ರಕ್ತನಿಧಿ ಸ್ಥಾಪಿಸಿ ಜನರ ಜೀವ ಉಳಿಸಿ- ಪ್ರ.ವಿ‌.ಬ.ಸಮಿತಿ ರಾ.ಪ್ರ.ಕಾರ್ಯದರ್ಶಿ ಎಂ ಚೆನ್ನಿಗರಾಯಪ್ಪ

ತಾಲೂಕಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ರಕ್ತನಿಧಿ ಸ್ಥಾಪಿಸಿ ಜನರ ಜೀವ ಉಳಿಸಬೇಕು. ಅದೇರೀತಿ ಪಾರ್ಕಿಂಗ್ ವ್ಯವಸ್ಥೆ, ನವಜಾತ ಶಿಶು ತೀವ್ರ ನಿಗಾ ಘಟಕ, ಹೆಚ್ಚುವರಿ ಅಂಬುಲೆನ್ಸ್, ನುರಿತ ವೈದ್ಯರ ನೇಮಕ, ಎಂಆರ್ ಐ ಸ್ಕ್ಯಾನಿಂಗ್ ಸೆಂಟರ್, ಆಸ್ಪತ್ರೆ ಸುತ್ತಾ ಕಾಂಪೌಂಡ್ ನಿರ್ಮಾಣ ಮಾಡಬೇಕು ಎಂದು ಪ್ರಜಾ ವಿಮೋಚನಾ ಬಹುಜನ ಸಮಿತಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಚೆನ್ನಿಗರಾಯಪ್ಪ ಆಗ್ರಹಿಸಿದರು.

ನಗರದ ಸಾರ್ವಜನಿಕ ಆಸ್ಪತ್ರೆ ಮುಂಭಾಗ ಈ ಕುರಿತು ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ರೋಗಿಗಳಿಗೆ ಸಮಯಕ್ಕೆ ಸರಿಯಾಗಿ ರಕ್ತ ಸಿಗದೇ ಅಸುನೀಗುತ್ತಿದ್ದಾರೆ. ಇದು ಇನ್ನು ಮುಂದೆ ಈ ರೀತಿ ಆಗಬಾರದು ಎಲ್ಲರ ಜೀವ ಅತ್ಯಮೂಲ್ಯ ರೋಗಿಗಳ ಪ್ರಾಣ ಉಳಿಸಬೇಕು ಎಂದರು.

ಈ ಹಿಂದೆ ಇದ್ದ ಡಾ.ಚೌಡಯ್ಯ ನಿಧನದಿಂದ ತೆರವಾದ ಸ್ಥಾನಕ್ಕೆ ತಜ್ಞ ವೈದ್ಯರನ್ನ ನೇಮಿಸಬೇಕು, ಶಿಥಿಲಗೊಂಡಿರುವ ವೀಲ್ ಚೇರ್ ಗಳನ್ನು ಬದಲಿಸಬೇಕು, ಸ್ಕ್ಯಾನಿಂಗ್ ಮಾಡಲು ಹೆಚ್ಚುವರಿ ವೈದ್ಯರನ್ನ ನೇಮಿಸಬೇಕು ಎಂದು ಒತ್ತಾಯಿಸಿದರು.

ಈ ವೇಳೆ ರಾಜ್ಯ ಕಾರ್ಯದರ್ಶಿ ಎಂ.ಸುರೇಶ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಲಕ್ಷ್ಮಿ ಶ್ರೀನಿವಾಸ್, ನಗರ ಅಧ್ಯಕ್ಷ ಶ್ರೀನಿವಾಸ್, ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

6 hours ago

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

17 hours ago

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

1 day ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

1 day ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

2 days ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

2 days ago