ಮುಂಗಾರು ಮಳೆ ಕೊರತೆಯಿಂದ ರಾಜ್ಯದಲ್ಲಿ ಬರಗಾಲ ಆವರಿಸಿದೆ. ಕೆರೆ, ಕುಂಟೆ, ಅಣೆಕಟ್ಟುಗಳಲ್ಲಿ ನೀರಿಲ್ಲದೇ ಬತ್ತಿಹೋಗಿವೆ. ಇಂತಹ ಸಂದರ್ಭದಲ್ಲಿ ತಮಿಳುನಾಡಿಗೆ ನೀರು ಬಿಡುತ್ತಿರುವುದು ಖಂಡನೀಯ ಎಂದು ಕರ್ನಾಟಕ ರಾಜರತ್ನ ರಕ್ಷಣಾ ವೇದಿಕೆ ಕಾರ್ಯಾಧ್ಯಕ್ಷ ಬಿ.ಎನ್.ಮಂಜುನಾಥ್ ಹೇಳಿದರು.
ನಗರದ ಡಿ.ಕ್ರಾಸ್ ವೃತ್ತದ ಬಳಿ ಕರಾರವೇ ವತಿಯಿಂದ ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನ ವಿರೋಧಿಸಿ ನಡೆದ ರಸ್ತೆ ತಡೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರ ತಮಿಳುನಾಡಿಗೆ ಕಾವೇರಿ ನೀರು ಹರಿಸಿ ಅನ್ಯಾಯ ಮಾಡುತ್ತಿದೆ. ಕರ್ನಾಟಕದ ಜನತೆಗೆ ಕುಡಿಯಲು ನೀರು ಇಲ್ಲದಿದ್ದರೂ ನಮಗೆ ನೀರು ಕೊಡಿ ಎಂದು ತಮಿಳುನಾಡು ಸರ್ಕಾರವು ಉದ್ಧಟತನ ಪ್ರದರ್ಶಿಸುತ್ತಿದೆ ಎಂದು ಆರೋಪಿಸಿದರು.
ರಾಜ್ಯದ ರಾಜಕಾರಣಿಗಳು ಸಹ ವೋಟ್ ಬ್ಯಾಂಕ್ ಗಾಗಿ ತಮಿಳುನಾಡಿಗೆ ಕಾವೇರಿ ನೀರನ್ನ ಬಿಡಲಾಗುತ್ತಿದೆ. ಇದರಿಂದ ಮಂಡ್ಯ, ಮೈಸೂರು ಭಾಗದ ರೈತರ ವ್ಯವಸಾಯಕ್ಕೆ ಹಾಗೂ ಬೆಂಗಳೂರಿನ ಜನರಿಗೆ ಕುಡಿಯುವ ನೀರಿಗಾಗಿ ಪರದಾಡುವಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ರಾಜ್ಯಾಧ್ಯಕ್ಷ ಡಿ.ಜಿ.ಬಾಬು, ಪ್ರಧಾನ ಕಾರ್ಯದರ್ಶಿ ಆರ್.ಮೋಹನ್, ರಾಜ್ಯ ಉಪಾಧ್ಯಕ್ಷ ಸಿ.ಜಿ.ಮಂಜುನಾಥ್, ಸಂಘಟನೆ ಮುಖಂಡರಾದ ಮುನಿರಾಜು, ವರದರಾಜು, ಕೃಷ್ಣಗೌಡ, ರಾಮಾಂಜಿನಪ್ಪ, ರಾಘವೇಂದ್ರ, ಸುನಿಲ್ ಗೌಡ, ಮಂಜುನಾಥ್,ಹೆಚ್ ಪದ್ಮ, ಚಂದನ್, ಅನಿಲ್ ಗೌಡ, ಗಂಗಾಧರ್, ಭಾನು ಪ್ರಕಾಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಇಂದು ಬೆಂಗಳೂರಿನ ಮಡಿವಾಳದಲ್ಲಿರುವ ಎಫ್ಎಸ್ಎಲ್ ಕಚೇರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಪರಿಶೀಲನಾ ಸಭೆ ನಡೆಸಿದರು. ಈ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…
ದೊಡ್ಡಬಳ್ಳಾಪುರ: ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ನೀಡಲಾಗುವ ಪ್ರತಿಷ್ಠಿತ 2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ…
ದೇವನಹಳ್ಳಿ: ಕೆಂಪೇಗೌಡರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ಕೆಲ ದಿನಗಳಲ್ಲಿ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಗಳಲ್ಲಿ ಮಾದಕ ವಸ್ತುಗಳು…
ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ರೌಡಿ ಶೀಟರ್ ಖಲೀಮ್ (35)…