ತಾಲೂಕಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ರಕ್ತನಿಧಿ ಸ್ಥಾಪಿಸಿ ಜನರ ಜೀವ ಉಳಿಸಬೇಕು. ಅದೇರೀತಿ ಪಾರ್ಕಿಂಗ್ ವ್ಯವಸ್ಥೆ, ನವಜಾತ ಶಿಶು ತೀವ್ರ ನಿಗಾ ಘಟಕ, ಹೆಚ್ಚುವರಿ ಅಂಬುಲೆನ್ಸ್, ನುರಿತ ವೃದ್ಯರ ನೇಮಕ, ಎಂಆರ್ ಐ ಸ್ಕ್ಯಾನಿಂಗ್ ಸೆಂಟರ್, ಆಸ್ಪತ್ರೆ ಸುತ್ತಾ ಕಾಂಪೌಂಡ್ ನಿರ್ಮಾಣ ಮಾಡಬೇಕು ಎಂದು ಪ್ರಜಾ ವಿಮೋಚನಾ ಬಹುಜನ ಸಮಿತಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಚೆನ್ನಿಗರಾಯಪ್ಪ ಆಗ್ರಹಿಸಿದರು.
ನಗರದ ಸಾರ್ವಜನಿಕ ಆಸ್ಪತ್ರೆ ಮುಂಭಾಗ ಈ ಕುರಿತು ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ರೋಗಿಗಳಿಗೆ ಸಮಯಕ್ಕೆ ಸರಿಯಾಗಿ ರಕ್ತ ಸಿಗದೇ ಅಸುನೀಗುತ್ತಿದ್ದಾರೆ. ಇದು ಇನ್ನು ಮುಂದೆ ಈ ರೀತಿ ಆಗಬಾರದು ಎಲ್ಲರ ಜೀವ ಅತ್ಯಮೂಲ್ಯ ರೋಗಿಗಳ ಪ್ರಾಣ ಉಳಿಸಬೇಕು ಎಂದರು.
ಈ ಹಿಂದೆ ಇದ್ದ ಡಾ.ಚೌಡಯ್ಯ ನಿಧನದಿಂದ ತೆರವಾದ ಸ್ಥಾನಕ್ಕೆ ತಜ್ಞ ವೈದ್ಯರನ್ನ ನೇಮಿಸಬೇಕು, ಶಿಥಿಲಗೊಂಡಿರುವ ವೀಲ್ ಚೇರ್ ಗಳನ್ನು ಬದಲಿಸಬೇಕು, ಸ್ಕ್ಯಾನಿಂಗ್ ಮಾಡಲು ಹೆಚ್ಚುವರಿ ವೈದ್ಯರನ್ನ ನೇಮಿಸಬೇಕು ಎಂದು ಒತ್ತಾಯಿಸಿದರು.
ಈ ವೇಳೆ ರಾಜ್ಯ ಕಾರ್ಯದರ್ಶಿ ಎಂ.ಸುರೇಶ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಲಕ್ಷ್ಮಿ ಶ್ರೀನಿವಾಸ್, ನಗರ ಅಧ್ಯಕ್ಷ ಶ್ರೀನಿವಾಸ್, ಸೇರಿದಂತೆ ಇತರರು ಉಪಸ್ಥಿತರಿದ್ದರು.
ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು…
ಚಿಂತನೆ ಮತ್ತು ಚಿಂತಕರು....... " ಹೃದಯಾಂತರಾಳದಿಂದ ಬರುವ ಮಾತುಗಳು ಹೃದಯವನ್ನು ತಾಕುತ್ತವೆ " ರೂಮಿ........... ಕೃತಕತೆ ಮತ್ತು ಸಹಜತೆಯ ನಡುವಿನ…
ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರನ್ನಾಗಿ ನರಸಿಂಹ ಮೂರ್ತಿ ಅವರನ್ನು ಅಧಿಕೃತವಾಗಿ ನೇಮಕ ಮಾಡಿದ್ದೇವೆ. ಅವರು ಪಕ್ಷಕ್ಕಾಗಿ ಹಗಲಿರುಳು…
ಕನ್ನಡಿಗರು ತಮ್ಮ ಬೆವರ ಗಳಿಕೆಯಿಂದ ನೀಡುವ ಒಂದು ರೂಪಾಯಿ ತೆರಿಗೆಗೆ ಪ್ರತಿಯಾಗಿ ಕೇಂದ್ರ ಸರ್ಕಾರ ಹದಿನೈದು ಪೈಸೆ ಮಾತ್ರ ವಾಪಸ್ಸು…
ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲ್ಲೂಕಿನ, ಶ್ರವಣಬೆಳಗೊಳದಲ್ಲಿ ಪಾಪಿ ಪುತ್ರನೊಬ್ಬ ಮದುವೆ ಮಾಡಿಸಲಿಲ್ಲವೆಂದು ತಾಯಿಯನ್ನೇ ಕೊಲೆಗೈದಿದ್ದಾನೆ. ಗಂಗಮ್ಮ (65), ಕೊಲೆಯಾದ ಮಹಿಳೆ.…
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ವಿ. ಶಾಂತಕುಮಾರ್ ಅವರ ಹುಟ್ಟುಹಬ್ಬ ಅರ್ಥಪೂರ್ಣವಾಗಿ ಆಚರಿಸಲಾಗಿದೆ. ಕಾಂಗ್ರೆಸ್…