ಮುಂಗಾರು ಮಳೆ ಕೊರತೆಯಿಂದ ರಾಜ್ಯದಲ್ಲಿ ಬರಗಾಲ ಆವರಿಸಿದೆ. ಕೆರೆ, ಕುಂಟೆ, ಅಣೆಕಟ್ಟುಗಳಲ್ಲಿ ನೀರಿಲ್ಲದೇ ಬತ್ತಿಹೋಗಿವೆ. ಇಂತಹ ಸಂದರ್ಭದಲ್ಲಿ ತಮಿಳುನಾಡಿಗೆ ನೀರು ಬಿಡುತ್ತಿರುವುದು ಖಂಡನೀಯ ಎಂದು ಕರ್ನಾಟಕ ರಾಜರತ್ನ ರಕ್ಷಣಾ ವೇದಿಕೆ ಕಾರ್ಯಾಧ್ಯಕ್ಷ ಬಿ.ಎನ್.ಮಂಜುನಾಥ್ ಹೇಳಿದರು.
ನಗರದ ಡಿ.ಕ್ರಾಸ್ ವೃತ್ತದ ಬಳಿ ಕರಾರವೇ ವತಿಯಿಂದ ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನ ವಿರೋಧಿಸಿ ನಡೆದ ರಸ್ತೆ ತಡೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರ ತಮಿಳುನಾಡಿಗೆ ಕಾವೇರಿ ನೀರು ಹರಿಸಿ ಅನ್ಯಾಯ ಮಾಡುತ್ತಿದೆ. ಕರ್ನಾಟಕದ ಜನತೆಗೆ ಕುಡಿಯಲು ನೀರು ಇಲ್ಲದಿದ್ದರೂ ನಮಗೆ ನೀರು ಕೊಡಿ ಎಂದು ತಮಿಳುನಾಡು ಸರ್ಕಾರವು ಉದ್ಧಟತನ ಪ್ರದರ್ಶಿಸುತ್ತಿದೆ ಎಂದು ಆರೋಪಿಸಿದರು.
ರಾಜ್ಯದ ರಾಜಕಾರಣಿಗಳು ಸಹ ವೋಟ್ ಬ್ಯಾಂಕ್ ಗಾಗಿ ತಮಿಳುನಾಡಿಗೆ ಕಾವೇರಿ ನೀರನ್ನ ಬಿಡಲಾಗುತ್ತಿದೆ. ಇದರಿಂದ ಮಂಡ್ಯ, ಮೈಸೂರು ಭಾಗದ ರೈತರ ವ್ಯವಸಾಯಕ್ಕೆ ಹಾಗೂ ಬೆಂಗಳೂರಿನ ಜನರಿಗೆ ಕುಡಿಯುವ ನೀರಿಗಾಗಿ ಪರದಾಡುವಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ರಾಜ್ಯಾಧ್ಯಕ್ಷ ಡಿ.ಜಿ.ಬಾಬು, ಪ್ರಧಾನ ಕಾರ್ಯದರ್ಶಿ ಆರ್.ಮೋಹನ್, ರಾಜ್ಯ ಉಪಾಧ್ಯಕ್ಷ ಸಿ.ಜಿ.ಮಂಜುನಾಥ್, ಸಂಘಟನೆ ಮುಖಂಡರಾದ ಮುನಿರಾಜು, ವರದರಾಜು, ಕೃಷ್ಣಗೌಡ, ರಾಮಾಂಜಿನಪ್ಪ, ರಾಘವೇಂದ್ರ, ಸುನಿಲ್ ಗೌಡ, ಮಂಜುನಾಥ್,ಹೆಚ್ ಪದ್ಮ, ಚಂದನ್, ಅನಿಲ್ ಗೌಡ, ಗಂಗಾಧರ್, ಭಾನು ಪ್ರಕಾಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…
ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಭಾನುವಾರ ಸೂಸುತ್ರವಾಗಿ ಪೂರ್ಣಗೊಂಡಿದೆ. ರಾಜ್ಯ ಚುನಾವಣಾ ಆಯೋಗ, ಜಿಲ್ಲಾಡಳಿತ, ತಾಲೂಕು ಆಡಳಿತ, ಬಾಶೆಟ್ಟಿಹಳ್ಳಿ…
ಒಂಟಿ ಮನೆ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಊರಿನ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಇಂದು…
ಯಲಹಂಕ ತಾಲೂಕಿನ ಜಾಲ ಹೋಬಳಿಯ ಚಿಕ್ಕಜಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಎ.ಸಿ. ಗೋವಿಂದಪ್ಪ ಅವಿರೋಧವಾಗಿ…