ದೊಡ್ಡಬಳ್ಳಾಪುರ: ನಗರದ ಕೋಟೆ ರಸ್ತೆಯಲ್ಲಿರುವ ಕಿಲ್ಲಾ ಮಸೀದಿಯಲ್ಲಿ ಮೊಹರಂ ಅಂಗವಾಗಿ ಹಸೇನ್ ಹುಸೇನ್ ಆಚರಣೆ ಭಾನುವಾರ ಶ್ರದ್ಧಾಭಕ್ತಿಗಳಿಂದ ನಡೆಯಿತು.
ದೊಡ್ಡಬಳ್ಳಾಪುರದಲ್ಲಿ ಭಾನುವಾರ ಶಿಯಾಮುಸ್ಲಿಮರು ಬ್ಲೇಡು ಮತ್ತಿತರೆ ಹರಿತ ಆಯುಧಗಳಿಂದ ಎದೆ ಚಚ್ಚಿಕೊಳ್ಳುವ ಮೂಲಕ ರಕ್ತಸಿಕ್ತ ದೇಹವನ್ನು ಹುಸೇನ್ ದೇವರಿಗೆ ಅರ್ಪಿಸಿದರು.
ಧರ್ಮಗುರುಗಳು ನೇತೃತ್ವದಲ್ಲಿ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಿದರು.
ಮೊಹರಂ ನಂತರದ 7 ದಿನಕ್ಕೆ ನಡೆಯಲಿರುವ ಈ ಆಚರಣೆಯಲ್ಲಿ ದೇಶದ ವಿವಿಧ ಭಾಗಗಳಿಂದ ಆಗಮಿಸಿದ್ದ ಸಹಸ್ರಾರು ಜನ ಶಿಯಾಮುಸ್ಲಿಮರು ಬ್ಲೇಡು, ಕತ್ತಿ ಮೊದಲಾದ ಹರಿತ ಆಯುಧಗಳಿಂದ ಎದೆ ಚಚ್ಚಿಕೊಳ್ಳುವ ಮೂಲಕ ರಕ್ತಸಿಕ್ತ ದೇಹವನ್ನು ಹುಸೇನ್ ದೇವರಿಗೆ ಅರ್ಪಿಸಿದರು.
ನಗರದ ಕೋಟೆ ರಸ್ತೆಯಲ್ಲಿರುವ ಕಿಲ್ಲಾ ಮಸೀದಿಯಲ್ಲಿ ಅಂಜುಮನ್ ಎ ಹೈದರಿಯ ಸಂಘಟನೆ ನೇತೃತ್ವದಲ್ಲಿ ಮತ್ತು ಹುಸೇನ್ ಕಮಿಟಿ ಸಹಕಾರದಲ್ಲಿ ಮೊಹರಂ ನಡೆಸಲಾಗುತ್ತದೆ.
ಇಮಾಮ್ ಹುಸೇನ್ ತ್ಯಾಗ ಬಲಿದಾನಗಳನ್ನು ಇಂದು ಸ್ಮರಿಸಲಾಗುತ್ತದೆ. ದಕ್ಷಿಣ ಭಾರತದಲ್ಲಿಯೇ ದೊಡ್ಡಬಳ್ಳಾಪುರ ಈ ಆಚರಣೆ ನಡೆಯುವ ಪ್ರಮುಖ ಸ್ಥಳವಾಗಿದ್ದು, ಇದನ್ನು ಸುಮಾರು 268 ವರ್ಷಗಳಿಂದ ಆಚರಿಸುತ್ತಾ ಬರಲಾಗುತ್ತಿದೆ.
ಇಮಾಮ್ ಹುಸೇನ್ ತ್ಯಾಗ ಬಲಿದಾನವನ್ನು ಇಂದು ಸ್ಮರಿಸಲಾಗುತ್ತದೆ. ಕರ್ನಾಟಕದಲ್ಲಿ ಈ ಆಚರಣೆ ನಡೆಯುವ ಪ್ರಮುಖ ಸ್ಥಳ ದೊಡ್ಡಬಳ್ಳಾಪುರವಾಗಿದೆ. ದೇಶದ ವಿವಿಧ ಮೂಲೆಗಳಿಂದ ಹಾಗೂ ವಿದೇಶಗಳಿಂದಲೂ ಸುಮಾರು 2 ಸಾವಿರಕ್ಕೂ ಹೆಚ್ಚು ಶಿಯಾ ಮುಸ್ಲಿಂ ಸಮುದಾಯದವರು ಆಗಮಿಸಿ ರಕ್ತಸಿಕ್ತ ದೇಹವನ್ನು ಹುಸೇನ್ ದೇವರಿಗೆ ಅರ್ಪಿಸಿ ಹರಕೆ ತೀರಿಸಿದರು.
ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು.
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಲಕ್ಷ್ಮೀಪುರ ಗೇಟ್ ಸಮೀಪದ ರಾಷ್ಟ್ರೀಯ ಹೆದ್ದಾರಿ–648ರಲ್ಲಿ ಲಾರಿ ಚಾಲಕನ ಅಜಾಗರೂಕತೆಯಿಂದ ಭೀಕರ…
ಬೆಂಗಳೂರು ಗ್ರಾಮಾಂತರ: ಮುಂಗಾರು ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ ರೈತರಿಗೆ ಯೂರಿಯಾ ರಸಗೊಬ್ಬರ ವಿತರಣೆಯಲ್ಲಿ ಹೊಸ ನಿಯಮ ಜಾರಿಯಾಗಿದೆ. ಯೂರಿಯಾ…
ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…
ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…