

ತಾಲೂಕಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ರಕ್ತನಿಧಿ ಸ್ಥಾಪಿಸಿ ಜನರ ಜೀವ ಉಳಿಸಬೇಕು. ಅದೇರೀತಿ ಪಾರ್ಕಿಂಗ್ ವ್ಯವಸ್ಥೆ, ನವಜಾತ ಶಿಶು ತೀವ್ರ ನಿಗಾ ಘಟಕ, ಹೆಚ್ಚುವರಿ ಅಂಬುಲೆನ್ಸ್, ನುರಿತ ವೈದ್ಯರ ನೇಮಕ, ಎಂಆರ್ ಐ ಸ್ಕ್ಯಾನಿಂಗ್ ಸೆಂಟರ್, ಆಸ್ಪತ್ರೆ ಸುತ್ತಾ ಕಾಂಪೌಂಡ್ ನಿರ್ಮಾಣ ಮಾಡಬೇಕು ಎಂದು ಪ್ರಜಾ ವಿಮೋಚನಾ ಬಹುಜನ ಸಮಿತಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಚೆನ್ನಿಗರಾಯಪ್ಪ ಆಗ್ರಹಿಸಿದರು.

ನಗರದ ಸಾರ್ವಜನಿಕ ಆಸ್ಪತ್ರೆ ಮುಂಭಾಗ ಈ ಕುರಿತು ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ರೋಗಿಗಳಿಗೆ ಸಮಯಕ್ಕೆ ಸರಿಯಾಗಿ ರಕ್ತ ಸಿಗದೇ ಅಸುನೀಗುತ್ತಿದ್ದಾರೆ. ಇದು ಇನ್ನು ಮುಂದೆ ಈ ರೀತಿ ಆಗಬಾರದು ಎಲ್ಲರ ಜೀವ ಅತ್ಯಮೂಲ್ಯ ರೋಗಿಗಳ ಪ್ರಾಣ ಉಳಿಸಬೇಕು ಎಂದರು.

ಈ ಹಿಂದೆ ಇದ್ದ ಡಾ.ಚೌಡಯ್ಯ ನಿಧನದಿಂದ ತೆರವಾದ ಸ್ಥಾನಕ್ಕೆ ತಜ್ಞ ವೈದ್ಯರನ್ನ ನೇಮಿಸಬೇಕು, ಶಿಥಿಲಗೊಂಡಿರುವ ವೀಲ್ ಚೇರ್ ಗಳನ್ನು ಬದಲಿಸಬೇಕು, ಸ್ಕ್ಯಾನಿಂಗ್ ಮಾಡಲು ಹೆಚ್ಚುವರಿ ವೈದ್ಯರನ್ನ ನೇಮಿಸಬೇಕು ಎಂದು ಒತ್ತಾಯಿಸಿದರು.

ಈ ವೇಳೆ ರಾಜ್ಯ ಕಾರ್ಯದರ್ಶಿ ಎಂ.ಸುರೇಶ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಲಕ್ಷ್ಮಿ ಶ್ರೀನಿವಾಸ್, ನಗರ ಅಧ್ಯಕ್ಷ ಶ್ರೀನಿವಾಸ್, ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

2 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

3 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

4 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

4 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

8 hours ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

10 hours ago