ರಕ್ತಸಿಕ್ತ ದೇಹವನ್ನು ಹುಸೇನ್‌ ದೇವರಿಗೆ ಅರ್ಪಿಸಿ ಹರಕೆ ತೀರಿಸಿದ ಶಿಯಾಮುಸ್ಲಿಮರು

ದೊಡ್ಡಬಳ್ಳಾಪುರ: ನಗರದ ಕೋಟೆ ರಸ್ತೆಯಲ್ಲಿರುವ ಕಿಲ್ಲಾ ಮಸೀದಿಯಲ್ಲಿ ಮೊಹರಂ ಅಂಗವಾಗಿ ಹಸೇನ್‌ ಹುಸೇನ್‌ ಆಚರಣೆ ಭಾನುವಾರ ಶ್ರದ್ಧಾಭಕ್ತಿಗಳಿಂದ ನಡೆಯಿತು.

ದೊಡ್ಡಬಳ್ಳಾಪುರದಲ್ಲಿ ಭಾನುವಾರ ಶಿಯಾಮುಸ್ಲಿಮರು ಬ್ಲೇಡು ಮತ್ತಿತರೆ ಹರಿತ ಆಯುಧಗಳಿಂದ ಎದೆ ಚಚ್ಚಿಕೊಳ್ಳುವ ಮೂಲಕ ರಕ್ತಸಿಕ್ತ ದೇಹವನ್ನು ಹುಸೇನ್‌ ದೇವರಿಗೆ ಅರ್ಪಿಸಿದರು.

ಧರ್ಮಗುರುಗಳು ನೇತೃತ್ವದಲ್ಲಿ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಿದರು.

ಮೊಹರಂ ನಂತರದ 7 ದಿನಕ್ಕೆ ನಡೆಯಲಿರುವ ಈ ಆಚರಣೆಯಲ್ಲಿ ದೇಶದ ವಿವಿಧ ಭಾಗಗಳಿಂದ ಆಗಮಿಸಿದ್ದ ಸಹಸ್ರಾರು ಜನ ಶಿಯಾಮುಸ್ಲಿಮರು ಬ್ಲೇಡು, ಕತ್ತಿ ಮೊದಲಾದ ಹರಿತ ಆಯುಧಗಳಿಂದ ಎದೆ ಚಚ್ಚಿಕೊಳ್ಳುವ ಮೂಲಕ ರಕ್ತಸಿಕ್ತ ದೇಹವನ್ನು ಹುಸೇನ್‌ ದೇವರಿಗೆ ಅರ್ಪಿಸಿದರು.

ನಗರದ ಕೋಟೆ ರಸ್ತೆಯಲ್ಲಿರುವ ಕಿಲ್ಲಾ ಮಸೀದಿಯಲ್ಲಿ ಅಂಜುಮನ್‌ ಎ ಹೈದರಿಯ ಸಂಘಟನೆ ನೇತೃತ್ವದಲ್ಲಿ ಮತ್ತು ಹುಸೇನ್‌ ಕಮಿಟಿ ಸಹಕಾರದಲ್ಲಿ ಮೊಹರಂ ನಡೆಸಲಾಗುತ್ತದೆ.

ಇಮಾಮ್‌ ಹುಸೇನ್‌ ತ್ಯಾಗ ಬಲಿದಾನಗಳನ್ನು ಇಂದು ಸ್ಮರಿಸಲಾಗುತ್ತದೆ. ದಕ್ಷಿಣ ಭಾರತದಲ್ಲಿಯೇ ದೊಡ್ಡಬಳ್ಳಾಪುರ ಈ ಆಚರಣೆ ನಡೆಯುವ ಪ್ರಮುಖ ಸ್ಥಳವಾಗಿದ್ದು, ಇದನ್ನು ಸುಮಾರು 268 ವರ್ಷಗಳಿಂದ ಆಚರಿಸುತ್ತಾ ಬರಲಾಗುತ್ತಿದೆ.

ಇಮಾಮ್ ಹುಸೇನ್ ತ್ಯಾಗ ಬಲಿದಾನವನ್ನು ಇಂದು ಸ್ಮರಿಸಲಾಗುತ್ತದೆ. ಕರ್ನಾಟಕದಲ್ಲಿ ಈ ಆಚರಣೆ ನಡೆಯುವ ಪ್ರಮುಖ ಸ್ಥಳ ದೊಡ್ಡಬಳ್ಳಾಪುರವಾಗಿದೆ. ದೇಶದ ವಿವಿಧ ಮೂಲೆಗಳಿಂದ ಹಾಗೂ ವಿದೇಶಗಳಿಂದಲೂ ಸುಮಾರು 2 ಸಾವಿರಕ್ಕೂ ಹೆಚ್ಚು ಶಿಯಾ ಮುಸ್ಲಿಂ ಸಮುದಾಯದವರು ಆಗಮಿಸಿ ರಕ್ತಸಿಕ್ತ ದೇಹವನ್ನು ಹುಸೇನ್ ದೇವರಿಗೆ ಅರ್ಪಿಸಿ ಹರಕೆ ತೀರಿಸಿದರು.

ಯಾವುದೇ ಅಹಿತಕರ ಘಟನೆ‌ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು.

Ramesh Babu

Journalist

Recent Posts

ಬಿಜೆಪಿ – ಕಾಂಗ್ರೆಸ್ ನಡುವೆ SIR ಫೈಟ್: ಕಾಂಗ್ರೆಸ್ ನಾಯಕರ ವಿರುದ್ಧ ಸಂಸದ ಡಾ.ಕೆ.ಸುಧಾಕರ್ ಕಿಡಿ

ಬೆಂಗಳೂರು ಗ್ರಾಮಾಂತರ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ರಾಜಕೀಯ…

1 hour ago

ನಗರಸಭೆ ಉಪಾಧ್ಯಕ್ಷರಾಗಿ ವೆಂಕಟೇಶ್(ಬಂತಿ) ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷರಾಗಿ ವೆಂಕಟೇಶ್(ಬಂತಿ) ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷ ಸ್ಥಾನಕ್ಕೆ ಮಲ್ಲೇಶ್ ರಾಜೀನಾಮೆ ನೀಡಿದ್ದು, ತೆರವಾದ ಸ್ಥಾನಕ್ಕೆ…

4 hours ago

ಸ್ಪರ್ಶ್ ಆಸ್ಪತ್ರೆ ಹೆಣ್ಣೂರು ಒಂದು ವರ್ಷ ಪೂರ್ಣಗೊಳಿಸಿದೆ .ಉತ್ತರ ಬೆಂಗಳೂರಿನಲ್ಲಿ ಸಮಗ್ರ ಮಲ್ಟಿಸ್ಪೆಷಾಲಿಟಿ ಆರೈಕೆಯ ಹೆಚ್ಚುತ್ತಿರುವ ಅಗತ್ಯವನ್ನು ಪ್ರತಿಬಿಂಬಿಸುತ್ತದೆ

ಸ್ಪರ್ಶ್ ಆಸ್ಪತ್ರೆ, ಹೆಣ್ಣೂರು ತನ್ನ ಕಾರ್ಯಾಚರಣೆಯ ಒಂದು ವರ್ಷವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಆಸ್ಪತ್ರೆಯ ಮೊದಲ ವರ್ಷದ ಕ್ಲಿನಿಕಲ್ ಅಂಕಿಅಂಶಗಳು ಉತ್ತರ…

6 hours ago

ಮತ್ತೆ ಪೆಟ್ರೋಲ್, ಡೀಸೆಲ್ ದರ ಏರಿಕೆ: ದರ‌‌ ಪಟ್ಟಿ‌ ಇಲ್ಲಿದೆ ನೋಡಿ

ನವದೆಹಲಿ: ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರಗಳು ಮತ್ತೆ ಏರಿಕೆಯಾಗಿದ್ದು, ವಾಹನ ಸವಾರರಿಗೆ ಮತ್ತೊಂದು ಹೊರೆ ಬಿದ್ದಿದೆ. ಕೇಂದ್ರ ಸರ್ಕಾರ…

10 hours ago

“ಕಾಂಗ್ರೆಸ್ ನಡೆ – ಮತ ರಕ್ಷಣೆಯ ಕಡೆ”: ಕೆಪಿಸಿಸಿ ವತಿಯಿಂದ ಮಹತ್ವದ ಕಾರ್ಯಾಗಾರ: ಸಿಎಂ, ಡಿಸಿಎಂ‌ ಭಾಗಿ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯು ಚಿಕ್ಕಬಳ್ಳಾಪುರದ ನಂದಿಬೆಟ್ಟ ರಸ್ತೆಯ ಖಾಸಗಿ ಹೋಟೆಲ್‌ನಲ್ಲಿ‌ ಆಯೋಜಿಸಿದ್ದ "ಕಾಂಗ್ರೆಸ್ ನಡೆ-ಮತ ರಕ್ಷಣೆಯ ಕಡೆ" ಜಾಗೃತ…

13 hours ago

1 ವರ್ಷ 4 ತಿಂಗಳ ಮಗುವಿನ ಕಣ್ಣು ದಾನ: ಸಾವಿನಲ್ಲೂ ಮಾನವೀಯತೆ ಮೆರೆದ ಕುಟುಂಬ

ದೊಡ್ಡಬಳ್ಳಾಪುರ: ನಗರದ ದೇವರಾಜನಗರ ನಿವಾಸಿಗಳಾದ ಭರತ್ ಅವರ 1 ವರ್ಷ 4 ತಿಂಗಳ ಮಗ ಪೋಷಕ್ ಆರೋಗ್ಯದ ವ್ಯತ್ಯಯದಿಂದ ವಿಧಿವಶರಾದ…

2 days ago