ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು.
ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ ಹಿನ್ನೆಲೆ ಇಂದು ರಾಜ್ಯದ ಹಲವು ಭಾಗಗಳಲ್ಲಿ ಆಲಿಕಲ್ಲು, ಗುಡುಗು, ಮಿಂಚು ಸಹಿತ ಮಳೆ ಆಗಿದೆ. ಕಳೆದ ಕೆಲವು ದಿನಗಳಿಂದ ವಾತಾವರಣದಲ್ಲಿ ಏರಿಕೆಯಾಗಿದ್ದ ಉಷ್ಣಾಂಶವು ಹದವಾದ ಮಳೆಗೆ ತಂಪಾಯಿತು.
ಮಂಗಳವಾರ ಸಂಜೆ ದಿಢೀರ್ ಸುರಿದ ಮಳೆಯಿಂದ ಜನ ಹರ್ಷಗೊಂಡರು. ಕೆಲವರು ಮಳೆಯಲ್ಲಿ ನೆನೆದರೆ, ಹಲವರು ಮಳೆಯಿಂದ ಮಳೆ ಹನಿಗಳಿಂದ ತಪ್ಪಿಸಿಕೊಳ್ಳಲು ಸೂರು ಹುಡುಕಾಡಿದರು.
ಗ್ರಾಮೀಣ ಪ್ರದೇಶಗಳಲ್ಲಿ ಬಿದ್ದಿರುವ ಮಳೆಯು ರೈತರಲ್ಲಿ ಹರ್ಷ ತರಿಸಿದೆ. ಮುಂಗಾರು ಪೂರ್ವದ ಮಳೆಯ ಆರ್ಭಟ ತುಸು ಜೋರಾಗಿಯೇ ಇತ್ತು. ಗುಡುಗು, ಮಿಂಚುಗಳ ಜತೆಗೆ ಆರ್ಭಟಿಸಿದ ಸಿಡಿಲುಗಳಿಂದ ಮಕ್ಕಳು ಬೆದರಿದರು.
ತುಂತುರು ಮಳೆಗೆ ನೆನೆದ ಭೂಮಿಯ ಮಣ್ಣಿನ ಸುವಾಸನೆ ಮೂಗನ್ನು ಪುಳಕಗೊಳಿಸಿತು.
ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…
ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…
ಕಾನೂನು ರಕ್ಷಕನೇ ಭಕ್ಷಕನಾದರೆ ಸಾಮಾನ್ಯ ಜನರ ಗತಿ ಏನು? ದೂರು ನೀಡಲು ಬಂದವರನ್ನೇ ಲೈಂಗಿಕವಾಗಿ ಬಳಸಿಕೊಳ್ಳುವ ಕಾಮುಕ ಪೊಲೀಸ್ ಅಧಿಕಾರಿಯೊಬ್ಬನ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಅಲಸಹಳ್ಳಿ ಗೇಟ್ ಸಮೀಪದ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನೊಬ್ಬನ ಶವ…
ಭಾರತ ಸಾಹಿತ್ಯದ ನೊಬೆಲ್ ಎಂದೇ ಹೆಸರಾದ ಜ್ಞಾನಪೀಠ ಪ್ರಶಸ್ತಿ ಸಾಹಿತ್ಯ ಕ್ಷೇತ್ರದ ಅತ್ಯುನ್ನತ ಪ್ರಶಸ್ತಿ ಮಾತ್ರವಲ್ಲ, ಅದನ್ನು ಪಡೆದ ವ್ಯಕ್ತಿಗಳು…