ಮುಂಗಾರು ಮಳೆ ಕೊರತೆಯಿಂದ ರಾಜ್ಯದಲ್ಲಿ ಬರಗಾಲ ಆವರಿಸಿದೆ. ಕೆರೆ, ಕುಂಟೆ, ಅಣೆಕಟ್ಟುಗಳಲ್ಲಿ ನೀರಿಲ್ಲದೇ ಬತ್ತಿಹೋಗಿವೆ. ಇಂತಹ ಸಂದರ್ಭದಲ್ಲಿ ತಮಿಳುನಾಡಿಗೆ ನೀರು ಬಿಡುತ್ತಿರುವುದು ಖಂಡನೀಯ ಎಂದು ಕರ್ನಾಟಕ ರಾಜರತ್ನ ರಕ್ಷಣಾ ವೇದಿಕೆ ಕಾರ್ಯಾಧ್ಯಕ್ಷ ಬಿ.ಎನ್.ಮಂಜುನಾಥ್ ಹೇಳಿದರು.
ನಗರದ ಡಿ.ಕ್ರಾಸ್ ವೃತ್ತದ ಬಳಿ ಕರಾರವೇ ವತಿಯಿಂದ ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನ ವಿರೋಧಿಸಿ ನಡೆದ ರಸ್ತೆ ತಡೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರ ತಮಿಳುನಾಡಿಗೆ ಕಾವೇರಿ ನೀರು ಹರಿಸಿ ಅನ್ಯಾಯ ಮಾಡುತ್ತಿದೆ. ಕರ್ನಾಟಕದ ಜನತೆಗೆ ಕುಡಿಯಲು ನೀರು ಇಲ್ಲದಿದ್ದರೂ ನಮಗೆ ನೀರು ಕೊಡಿ ಎಂದು ತಮಿಳುನಾಡು ಸರ್ಕಾರವು ಉದ್ಧಟತನ ಪ್ರದರ್ಶಿಸುತ್ತಿದೆ ಎಂದು ಆರೋಪಿಸಿದರು.
ರಾಜ್ಯದ ರಾಜಕಾರಣಿಗಳು ಸಹ ವೋಟ್ ಬ್ಯಾಂಕ್ ಗಾಗಿ ತಮಿಳುನಾಡಿಗೆ ಕಾವೇರಿ ನೀರನ್ನ ಬಿಡಲಾಗುತ್ತಿದೆ. ಇದರಿಂದ ಮಂಡ್ಯ, ಮೈಸೂರು ಭಾಗದ ರೈತರ ವ್ಯವಸಾಯಕ್ಕೆ ಹಾಗೂ ಬೆಂಗಳೂರಿನ ಜನರಿಗೆ ಕುಡಿಯುವ ನೀರಿಗಾಗಿ ಪರದಾಡುವಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ರಾಜ್ಯಾಧ್ಯಕ್ಷ ಡಿ.ಜಿ.ಬಾಬು, ಪ್ರಧಾನ ಕಾರ್ಯದರ್ಶಿ ಆರ್.ಮೋಹನ್, ರಾಜ್ಯ ಉಪಾಧ್ಯಕ್ಷ ಸಿ.ಜಿ.ಮಂಜುನಾಥ್, ಸಂಘಟನೆ ಮುಖಂಡರಾದ ಮುನಿರಾಜು, ವರದರಾಜು, ಕೃಷ್ಣಗೌಡ, ರಾಮಾಂಜಿನಪ್ಪ, ರಾಘವೇಂದ್ರ, ಸುನಿಲ್ ಗೌಡ, ಮಂಜುನಾಥ್,ಹೆಚ್ ಪದ್ಮ, ಚಂದನ್, ಅನಿಲ್ ಗೌಡ, ಗಂಗಾಧರ್, ಭಾನು ಪ್ರಕಾಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…
ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…