ಮುಂಗಾರು ಮಳೆ ಕೊರತೆಯಿಂದ ರಾಜ್ಯದಲ್ಲಿ ಬರಗಾಲ ಆವರಿಸಿದೆ. ಕೆರೆ, ಕುಂಟೆ, ಅಣೆಕಟ್ಟುಗಳಲ್ಲಿ ನೀರಿಲ್ಲದೇ ಬತ್ತಿಹೋಗಿವೆ. ಇಂತಹ ಸಂದರ್ಭದಲ್ಲಿ ತಮಿಳುನಾಡಿಗೆ ನೀರು ಬಿಡುತ್ತಿರುವುದು ಖಂಡನೀಯ ಎಂದು ಕರ್ನಾಟಕ ರಾಜರತ್ನ ರಕ್ಷಣಾ ವೇದಿಕೆ ಕಾರ್ಯಾಧ್ಯಕ್ಷ ಬಿ.ಎನ್.ಮಂಜುನಾಥ್ ಹೇಳಿದರು.
ನಗರದ ಡಿ.ಕ್ರಾಸ್ ವೃತ್ತದ ಬಳಿ ಕರಾರವೇ ವತಿಯಿಂದ ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನ ವಿರೋಧಿಸಿ ನಡೆದ ರಸ್ತೆ ತಡೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರ ತಮಿಳುನಾಡಿಗೆ ಕಾವೇರಿ ನೀರು ಹರಿಸಿ ಅನ್ಯಾಯ ಮಾಡುತ್ತಿದೆ. ಕರ್ನಾಟಕದ ಜನತೆಗೆ ಕುಡಿಯಲು ನೀರು ಇಲ್ಲದಿದ್ದರೂ ನಮಗೆ ನೀರು ಕೊಡಿ ಎಂದು ತಮಿಳುನಾಡು ಸರ್ಕಾರವು ಉದ್ಧಟತನ ಪ್ರದರ್ಶಿಸುತ್ತಿದೆ ಎಂದು ಆರೋಪಿಸಿದರು.
ರಾಜ್ಯದ ರಾಜಕಾರಣಿಗಳು ಸಹ ವೋಟ್ ಬ್ಯಾಂಕ್ ಗಾಗಿ ತಮಿಳುನಾಡಿಗೆ ಕಾವೇರಿ ನೀರನ್ನ ಬಿಡಲಾಗುತ್ತಿದೆ. ಇದರಿಂದ ಮಂಡ್ಯ, ಮೈಸೂರು ಭಾಗದ ರೈತರ ವ್ಯವಸಾಯಕ್ಕೆ ಹಾಗೂ ಬೆಂಗಳೂರಿನ ಜನರಿಗೆ ಕುಡಿಯುವ ನೀರಿಗಾಗಿ ಪರದಾಡುವಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ರಾಜ್ಯಾಧ್ಯಕ್ಷ ಡಿ.ಜಿ.ಬಾಬು, ಪ್ರಧಾನ ಕಾರ್ಯದರ್ಶಿ ಆರ್.ಮೋಹನ್, ರಾಜ್ಯ ಉಪಾಧ್ಯಕ್ಷ ಸಿ.ಜಿ.ಮಂಜುನಾಥ್, ಸಂಘಟನೆ ಮುಖಂಡರಾದ ಮುನಿರಾಜು, ವರದರಾಜು, ಕೃಷ್ಣಗೌಡ, ರಾಮಾಂಜಿನಪ್ಪ, ರಾಘವೇಂದ್ರ, ಸುನಿಲ್ ಗೌಡ, ಮಂಜುನಾಥ್,ಹೆಚ್ ಪದ್ಮ, ಚಂದನ್, ಅನಿಲ್ ಗೌಡ, ಗಂಗಾಧರ್, ಭಾನು ಪ್ರಕಾಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…
ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…
ಚಿಕ್ಕಬಳ್ಳಾಪುರ- ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…
ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…
ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು–ಆರೂಢಿ ಭಾಗದ ಜನರ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಗುಂಡಮಗೆರೆ–ಹೊಸಹಳ್ಳಿ ರಸ್ತೆಗೆ ಕೊನೆಗೂ ಡಾಂಬರೀಕರಣ ಕಾಮಗಾರಿ ಆರಂಭವಾಗಿದ್ದು, ಗ್ರಾಮಸ್ಥರಲ್ಲಿ…