ರಕ್ತಸಿಕ್ತ ದೇಹವನ್ನು ಹುಸೇನ್‌ ದೇವರಿಗೆ ಅರ್ಪಿಸಿ ಹರಕೆ ತೀರಿಸಿದ ಶಿಯಾಮುಸ್ಲಿಮರು

ದೊಡ್ಡಬಳ್ಳಾಪುರ: ನಗರದ ಕೋಟೆ ರಸ್ತೆಯಲ್ಲಿರುವ ಕಿಲ್ಲಾ ಮಸೀದಿಯಲ್ಲಿ ಮೊಹರಂ ಅಂಗವಾಗಿ ಹಸೇನ್‌ ಹುಸೇನ್‌ ಆಚರಣೆ ಭಾನುವಾರ ಶ್ರದ್ಧಾಭಕ್ತಿಗಳಿಂದ ನಡೆಯಿತು.

ದೊಡ್ಡಬಳ್ಳಾಪುರದಲ್ಲಿ ಭಾನುವಾರ ಶಿಯಾಮುಸ್ಲಿಮರು ಬ್ಲೇಡು ಮತ್ತಿತರೆ ಹರಿತ ಆಯುಧಗಳಿಂದ ಎದೆ ಚಚ್ಚಿಕೊಳ್ಳುವ ಮೂಲಕ ರಕ್ತಸಿಕ್ತ ದೇಹವನ್ನು ಹುಸೇನ್‌ ದೇವರಿಗೆ ಅರ್ಪಿಸಿದರು.

ಧರ್ಮಗುರುಗಳು ನೇತೃತ್ವದಲ್ಲಿ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಿದರು.

ಮೊಹರಂ ನಂತರದ 7 ದಿನಕ್ಕೆ ನಡೆಯಲಿರುವ ಈ ಆಚರಣೆಯಲ್ಲಿ ದೇಶದ ವಿವಿಧ ಭಾಗಗಳಿಂದ ಆಗಮಿಸಿದ್ದ ಸಹಸ್ರಾರು ಜನ ಶಿಯಾಮುಸ್ಲಿಮರು ಬ್ಲೇಡು, ಕತ್ತಿ ಮೊದಲಾದ ಹರಿತ ಆಯುಧಗಳಿಂದ ಎದೆ ಚಚ್ಚಿಕೊಳ್ಳುವ ಮೂಲಕ ರಕ್ತಸಿಕ್ತ ದೇಹವನ್ನು ಹುಸೇನ್‌ ದೇವರಿಗೆ ಅರ್ಪಿಸಿದರು.

ನಗರದ ಕೋಟೆ ರಸ್ತೆಯಲ್ಲಿರುವ ಕಿಲ್ಲಾ ಮಸೀದಿಯಲ್ಲಿ ಅಂಜುಮನ್‌ ಎ ಹೈದರಿಯ ಸಂಘಟನೆ ನೇತೃತ್ವದಲ್ಲಿ ಮತ್ತು ಹುಸೇನ್‌ ಕಮಿಟಿ ಸಹಕಾರದಲ್ಲಿ ಮೊಹರಂ ನಡೆಸಲಾಗುತ್ತದೆ.

ಇಮಾಮ್‌ ಹುಸೇನ್‌ ತ್ಯಾಗ ಬಲಿದಾನಗಳನ್ನು ಇಂದು ಸ್ಮರಿಸಲಾಗುತ್ತದೆ. ದಕ್ಷಿಣ ಭಾರತದಲ್ಲಿಯೇ ದೊಡ್ಡಬಳ್ಳಾಪುರ ಈ ಆಚರಣೆ ನಡೆಯುವ ಪ್ರಮುಖ ಸ್ಥಳವಾಗಿದ್ದು, ಇದನ್ನು ಸುಮಾರು 268 ವರ್ಷಗಳಿಂದ ಆಚರಿಸುತ್ತಾ ಬರಲಾಗುತ್ತಿದೆ.

ಇಮಾಮ್ ಹುಸೇನ್ ತ್ಯಾಗ ಬಲಿದಾನವನ್ನು ಇಂದು ಸ್ಮರಿಸಲಾಗುತ್ತದೆ. ಕರ್ನಾಟಕದಲ್ಲಿ ಈ ಆಚರಣೆ ನಡೆಯುವ ಪ್ರಮುಖ ಸ್ಥಳ ದೊಡ್ಡಬಳ್ಳಾಪುರವಾಗಿದೆ. ದೇಶದ ವಿವಿಧ ಮೂಲೆಗಳಿಂದ ಹಾಗೂ ವಿದೇಶಗಳಿಂದಲೂ ಸುಮಾರು 2 ಸಾವಿರಕ್ಕೂ ಹೆಚ್ಚು ಶಿಯಾ ಮುಸ್ಲಿಂ ಸಮುದಾಯದವರು ಆಗಮಿಸಿ ರಕ್ತಸಿಕ್ತ ದೇಹವನ್ನು ಹುಸೇನ್ ದೇವರಿಗೆ ಅರ್ಪಿಸಿ ಹರಕೆ ತೀರಿಸಿದರು.

ಯಾವುದೇ ಅಹಿತಕರ ಘಟನೆ‌ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು.

Ramesh Babu

Journalist

Recent Posts

ರಕ್ಷಾ ಬಂಧನ ಮತ್ತು ಮದರ್ ತೆರೇಸಾ

ಮದರ್‌ ತೆರೇಸಾ - ಆಗಸ್ಟ್ 26, 1910..... ರಸ್ತೆ ಬದಿಯ ಹರಕಲು ಬಟ್ಟೆಯ ಭಿಕ್ಷುಕರನ್ನು ನೋಡಲೇ ಅಸಹ್ಯಪಡುವ ಪರಿಸ್ಥಿತಿ ಇರುವಾಗ…

4 hours ago

ರೈತಪರ ಯೋಜನೆ : ವಿಬಿ-ಜಿ ರಾಮ್ ಜಿ ಯೋಜನೆ

ಚಿಕ್ಕನಾಯಕನಹಳ್ಳಿ: ರೈತರಿಗೆ ಅನುಕೂಲವಾಗಬೇಕೆಂಬ ಉದ್ದೇಶದಿಂದ ಜುಲೈ.1 ರಿಂದ ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ)…

14 hours ago

ಮೂರು ತಾಲೂಕು ಬರದ ಪಟ್ಟಿಗೆ; ದೊಡ್ಡಬಳ್ಳಾಪುರಕ್ಕೆ ವಿನಾಯಿತಿ

ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆ ಕೊರತೆಯಿಂದ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

19 hours ago

ನೇಪಾಳ ದುರಂತ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ಸರ್ಕಾರ ಮನವಿ

ನೇಪಾಳದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪ ಹಾಗೂ ದಿಢೀರ್ ಪ್ರವಾಹ (ಫ್ಲ್ಯಾಶ್ ಫ್ಲಡ್ಸ್) ದುರಂತಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಮೂಲದ ಪ್ರವಾಸಿಗರು ಅಥವಾ…

22 hours ago

ಸ್ಥಳೀಯ ಸಂಸ್ಥೆಗಳಲ್ಲಿ ಚುರುಕಾಗಬೇಕಿದೆ ಬಿಎಂಸಿ: ಕೆರೆ, ಕುಂಟೆ, ಗೋಮಾಳ, ಅರಣ್ಯ ಸಂರಕ್ಷಣೆಗೆ ನಿರ್ಲಕ್ಷ್ಯ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…

2 days ago

ಅಪರೂಪದ ದುಬಾರಿ ಖಾಯಿಲೆಗಳು…….

ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…

3 days ago