ತಾಲೂಕಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ರಕ್ತನಿಧಿ ಸ್ಥಾಪಿಸಿ ಜನರ ಜೀವ ಉಳಿಸಬೇಕು. ಅದೇರೀತಿ ಪಾರ್ಕಿಂಗ್ ವ್ಯವಸ್ಥೆ, ನವಜಾತ ಶಿಶು ತೀವ್ರ ನಿಗಾ ಘಟಕ, ಹೆಚ್ಚುವರಿ ಅಂಬುಲೆನ್ಸ್, ನುರಿತ ವೃದ್ಯರ ನೇಮಕ, ಎಂಆರ್ ಐ ಸ್ಕ್ಯಾನಿಂಗ್ ಸೆಂಟರ್, ಆಸ್ಪತ್ರೆ ಸುತ್ತಾ ಕಾಂಪೌಂಡ್ ನಿರ್ಮಾಣ ಮಾಡಬೇಕು ಎಂದು ಪ್ರಜಾ ವಿಮೋಚನಾ ಬಹುಜನ ಸಮಿತಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಚೆನ್ನಿಗರಾಯಪ್ಪ ಆಗ್ರಹಿಸಿದರು.
ನಗರದ ಸಾರ್ವಜನಿಕ ಆಸ್ಪತ್ರೆ ಮುಂಭಾಗ ಈ ಕುರಿತು ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ರೋಗಿಗಳಿಗೆ ಸಮಯಕ್ಕೆ ಸರಿಯಾಗಿ ರಕ್ತ ಸಿಗದೇ ಅಸುನೀಗುತ್ತಿದ್ದಾರೆ. ಇದು ಇನ್ನು ಮುಂದೆ ಈ ರೀತಿ ಆಗಬಾರದು ಎಲ್ಲರ ಜೀವ ಅತ್ಯಮೂಲ್ಯ ರೋಗಿಗಳ ಪ್ರಾಣ ಉಳಿಸಬೇಕು ಎಂದರು.
ಈ ಹಿಂದೆ ಇದ್ದ ಡಾ.ಚೌಡಯ್ಯ ನಿಧನದಿಂದ ತೆರವಾದ ಸ್ಥಾನಕ್ಕೆ ತಜ್ಞ ವೈದ್ಯರನ್ನ ನೇಮಿಸಬೇಕು, ಶಿಥಿಲಗೊಂಡಿರುವ ವೀಲ್ ಚೇರ್ ಗಳನ್ನು ಬದಲಿಸಬೇಕು, ಸ್ಕ್ಯಾನಿಂಗ್ ಮಾಡಲು ಹೆಚ್ಚುವರಿ ವೈದ್ಯರನ್ನ ನೇಮಿಸಬೇಕು ಎಂದು ಒತ್ತಾಯಿಸಿದರು.
ಈ ವೇಳೆ ರಾಜ್ಯ ಕಾರ್ಯದರ್ಶಿ ಎಂ.ಸುರೇಶ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಲಕ್ಷ್ಮಿ ಶ್ರೀನಿವಾಸ್, ನಗರ ಅಧ್ಯಕ್ಷ ಶ್ರೀನಿವಾಸ್, ಸೇರಿದಂತೆ ಇತರರು ಉಪಸ್ಥಿತರಿದ್ದರು.
ಭಾರತದ ಬಹಳಷ್ಟು ಮಧ್ಯಮ ವರ್ಗದ ಜನರಲ್ಲಿ ಜೀವನೋತ್ಸಾಹ ಕಡಿಮೆಯಾಗುತ್ತಿದೇಯೇ ಎಂಬ ಅನುಮಾನ ಶುರುವಾಗಿದೆ. ನಿಜಕ್ಕೂ ಬೃಹತ್ ಸಂಖ್ಯೆಯ ಮಧ್ಯಮ ವರ್ಗದವರು…
ದೊಡ್ಡಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಕಳ್ಳತನ ಪ್ರಕರಣಗಳು ಆತಂಕಕಾರಿ ಪ್ರಮಾಣದಲ್ಲಿ ಹೆಚ್ಚಾಗುತ್ತಿದ್ದು, ಜನಸಾಮಾನ್ಯರ ನೆಮ್ಮದಿ ಕದಡಿದೆ. ಮಹಿಳೆಯರ ಚಿನ್ನಾಭರಣ,…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಸೇರಿದಂತೆ ತಮ್ಮೊಂದಿಗೆ ಬುಧವಾರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ 13 ಸಚಿವರಿಗೆ ಗುರುವಾರ ಖಾತೆ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರವ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ವಸತಿ ಶಾಲೆಗಳಲ್ಲಿ ತಾತ್ಕಾಲಿಕವಾಗಿ ಗೌರವಧನ ಆಧಾರದ…
ಮಾವು ಮತ್ತು ಹಲಸು ಹಣ್ಣಿನ ಋತುಮಾನದ ಈ ಸಂದರ್ಭದಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ರೈತರಿಗೆ ಹಾಗೂ ಗ್ರಾಹಕರಿಗೆ ಅನುಕೂಲವಾಗಲೆಂದು ಒಂದೇ…
ದೊಡ್ಡಬಳ್ಳಾಪುರ ನಗರದ ಡಿ ಕ್ರಾಸ್ ಬಳಿ ನಿಲ್ಲಿಸಿದ್ದ ಟಿವಿಎಸ್ ಎಕ್ಸ್ಎಲ್-100 ವಾಹನವನ್ನು ಕಳ್ಳನೊಬ್ಬ ಕಳವು ಮಾಡಿಕೊಂಡು ಹೋಗಿರುವ ಘಟನೆ ಬುಧವಾರ…